ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ ಕಾರಣ ಕತ್ತಲಲ್ಲಿ ಎದುರು ಅಪಘಾತ ಸಂಭವಿಸಿ ಯುವಕರಿಬ್ಬರು ದುರ್ಮರಣ ಹೊಂದಿದ್ದಾರೆ ಎಂದು ಮೃತರ ಸಂಬಂಧಿಕರು ಆರೋಪಿಸಿದ್ದರು. ಈ ಕುರಿತು ಪಬ್ಲಿಕ್ ಮಿರ್ಚಿ ವರದಿ ಮಾಡಿತ್ತು.‌ ವರದಿ ಬೆನ್ನಲ್ಲೇ ಕೂಡಲೇ ಎಚ್ಚೆತ್ತ ನಗರಸಭೆ ಅಧಿಕಾರಿಗಳು ಬೀದಿ ದೀಪ ಸರಿಪಡಿಸಿ, ನೂತನವಾಗಿ ಬಲ್ಬ್ ಅಳವಡಿಸುವ ಕೆಲಸ ನಡೆಸಲಾಗುತ್ತಿದೆ…

ಘಟನೆ ವಿವರ

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಏ.25 ರಾತ್ರಿ ಸುಮಾರು 11:30ರಲ್ಲಿ ದೊಡ್ಡಬಳ್ಳಾಪುರ ನಗರದ ಕೋರ್ಟ್ ರಸ್ತೆಯಲ್ಲಿ ನಡೆದಿದೆ…

ಚಿಕ್ಕಬಳ್ಳಾಪುರದ ಮಂಚೇನಹಳ್ಳಿ ಠಾಣಾ ವ್ಯಾಪ್ತಿಯ‌ ನಾಮಗೊಂಡ್ಲು ಗ್ರಾಮದ ನಾಗೇಶ್ (29) ಸ್ಥಳದಲ್ಲೇ ಸಾವು, ಮಂಡ್ಯ ಜಿಲ್ಲೆಯ ಪಾಂಡುಪುರ ತಾಲೂಕಿನ ಅರಳುಗುಪ್ಪೆ ಗ್ರಾಮದ ಮನೋಜ್ (24) ಆಸ್ಪತ್ರೆಯಲ್ಲಿ ಸಾವು.

ಬೈಕ್ ಸವಾರರು ಹೆಲ್ಮೆಟ್ ಧರಿಸದ ಕಾರಣ ತಲೆಗೆ ತೀವ್ರ ಪೆಟ್ಟಾಗಿ ರಕ್ತ ಸ್ರಾವದಿಂದ ಸಾವನ್ನಪ್ಪಿದ್ದರು.

 

ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Ramesh Babu

Journalist

Recent Posts

ತಿಪ್ಪೂರು ವಿಎಸ್ ಎಸ್ ಎನ್ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪೂರು ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ ನೂತನ ಅಧ್ಯಕ್ಷರಾಗಿ…

1 hour ago

ಹಕ್ಕಿಜ್ವರ ಶಂಕೆ: ನವಿಲುಗಳ ಮಾರಣ ಹೋಮ…

ನೆಲಮಂಗಲ: ನೆಲಮಂಗಲದಲ್ಲಿ ನವಿಲುಗಳ ಸಾಮೂಹಿಕ ಸಾವು ಪ್ರಕರಣ ಬೆಳಕಿಗೆ ಬಂದಿದೆ. ಹಕ್ಕಿಜ್ವರ (Bird Flu)ಶಂಕೆಯಿಂದ ಸುಮಾರು 10-15 ನವಿಲುಗಳು ಸಾವನ್ನಪ್ಪಿದ…

2 hours ago

ಮೇ.21ಕ್ಕೆ ಭೂಸ್ವಾಧೀನ ವಿರೋಧಿಸಿ ಡಿಸಿ ಕಚೇರಿಗೆ ಟ್ರ್ಯಾಕರ್ ಮೆರವಣಿಗೆ

ದೊಡ್ಡಬೆಳವಂಗಲ ಹೋಬಳಿಯ 2100 ಎಕರೆಯ ಭೂಸ್ವಾಧೀನ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿಗೆ ದೊಡ್ಡಬೆಳವಂಗಲ,‌ ಚಿಕ್ಕಬೆಳವಂಗಲ, ಸೊಣ್ಣೇನಹಳ್ಳಿ, ರಾಂಪುರ, ನಾರನಹಳ್ಳಿ ಗ್ರಾಮಗಳ ರೈತರಿಂದ…

3 hours ago

ಸ್ನೇಹಿತನ ಬರ್ತಡೇ ಪಾರ್ಟಿಗೆ ಬಂದಿದ್ದ ಯುವಕ ಈಜುಕೊಳಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಸ್ನೇಹಿತನ ಬರ್ತಡೇ ಪಾರ್ಟಿಗೆಂದು ಖಾಸಗಿ ರೆಸಾರ್ಟ್‌ಗೆ ಬಂದಿದ್ದ ಯುವಕನೊಬ್ಬ ನಿದ್ದೆಗಣ್ಣಿನಲ್ಲಿ ಈಜುಕೊಳಕ್ಕೆ ಬಿದ್ದು ಮೃತಪಟ್ಟ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…

5 hours ago

ದಶಕಗಳುರುಳಿದರೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಿಲ್ಲ ಜಿಲ್ಲಾ ಕೇಂದ್ರ

ರಾಜ್ಯ ರಾಜಧಾನಿ ಬೆಂಗಳೂರಿಗೆ ಪಕ್ಕದಲ್ಲೇ ಇರುವ ಜಿಲ್ಲೆ ಎಂದರೆ ಅದು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಕೈಗಾರಿಕಾ ಬೆಳವಣಿಗೆ, ವೇಗವಾದ ನಗರೀಕರಣ,…

15 hours ago

ದೇವೇಗೌಡರ ವ್ಯಕ್ತಿತ್ವವನ್ನು ವಿಮರ್ಶೆಗೆ ಒಳಪಡಿಸುವುದು ಸಹ ಅಷ್ಟೇ ಸಂಕೀರ್ಣ….

ಸನ್ಮಾನ್ಯ ಶ್ರೀ ಎಚ್. ಡಿ. ದೇವೇಗೌಡ,... 94, ನಾಟ್ ಔಟ್, ಶತಕಕ್ಕೆ 6 ಮಾತ್ರ ಬಾಕಿ, ಅವರು ಶತಕವನ್ನು ಪೂರೈಸಲಿ…

15 hours ago