ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ ಕಾರಣ ಕತ್ತಲಲ್ಲಿ ಎದುರು ಅಪಘಾತ ಸಂಭವಿಸಿ ಯುವಕರಿಬ್ಬರು ದುರ್ಮರಣ ಹೊಂದಿದ್ದಾರೆ ಎಂದು ಮೃತರ ಸಂಬಂಧಿಕರು ಆರೋಪಿಸಿದ್ದರು. ಈ ಕುರಿತು ಪಬ್ಲಿಕ್ ಮಿರ್ಚಿ ವರದಿ ಮಾಡಿತ್ತು.‌ ವರದಿ ಬೆನ್ನಲ್ಲೇ ಕೂಡಲೇ ಎಚ್ಚೆತ್ತ ನಗರಸಭೆ ಅಧಿಕಾರಿಗಳು ಬೀದಿ ದೀಪ ಸರಿಪಡಿಸಿ, ನೂತನವಾಗಿ ಬಲ್ಬ್ ಅಳವಡಿಸುವ ಕೆಲಸ ನಡೆಸಲಾಗುತ್ತಿದೆ…

ಘಟನೆ ವಿವರ

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಏ.25 ರಾತ್ರಿ ಸುಮಾರು 11:30ರಲ್ಲಿ ದೊಡ್ಡಬಳ್ಳಾಪುರ ನಗರದ ಕೋರ್ಟ್ ರಸ್ತೆಯಲ್ಲಿ ನಡೆದಿದೆ…

ಚಿಕ್ಕಬಳ್ಳಾಪುರದ ಮಂಚೇನಹಳ್ಳಿ ಠಾಣಾ ವ್ಯಾಪ್ತಿಯ‌ ನಾಮಗೊಂಡ್ಲು ಗ್ರಾಮದ ನಾಗೇಶ್ (29) ಸ್ಥಳದಲ್ಲೇ ಸಾವು, ಮಂಡ್ಯ ಜಿಲ್ಲೆಯ ಪಾಂಡುಪುರ ತಾಲೂಕಿನ ಅರಳುಗುಪ್ಪೆ ಗ್ರಾಮದ ಮನೋಜ್ (24) ಆಸ್ಪತ್ರೆಯಲ್ಲಿ ಸಾವು.

ಬೈಕ್ ಸವಾರರು ಹೆಲ್ಮೆಟ್ ಧರಿಸದ ಕಾರಣ ತಲೆಗೆ ತೀವ್ರ ಪೆಟ್ಟಾಗಿ ರಕ್ತ ಸ್ರಾವದಿಂದ ಸಾವನ್ನಪ್ಪಿದ್ದರು.

 

ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

28 minutes ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

17 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

1 day ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 day ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago