ಏ.28ಕ್ಕೆ ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ:‌ ಕಾರ್ಯಕ್ರಮ ಸ್ಥಳ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ಸೌಲಭ್ಯ ವಿತರಣೆಗಾಗಿ ಏಪ್ರಿಲ್ 28 ರಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಕೈಗಾರಿಕಾ ಪ್ರದೇಶ ಫಾಕ್ಸ್ ಕಾನ್ ಸಮೀಪ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಅಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ಸೌಲಭ್ಯ ವಿತರಣೆ ಮಾಡಲಿದ್ದಾರೆ.

ಈ ಹಿನ್ನೆಲೆ ಸ್ಥಳದಲ್ಲಿ ಸಕಲ‌ ಸಿದ್ಧತೆ ನಡೆಸಲಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸುವ ಕಾರ್ಯಕ್ರಮದ ಸಿದ್ಧತೆಗಳನ್ನು ಆಹಾರ ನಾಗರಿಕ ಸರಬರಾಜು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಈ ವೇಳೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ, ಜಿ.ಪಂ.ಸಿಇಒ ಅನುರಾಧಾ, ಮುಖಂಡರುಗಳು, ಅಧಿಕಾರಿಗಳು ಇದ್ದರು.

Ramesh Babu

Journalist

Recent Posts

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

1 minute ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

1 hour ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

15 hours ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

20 hours ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

21 hours ago

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

1 day ago