ಏ.4ರಂದು ಇ-ಖಾತಾ ಅಭಿಯಾನಕ್ಕೆ ಚಾಲನೆ: ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು- ಶಾಸಕ ಧೀರಜ್ ಮುನಿರಾಜ್

ನಗರಸಭೆ ಮತ್ತು ಬಾಶೆಟ್ಟಿಹಳ್ಳಿ ಪಟ್ಟಣ‌‌ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಅಧಿಕೃತ, ಅನಧಿಕೃತ ಹಾಗೂ ರೆವಿನ್ಯೂ ಜಾಗದಲ್ಲಿ ನಿರ್ಮಿಸಿರುವ ಕಟ್ಟಡ, ನಿವೇಶನಗಳ ಸ್ವತ್ತುಗಳಿಗೆ ಇ-ಖಾತಾ ನೀಡುವ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದು ಶಾಸಕ ಧೀರಜ್ ಮುನಿರಾಜ್ ತಿಳಿಸಿದರು.

ನಗರದ ತಾಲ್ಲೂಕು ಪಂಚಾಯಿತಿ ಆವರಣದ ಶಾಸಕರ ಕಚೇರಿಯಲ್ಲಿ ಇ-ಖಾತಾ ಅಭಿಯಾನ ಕುರಿತು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.4ರಂದು ನಗರಸಭೆ ಆವರಣದಲ್ಲಿ ಇ-ಖಾತಾ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತದೆ. ಈ ಅಭಿಯಾನ ಏ.22ರವರೆಗೆ ನಡೆಸಲಾಗುತ್ತದೆ ಎಂದರು.

ಕರ್ನಾಟಕ ಸರ್ಕಾರ ಆಸ್ತಿ ಮಾಲೀಕರಿಗೆ ಅನುಕೂಲ ಮಾಡಿಕೊಡಲು ಇ-ಖಾತಾ ಅಭಿಯಾನ ಆರಂಭಿಸಿದೆ. ಜನರು ಯಾವುದೇ ಊಹಾಪೋಹಗಳಿಗೆ ಕಿವಿಗೊಟ್ಟು ಮಧ್ಯವರ್ತಿಗಳಿಂದ ಕಿರುಕುಳ ಅನುಭವಿಸುವುದು ಬೇಡ. ನಿಗದಿತ ದಾಖಲೆಗಳನ್ನು ಸಲ್ಲಿಸಿ ಇ-ಖಾತೆಗಳನ್ನು ಪಡೆಯಬಹುದು ಎಂದು ಹೇಳಿದರು.

ಇ-ಖಾತಾ ಆಂದೋಲನದಲ್ಲಿ ಸ್ವತ್ತಿನ ಮಾಲೀಕರು ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳದಲ್ಲಿ ಬೆಳಗ್ಗೆ 10-00 ರಿಂದ ಸಂಜೆ 5-00 ಗಂಟೆವರೆಗೆ ನಿಗದಿತ ದಾಖಲೆಗಳೊಂದಿಗೆ ಹಾಜರಾಗಿ ಅರ್ಜಿ ಸಲ್ಲಿಸಬೇಕು ಎಂದರು.

ನಗರಸಭೆ ವ್ಯಾಪ್ತಿಯಲ್ಲಿ ಅರ್ಜಿ ಸಲ್ಲಿಸಿ 30‌ ದಿನದಲ್ಲಿ ನಿಮ್ಮ ಮನೆಗೆ ಉಚಿತವಾಗಿ ಇ-ಖಾತಾ ನೀಡಲಾಗುವುದು. ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಅರ್ಜಿ ಹಾಕಿದ  15 ದಿನದಲ್ಲಿ ಇ-ಖಾತಾ ನೀಡಲಾಗುವುದು ಎಂದರು.

ಎ-ರಿಜಿಸ್ಟ‌ರ್ ನಲ್ಲಿರುವ ಸ್ವತ್ತುಗಳಿಗೆ ಇ-ಖಾತಾ ಪಡೆಯಲು ಸಲ್ಲಿಸಬೇಕಿರುವ ಕನಿಷ್ಟ ದಾಖಲೆಗಳು

1. ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತುಪಡಿಸುವ ನೋಂದಾಯಿತ ಮಾರಾಟ ಪತ್ರಗಳು /ದಾನಪತ್ರ/ವಿಭಾಗ ಪತ್ರಗಳು/ಸರ್ಕಾರ ಅಥವಾ ಸರ್ಕಾರದ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕು ಪತ್ರಗಳು/ ಮಂಜೂರಾತಿ ಪತ್ರಗಳು /ಕಂದಾಯ ಇಲಾಖೆಯಿಂದ 94 ಸಿಸಿ ಅಡಿ ನೀಡಲಾದ ಹಕ್ಕು ಪತ್ರ.

2. ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಡೀಕೃತ ಪ್ರತಿ ಮತ್ತು ನಿವೇಶನಗಳ ಬಿಡುಗಡೆ ಪತ್ರ.

3. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ.

4. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಸೀದಿ

5. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ

6. ಮಾಲೀಕರ ಗುರುತಿನ ದಾಖಲೆ ಪ್ರತಿ.

ಬಿ- ರಿಜಿಸ್ಟ‌ರ್ ನಲ್ಲಿರುವ ಸ್ವತ್ತುಗಳಿಗೆ ಇ-ಖಾತಾ ಪಡೆಯಲು ಸಲ್ಲಿಸಬೇಕಿರುವ ಕನಿಷ್ಟ ದಾಖಲೆಗಳು

1. ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತುಪಡಿಸುವ ದಿನಾಂಕ: 10-09-2024 ರ ಪೂರ್ವದಲ್ಲಿ ನೋಂದಾಯಿತ ಮಾರಾಟ ಪತ್ರಗಳು /ದಾನಪತ್ರ/ವಿಭಾಗ ಪತ್ರಗಳು/ಹಕ್ಕು ಖುಲಾಸೆ ಪತ್ರಗಳು.

2. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ,

3. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಸೀದಿ.

4. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ

5. ಮಾಲೀಕರ ಗುರುತಿನ ದಾಖಲೆ ಪ್ರತಿ.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

2 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

4 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

4 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

5 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

6 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

11 hours ago