ಏ.4ರಂದು ಇ-ಖಾತಾ ಅಭಿಯಾನಕ್ಕೆ ಚಾಲನೆ: ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು- ಶಾಸಕ ಧೀರಜ್ ಮುನಿರಾಜ್

ನಗರಸಭೆ ಮತ್ತು ಬಾಶೆಟ್ಟಿಹಳ್ಳಿ ಪಟ್ಟಣ‌‌ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಅಧಿಕೃತ, ಅನಧಿಕೃತ ಹಾಗೂ ರೆವಿನ್ಯೂ ಜಾಗದಲ್ಲಿ ನಿರ್ಮಿಸಿರುವ ಕಟ್ಟಡ, ನಿವೇಶನಗಳ ಸ್ವತ್ತುಗಳಿಗೆ ಇ-ಖಾತಾ ನೀಡುವ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದು ಶಾಸಕ ಧೀರಜ್ ಮುನಿರಾಜ್ ತಿಳಿಸಿದರು.

ನಗರದ ತಾಲ್ಲೂಕು ಪಂಚಾಯಿತಿ ಆವರಣದ ಶಾಸಕರ ಕಚೇರಿಯಲ್ಲಿ ಇ-ಖಾತಾ ಅಭಿಯಾನ ಕುರಿತು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.4ರಂದು ನಗರಸಭೆ ಆವರಣದಲ್ಲಿ ಇ-ಖಾತಾ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತದೆ. ಈ ಅಭಿಯಾನ ಏ.22ರವರೆಗೆ ನಡೆಸಲಾಗುತ್ತದೆ ಎಂದರು.

ಕರ್ನಾಟಕ ಸರ್ಕಾರ ಆಸ್ತಿ ಮಾಲೀಕರಿಗೆ ಅನುಕೂಲ ಮಾಡಿಕೊಡಲು ಇ-ಖಾತಾ ಅಭಿಯಾನ ಆರಂಭಿಸಿದೆ. ಜನರು ಯಾವುದೇ ಊಹಾಪೋಹಗಳಿಗೆ ಕಿವಿಗೊಟ್ಟು ಮಧ್ಯವರ್ತಿಗಳಿಂದ ಕಿರುಕುಳ ಅನುಭವಿಸುವುದು ಬೇಡ. ನಿಗದಿತ ದಾಖಲೆಗಳನ್ನು ಸಲ್ಲಿಸಿ ಇ-ಖಾತೆಗಳನ್ನು ಪಡೆಯಬಹುದು ಎಂದು ಹೇಳಿದರು.

ಇ-ಖಾತಾ ಆಂದೋಲನದಲ್ಲಿ ಸ್ವತ್ತಿನ ಮಾಲೀಕರು ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳದಲ್ಲಿ ಬೆಳಗ್ಗೆ 10-00 ರಿಂದ ಸಂಜೆ 5-00 ಗಂಟೆವರೆಗೆ ನಿಗದಿತ ದಾಖಲೆಗಳೊಂದಿಗೆ ಹಾಜರಾಗಿ ಅರ್ಜಿ ಸಲ್ಲಿಸಬೇಕು ಎಂದರು.

ನಗರಸಭೆ ವ್ಯಾಪ್ತಿಯಲ್ಲಿ ಅರ್ಜಿ ಸಲ್ಲಿಸಿ 30‌ ದಿನದಲ್ಲಿ ನಿಮ್ಮ ಮನೆಗೆ ಉಚಿತವಾಗಿ ಇ-ಖಾತಾ ನೀಡಲಾಗುವುದು. ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಅರ್ಜಿ ಹಾಕಿದ  15 ದಿನದಲ್ಲಿ ಇ-ಖಾತಾ ನೀಡಲಾಗುವುದು ಎಂದರು.

ಎ-ರಿಜಿಸ್ಟ‌ರ್ ನಲ್ಲಿರುವ ಸ್ವತ್ತುಗಳಿಗೆ ಇ-ಖಾತಾ ಪಡೆಯಲು ಸಲ್ಲಿಸಬೇಕಿರುವ ಕನಿಷ್ಟ ದಾಖಲೆಗಳು

1. ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತುಪಡಿಸುವ ನೋಂದಾಯಿತ ಮಾರಾಟ ಪತ್ರಗಳು /ದಾನಪತ್ರ/ವಿಭಾಗ ಪತ್ರಗಳು/ಸರ್ಕಾರ ಅಥವಾ ಸರ್ಕಾರದ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕು ಪತ್ರಗಳು/ ಮಂಜೂರಾತಿ ಪತ್ರಗಳು /ಕಂದಾಯ ಇಲಾಖೆಯಿಂದ 94 ಸಿಸಿ ಅಡಿ ನೀಡಲಾದ ಹಕ್ಕು ಪತ್ರ.

2. ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಡೀಕೃತ ಪ್ರತಿ ಮತ್ತು ನಿವೇಶನಗಳ ಬಿಡುಗಡೆ ಪತ್ರ.

3. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ.

4. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಸೀದಿ

5. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ

6. ಮಾಲೀಕರ ಗುರುತಿನ ದಾಖಲೆ ಪ್ರತಿ.

ಬಿ- ರಿಜಿಸ್ಟ‌ರ್ ನಲ್ಲಿರುವ ಸ್ವತ್ತುಗಳಿಗೆ ಇ-ಖಾತಾ ಪಡೆಯಲು ಸಲ್ಲಿಸಬೇಕಿರುವ ಕನಿಷ್ಟ ದಾಖಲೆಗಳು

1. ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತುಪಡಿಸುವ ದಿನಾಂಕ: 10-09-2024 ರ ಪೂರ್ವದಲ್ಲಿ ನೋಂದಾಯಿತ ಮಾರಾಟ ಪತ್ರಗಳು /ದಾನಪತ್ರ/ವಿಭಾಗ ಪತ್ರಗಳು/ಹಕ್ಕು ಖುಲಾಸೆ ಪತ್ರಗಳು.

2. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ,

3. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಸೀದಿ.

4. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ

5. ಮಾಲೀಕರ ಗುರುತಿನ ದಾಖಲೆ ಪ್ರತಿ.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

5 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

9 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

9 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

12 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago