ಏ.4ರಂದು ಇ-ಖಾತಾ ಅಭಿಯಾನಕ್ಕೆ ಚಾಲನೆ: ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು- ಶಾಸಕ ಧೀರಜ್ ಮುನಿರಾಜ್

ನಗರಸಭೆ ಮತ್ತು ಬಾಶೆಟ್ಟಿಹಳ್ಳಿ ಪಟ್ಟಣ‌‌ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಅಧಿಕೃತ, ಅನಧಿಕೃತ ಹಾಗೂ ರೆವಿನ್ಯೂ ಜಾಗದಲ್ಲಿ ನಿರ್ಮಿಸಿರುವ ಕಟ್ಟಡ, ನಿವೇಶನಗಳ ಸ್ವತ್ತುಗಳಿಗೆ ಇ-ಖಾತಾ ನೀಡುವ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದು ಶಾಸಕ ಧೀರಜ್ ಮುನಿರಾಜ್ ತಿಳಿಸಿದರು.

ನಗರದ ತಾಲ್ಲೂಕು ಪಂಚಾಯಿತಿ ಆವರಣದ ಶಾಸಕರ ಕಚೇರಿಯಲ್ಲಿ ಇ-ಖಾತಾ ಅಭಿಯಾನ ಕುರಿತು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.4ರಂದು ನಗರಸಭೆ ಆವರಣದಲ್ಲಿ ಇ-ಖಾತಾ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತದೆ. ಈ ಅಭಿಯಾನ ಏ.22ರವರೆಗೆ ನಡೆಸಲಾಗುತ್ತದೆ ಎಂದರು.

ಕರ್ನಾಟಕ ಸರ್ಕಾರ ಆಸ್ತಿ ಮಾಲೀಕರಿಗೆ ಅನುಕೂಲ ಮಾಡಿಕೊಡಲು ಇ-ಖಾತಾ ಅಭಿಯಾನ ಆರಂಭಿಸಿದೆ. ಜನರು ಯಾವುದೇ ಊಹಾಪೋಹಗಳಿಗೆ ಕಿವಿಗೊಟ್ಟು ಮಧ್ಯವರ್ತಿಗಳಿಂದ ಕಿರುಕುಳ ಅನುಭವಿಸುವುದು ಬೇಡ. ನಿಗದಿತ ದಾಖಲೆಗಳನ್ನು ಸಲ್ಲಿಸಿ ಇ-ಖಾತೆಗಳನ್ನು ಪಡೆಯಬಹುದು ಎಂದು ಹೇಳಿದರು.

ಇ-ಖಾತಾ ಆಂದೋಲನದಲ್ಲಿ ಸ್ವತ್ತಿನ ಮಾಲೀಕರು ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳದಲ್ಲಿ ಬೆಳಗ್ಗೆ 10-00 ರಿಂದ ಸಂಜೆ 5-00 ಗಂಟೆವರೆಗೆ ನಿಗದಿತ ದಾಖಲೆಗಳೊಂದಿಗೆ ಹಾಜರಾಗಿ ಅರ್ಜಿ ಸಲ್ಲಿಸಬೇಕು ಎಂದರು.

ನಗರಸಭೆ ವ್ಯಾಪ್ತಿಯಲ್ಲಿ ಅರ್ಜಿ ಸಲ್ಲಿಸಿ 30‌ ದಿನದಲ್ಲಿ ನಿಮ್ಮ ಮನೆಗೆ ಉಚಿತವಾಗಿ ಇ-ಖಾತಾ ನೀಡಲಾಗುವುದು. ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಅರ್ಜಿ ಹಾಕಿದ  15 ದಿನದಲ್ಲಿ ಇ-ಖಾತಾ ನೀಡಲಾಗುವುದು ಎಂದರು.

ಎ-ರಿಜಿಸ್ಟ‌ರ್ ನಲ್ಲಿರುವ ಸ್ವತ್ತುಗಳಿಗೆ ಇ-ಖಾತಾ ಪಡೆಯಲು ಸಲ್ಲಿಸಬೇಕಿರುವ ಕನಿಷ್ಟ ದಾಖಲೆಗಳು

1. ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತುಪಡಿಸುವ ನೋಂದಾಯಿತ ಮಾರಾಟ ಪತ್ರಗಳು /ದಾನಪತ್ರ/ವಿಭಾಗ ಪತ್ರಗಳು/ಸರ್ಕಾರ ಅಥವಾ ಸರ್ಕಾರದ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕು ಪತ್ರಗಳು/ ಮಂಜೂರಾತಿ ಪತ್ರಗಳು /ಕಂದಾಯ ಇಲಾಖೆಯಿಂದ 94 ಸಿಸಿ ಅಡಿ ನೀಡಲಾದ ಹಕ್ಕು ಪತ್ರ.

2. ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಡೀಕೃತ ಪ್ರತಿ ಮತ್ತು ನಿವೇಶನಗಳ ಬಿಡುಗಡೆ ಪತ್ರ.

3. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ.

4. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಸೀದಿ

5. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ

6. ಮಾಲೀಕರ ಗುರುತಿನ ದಾಖಲೆ ಪ್ರತಿ.

ಬಿ- ರಿಜಿಸ್ಟ‌ರ್ ನಲ್ಲಿರುವ ಸ್ವತ್ತುಗಳಿಗೆ ಇ-ಖಾತಾ ಪಡೆಯಲು ಸಲ್ಲಿಸಬೇಕಿರುವ ಕನಿಷ್ಟ ದಾಖಲೆಗಳು

1. ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತುಪಡಿಸುವ ದಿನಾಂಕ: 10-09-2024 ರ ಪೂರ್ವದಲ್ಲಿ ನೋಂದಾಯಿತ ಮಾರಾಟ ಪತ್ರಗಳು /ದಾನಪತ್ರ/ವಿಭಾಗ ಪತ್ರಗಳು/ಹಕ್ಕು ಖುಲಾಸೆ ಪತ್ರಗಳು.

2. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ,

3. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಸೀದಿ.

4. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ

5. ಮಾಲೀಕರ ಗುರುತಿನ ದಾಖಲೆ ಪ್ರತಿ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

12 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

13 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago