Categories: ಕೋಲಾರ

ಏ.4 ರಂದು ಮೈತ್ರಿ ಅಭ್ಯರ್ಥಿ ಎಂ.ಮಲ್ಲೇಶ್ ಬಾಬು ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಕೆ

ಕೋಲಾರ: ಮೀಸಲು ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಎಂ.ಮಲ್ಲೇಶ್ ಬಾಬು ಅವರು ಏ.4 ರಂದು ಗುರುವಾರ ನಗರದ ಬಂಗಾರಪೇಟೆ ವೃತ್ತದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮೆರವಣಿಗೆ ಮೂಲಕ ತೆರಳಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜೆಡಿಎಸ್‌ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ನಗರದ ಸಿಎಂಆರ್ ಶ್ರೀನಾಥ್ ಅವರ ನಿವಾಸದಲ್ಲಿ ಮಂಗಳವಾರ ಜೆಡಿಎಸ್‌ ಮತ್ತು ಬಿಜೆಪಿ ಸಭೆಯ ನಂತರ ಮಾತನಾಡಿದ ಅವರು, ನಾಮಪತ್ರ ಸಲ್ಲಿಸಲು ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ ಅವರು ಈ ಸಂದರ್ಭದಲ್ಲಿ ಎರಡು ಪಕ್ಷದ ರಾಷ್ಟ್ರೀಯ,ಮತ್ತು ರಾಜ್ಯ ನಾಯಕರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಜೆಡಿಎಸ್‌ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿ ಮಾತನಾಡಿ, ಲೋಕಸಭೆ ಚುನಾವಣೆ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಉಳಿಯುತ್ತದೆ ಎಂಬ ಭರವಸೆ ಇಲ್ಲ ಸುಳ್ಳು ಭರವಸೆಗಳನ್ನು ನೀಡಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆ. ಇವರನ್ನು ಆಯ್ಕೆಯ ಮಾಡಿದ ಜನರು ಈಗ ಶಪಿಸುತ್ತಿದ್ದಾರೆ. ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಡಾ ವೇಣುಗೋಪಾಲ್ ಮಾತನಾಡಿ, ಜಾತಿ ಜಾತಿಗಳನ್ನು ಒಡೆದು ಕುತಂತ್ರದ ರಾಜಕಾರಣವನ್ನು ಕಾಂಗ್ರೆಸ್ ಮಾಡುತ್ತಿದೆ ಅದಕ್ಕೆ ಕೋಲಾರ ಲೋಕಸಭಾ ಕ್ಷೇತ್ರವೇ ಉದಾಹರಣೆಯಾಗಿದೆ ದಲಿತರನ್ನು ಎಡಗೈ ಬಲಗೈ ಎಂದು ವಿಂಗಡಿಸಿದ್ದಾರೆ ರಾಜ್ಯದ ಆರ್ಥಿಕ ಸ್ಥಿತಿ ದಿವಾಳಿ ಎದ್ದು ಹೋಗಿದೆ. ಕರ್ನಾಟದಲ್ಲಿ ಬರವಿದ್ದು ಕೇಳಿದರೆ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿರುದ್ದ ಮಾತಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಈ ಬಾರಿ ರಾಜ್ಯದಲ್ಲಿ 28 ಕ್ಕೆ 28 ಕ್ಷೇತ್ರವನ್ನು ಗೆಲ್ಲಿಸಿ ನರೇಂದ್ರ ಮೋದಿ ಅವರ ಕೈ ಬಲಪಡಿಸುತ್ತೇವೆ ಕಳೆದ ಬಾರಿಯ ಬಿಜೆಪಿಯ ಯಡಿಯೂರಪ್ಪ ಮತ್ತು ಬಸವರಾಜ್ ಬೊಮ್ಮಾಯಿ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರ ಆಡಳಿತವೇ ಮಾದರಿಯಾಗಿ ರಾಷ್ಟ್ರದ ಪ್ರಧಾನ ಮಂತ್ರಿ ಹಾಗೂ ಮಾಜಿ ಪ್ರಧಾನ ಮಂತ್ರಿ ಒಟ್ಟಿಗೆ ತೆಗೆದುಕೊಂಡಿರುವ ನಿರ್ಧಾರದಿಂದ ಕಳೆದ ಬಾರಿಗಿಂತ ಹೆಚ್ಚಿನ ಅಂತರದಲ್ಲಿ ಗೆಲ್ಲಿಸುತ್ತೇವೆ ಎಂದರು

ಈ ಸಂದರ್ಭದಲ್ಲಿ ಜೆಡಿಎಸ್‌ ಬಿಜೆಪಿ ಮೈತ್ರಿ ಅಭ್ಯರ್ಥಿ ಎಂ.ಮಲ್ಲೇಶ್ ಬಾಬು, ಎಂಎಲ್ಸಿ ಇಂಚರ ಗೋವಿಂದರಾಜು, ಮಾಜಿ ಶಾಸಕರಾದ ಕೆಜಿಎಫ್ ವೈ.ಸಂಪಂಗಿ, ಮಾಲೂರು ಕೆ.ಎಸ್ ಮಂಜುನಾಥ್ ಗೌಡ, ಮುಖಂಡರಾದ ಸಿಎಂಆರ್ ಶ್ರೀನಾಥ್ ಬಣಕನಹಳ್ಳಿ ನಟರಾಜ್, ಬೆಗ್ಲಿ ಸೂರ್ಯಪ್ರಕಾಶ್, ಮುನಿರಾಜು ವೈ ಸುರೇಂದ್ರ ಗೌಡ, ವಕ್ಕಲೇರಿ ರಾಮು, ಮುಂತಾದವರು ಇದ್ದರು

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

2 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

14 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

14 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

15 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

18 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago