Categories: ಕೋಲಾರ

ಏ.4 ರಂದು ಮೈತ್ರಿ ಅಭ್ಯರ್ಥಿ ಎಂ.ಮಲ್ಲೇಶ್ ಬಾಬು ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಕೆ

ಕೋಲಾರ: ಮೀಸಲು ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಎಂ.ಮಲ್ಲೇಶ್ ಬಾಬು ಅವರು ಏ.4 ರಂದು ಗುರುವಾರ ನಗರದ ಬಂಗಾರಪೇಟೆ ವೃತ್ತದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮೆರವಣಿಗೆ ಮೂಲಕ ತೆರಳಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜೆಡಿಎಸ್‌ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ನಗರದ ಸಿಎಂಆರ್ ಶ್ರೀನಾಥ್ ಅವರ ನಿವಾಸದಲ್ಲಿ ಮಂಗಳವಾರ ಜೆಡಿಎಸ್‌ ಮತ್ತು ಬಿಜೆಪಿ ಸಭೆಯ ನಂತರ ಮಾತನಾಡಿದ ಅವರು, ನಾಮಪತ್ರ ಸಲ್ಲಿಸಲು ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ ಅವರು ಈ ಸಂದರ್ಭದಲ್ಲಿ ಎರಡು ಪಕ್ಷದ ರಾಷ್ಟ್ರೀಯ,ಮತ್ತು ರಾಜ್ಯ ನಾಯಕರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಜೆಡಿಎಸ್‌ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿ ಮಾತನಾಡಿ, ಲೋಕಸಭೆ ಚುನಾವಣೆ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಉಳಿಯುತ್ತದೆ ಎಂಬ ಭರವಸೆ ಇಲ್ಲ ಸುಳ್ಳು ಭರವಸೆಗಳನ್ನು ನೀಡಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆ. ಇವರನ್ನು ಆಯ್ಕೆಯ ಮಾಡಿದ ಜನರು ಈಗ ಶಪಿಸುತ್ತಿದ್ದಾರೆ. ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಡಾ ವೇಣುಗೋಪಾಲ್ ಮಾತನಾಡಿ, ಜಾತಿ ಜಾತಿಗಳನ್ನು ಒಡೆದು ಕುತಂತ್ರದ ರಾಜಕಾರಣವನ್ನು ಕಾಂಗ್ರೆಸ್ ಮಾಡುತ್ತಿದೆ ಅದಕ್ಕೆ ಕೋಲಾರ ಲೋಕಸಭಾ ಕ್ಷೇತ್ರವೇ ಉದಾಹರಣೆಯಾಗಿದೆ ದಲಿತರನ್ನು ಎಡಗೈ ಬಲಗೈ ಎಂದು ವಿಂಗಡಿಸಿದ್ದಾರೆ ರಾಜ್ಯದ ಆರ್ಥಿಕ ಸ್ಥಿತಿ ದಿವಾಳಿ ಎದ್ದು ಹೋಗಿದೆ. ಕರ್ನಾಟದಲ್ಲಿ ಬರವಿದ್ದು ಕೇಳಿದರೆ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿರುದ್ದ ಮಾತಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಈ ಬಾರಿ ರಾಜ್ಯದಲ್ಲಿ 28 ಕ್ಕೆ 28 ಕ್ಷೇತ್ರವನ್ನು ಗೆಲ್ಲಿಸಿ ನರೇಂದ್ರ ಮೋದಿ ಅವರ ಕೈ ಬಲಪಡಿಸುತ್ತೇವೆ ಕಳೆದ ಬಾರಿಯ ಬಿಜೆಪಿಯ ಯಡಿಯೂರಪ್ಪ ಮತ್ತು ಬಸವರಾಜ್ ಬೊಮ್ಮಾಯಿ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರ ಆಡಳಿತವೇ ಮಾದರಿಯಾಗಿ ರಾಷ್ಟ್ರದ ಪ್ರಧಾನ ಮಂತ್ರಿ ಹಾಗೂ ಮಾಜಿ ಪ್ರಧಾನ ಮಂತ್ರಿ ಒಟ್ಟಿಗೆ ತೆಗೆದುಕೊಂಡಿರುವ ನಿರ್ಧಾರದಿಂದ ಕಳೆದ ಬಾರಿಗಿಂತ ಹೆಚ್ಚಿನ ಅಂತರದಲ್ಲಿ ಗೆಲ್ಲಿಸುತ್ತೇವೆ ಎಂದರು

ಈ ಸಂದರ್ಭದಲ್ಲಿ ಜೆಡಿಎಸ್‌ ಬಿಜೆಪಿ ಮೈತ್ರಿ ಅಭ್ಯರ್ಥಿ ಎಂ.ಮಲ್ಲೇಶ್ ಬಾಬು, ಎಂಎಲ್ಸಿ ಇಂಚರ ಗೋವಿಂದರಾಜು, ಮಾಜಿ ಶಾಸಕರಾದ ಕೆಜಿಎಫ್ ವೈ.ಸಂಪಂಗಿ, ಮಾಲೂರು ಕೆ.ಎಸ್ ಮಂಜುನಾಥ್ ಗೌಡ, ಮುಖಂಡರಾದ ಸಿಎಂಆರ್ ಶ್ರೀನಾಥ್ ಬಣಕನಹಳ್ಳಿ ನಟರಾಜ್, ಬೆಗ್ಲಿ ಸೂರ್ಯಪ್ರಕಾಶ್, ಮುನಿರಾಜು ವೈ ಸುರೇಂದ್ರ ಗೌಡ, ವಕ್ಕಲೇರಿ ರಾಮು, ಮುಂತಾದವರು ಇದ್ದರು

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 hour ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

8 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

9 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

24 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago