ಐಎಫ್‌ಎಸ್ ಪರೀಕ್ಷೆ: ದೇಶಕ್ಕೆ ಪ್ರಥಮ ರ‌್ಯಾಂಕ್ ಪಡೆದ ಕನ್ನಡಿಗ ಬಸವರಾಜ್ ಕೆಂಪವಾಡ್: ಗಣ್ಯರಿಂದ ಅಭಿನಂದನೆ

ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ‌್ಯಾಂಕ್ ಪಡೆದು ಅನನ್ಯ ಸಾಧನೆ ಮಾಡಿರುವ ಕನ್ನಡಿಗ ಬಸವರಾಜ್ ಕೆಂಪವಾಡ್ ಅವರಿಗೆ ಹಾಗೂ ಇದೇ ಪರೀಕ್ಷೆಯಲ್ಲಿ 14ನೇ ರ‌್ಯಾಂಕ್ ಪಡೆದು ರಾಜ್ಯದ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿರುವ ದೀಕ್ಷಿತ್.ಎನ್ ಅವರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಪರಿಶ್ರಮ, ಪ್ರಯತ್ನ ಮತ್ತು ಆತ್ಮವಿಶ್ವಾಸವಿದ್ದರೆ ಕಠಿಣಾತಿ ಕಠಿಣ ಗುರಿಯನ್ನು ಕೂಡ ಮುಟ್ಟಲು ಸಾಧ್ಯವೆಂಬುದಕ್ಕೆ ಇವರ ಸಾಧನೆಯೇ ಸಾಕ್ಷಿ. ಅರಣ್ಯ, ವನ್ಯಜೀವಿ ಹಾಗೂ ಪರಿಸರ ಸಂಪನ್ಮೂಲಗಳನ್ನು ಉಳಿಸಿ, ಬೆಳೆಸುವಲ್ಲಿ ನಿಮ್ಮ ಪ್ರತಿಭೆ, ಶ್ರದ್ಧೆಯಿಂದ ರಾಷ್ಟ್ರಕ್ಕೆ ಗರಿಷ್ಠ ಅನುಕೂಲವಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ಈ ಇಬ್ಬರ ಸಾಧನೆಯು ಪ್ರತಿಯೊಬ್ಬ ಕನ್ನಡಿಗನಿಗೂ ಹೆಮ್ಮೆ ಮತ್ತು ಸ್ಪೂರ್ತಿದಾಯಕವಾದುದ್ದು. ಮತ್ತೊಮ್ಮೆ ವಿಶಿಷ್ಟ ಸಾಧನೆಗೈದ ಯುವ ಕನ್ನಡಿಗರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

ಅಸಾಧ್ಯವಾದುದು ಯಾವುದೂ ಇಲ್ಲ ಎಂಬುದನ್ನು ನಮ್ಮ ಬೆಳಗಾವಿ ಜಿಲ್ಲೆಯ ಅಥಣಿಯ ಸವದಿ ಗ್ರಾಮದ ಪ್ರತಿಭೆ ಬಸವರಾಜ್ ದರೇಪ್ಪ ಕೆಂಪವಾಡ ಅವರು ಸಾಬೀತುಪಡಿಸಿದ್ದಾರೆ. ಯುಪಿಎಸ್​ಸಿ ನಡೆಸಿದ ಭಾರತೀಯ ಅರಣ್ಯ ಸೇವೆ (IFS) ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟಕ್ಕೆ ಪ್ರಥಮ ರ‍್ಯಾಂಕ್ ಪಡೆದ ನಮ್ಮ ಹೆಮ್ಮೆಯ ಕನ್ನಡಿಗನಿಗೆ ಹಾರ್ದಿಕ ಅಭಿನಂದನೆಗಳು. ಸಾಮಾನ್ಯ ರೈತ ಕುಟುಂಬದ ಹಿನ್ನೆಲೆಯಿಂದ ಬಂದು, ಸತತ ಪರಿಶ್ರಮದ ಮೂಲಕ ದೇಶದ ಗಮನ ಸೆಳೆದ ಬಸವರಾಜ್ ಅವರ ಸಾಧನೆ ಕೋಟ್ಯಂತರ ಯುವಜನತೆಗೆ ಸ್ಫೂರ್ತಿಯಾಗಲಿ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

4 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

8 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

17 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

23 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago