ಭಾರತೀಯ ಅರಣ್ಯ ಸೇವೆ (ಐಎಫ್ಎಸ್) ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ್ಯಾಂಕ್ ಪಡೆದು ಅನನ್ಯ ಸಾಧನೆ ಮಾಡಿರುವ ಕನ್ನಡಿಗ ಬಸವರಾಜ್ ಕೆಂಪವಾಡ್ ಅವರಿಗೆ ಹಾಗೂ ಇದೇ ಪರೀಕ್ಷೆಯಲ್ಲಿ 14ನೇ ರ್ಯಾಂಕ್ ಪಡೆದು ರಾಜ್ಯದ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿರುವ ದೀಕ್ಷಿತ್.ಎನ್ ಅವರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಪರಿಶ್ರಮ, ಪ್ರಯತ್ನ ಮತ್ತು ಆತ್ಮವಿಶ್ವಾಸವಿದ್ದರೆ ಕಠಿಣಾತಿ ಕಠಿಣ ಗುರಿಯನ್ನು ಕೂಡ ಮುಟ್ಟಲು ಸಾಧ್ಯವೆಂಬುದಕ್ಕೆ ಇವರ ಸಾಧನೆಯೇ ಸಾಕ್ಷಿ. ಅರಣ್ಯ, ವನ್ಯಜೀವಿ ಹಾಗೂ ಪರಿಸರ ಸಂಪನ್ಮೂಲಗಳನ್ನು ಉಳಿಸಿ, ಬೆಳೆಸುವಲ್ಲಿ ನಿಮ್ಮ ಪ್ರತಿಭೆ, ಶ್ರದ್ಧೆಯಿಂದ ರಾಷ್ಟ್ರಕ್ಕೆ ಗರಿಷ್ಠ ಅನುಕೂಲವಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.
ಈ ಇಬ್ಬರ ಸಾಧನೆಯು ಪ್ರತಿಯೊಬ್ಬ ಕನ್ನಡಿಗನಿಗೂ ಹೆಮ್ಮೆ ಮತ್ತು ಸ್ಪೂರ್ತಿದಾಯಕವಾದುದ್ದು. ಮತ್ತೊಮ್ಮೆ ವಿಶಿಷ್ಟ ಸಾಧನೆಗೈದ ಯುವ ಕನ್ನಡಿಗರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ತಿಳಿಸಿದ್ದಾರೆ.
ಅಸಾಧ್ಯವಾದುದು ಯಾವುದೂ ಇಲ್ಲ ಎಂಬುದನ್ನು ನಮ್ಮ ಬೆಳಗಾವಿ ಜಿಲ್ಲೆಯ ಅಥಣಿಯ ಸವದಿ ಗ್ರಾಮದ ಪ್ರತಿಭೆ ಬಸವರಾಜ್ ದರೇಪ್ಪ ಕೆಂಪವಾಡ ಅವರು ಸಾಬೀತುಪಡಿಸಿದ್ದಾರೆ. ಯುಪಿಎಸ್ಸಿ ನಡೆಸಿದ ಭಾರತೀಯ ಅರಣ್ಯ ಸೇವೆ (IFS) ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟಕ್ಕೆ ಪ್ರಥಮ ರ್ಯಾಂಕ್ ಪಡೆದ ನಮ್ಮ ಹೆಮ್ಮೆಯ ಕನ್ನಡಿಗನಿಗೆ ಹಾರ್ದಿಕ ಅಭಿನಂದನೆಗಳು. ಸಾಮಾನ್ಯ ರೈತ ಕುಟುಂಬದ ಹಿನ್ನೆಲೆಯಿಂದ ಬಂದು, ಸತತ ಪರಿಶ್ರಮದ ಮೂಲಕ ದೇಶದ ಗಮನ ಸೆಳೆದ ಬಸವರಾಜ್ ಅವರ ಸಾಧನೆ ಕೋಟ್ಯಂತರ ಯುವಜನತೆಗೆ ಸ್ಫೂರ್ತಿಯಾಗಲಿ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…