ಬೆಂಗಳೂರು, ವೈಟ್ ಫೀಲ್ದ್ : ನೌಕರರ ಆರೋಗ್ಯ ಮತ್ತು ಕಲ್ಯಾಣವನ್ನು ಉತ್ತೇಜಿಸಲು, ಮೆಡಿಕವರ್ ಆಸ್ಪತ್ರೆ ಐಎಫ್ಬಿ ಮಹದೇವಪುರ ಘಟಕದಲ್ಲಿ ವಿಸ್ತೃತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಇದರಿಂದ 127ಕ್ಕೂ ಹೆಚ್ಚು ನೌಕರರು ಲಾಭ ಪಡೆದರು.
ಈ ಕಾರ್ಯಕ್ರಮವನ್ನು ಐಎಫ್ಬಿ ನ Occupational Health Center ಸಹಯೋಗದಲ್ಲಿ ಆಯೋಜಿಸಲಾಯಿತು. ಐಎಫ್ಬಿಯ HR ಪ್ರತಿನಿಧಿ ಶ್ರೀ ಸಂದೀಪ್ ಹಾಗೂ ನರ್ಸಿಂಗ್ ತಂಡದ ಶ್ರೀ ಸತೀಶ್ ಮತ್ತು ಶ್ರೀ ಮೆಹಬೂಬ್ ಶಿಬಿರದ ಯಶಸ್ಸಿಗೆ ಸಹಕಾರ ನೀಡಿದರು.
ಮೆಡಿಕವರ್ ಪರವಾಗಿ ಡಾ. ಕುಶ್ವಂತ್ ಮತ್ತು ನರ್ಸ್ ಹೃದಯ್ ಈ ಶಿಬಿರವನ್ನು ಮುಂಚೂಣಿಯಲ್ಲಿ ನಿಭಾಯಿಸಿದರು. ತಪಾಸಣೆಯಲ್ಲಿ ರಕ್ತದೊತ್ತಡ, ಶುಗರ್ ಟೆಸ್ಟ್, BMI, ಮತ್ತು ಸಾಮಾನ್ಯ ಆರೋಗ್ಯ ಸಲಹೆಗಳು ಒಳಗೊಂಡಿದ್ದವು.
ಮೆಡಿಕವರ್ ಆಸ್ಪತ್ರೆ ಭವಿಷ್ಯದಲ್ಲಿಯೂ ಇಂತಹ ಆರೋಗ್ಯ ಶಿಬಿರಗಳನ್ನು ನಡೆಸಲು ಮತ್ತು ನೌಕರರ ಆರೋಗ್ಯ ಸುಧಾರಣೆಗೆ ಸಹಕಾರ ನೀಡಲು ಐಎಫ್ಬಿಗೆ ಭರವಸೆ ನೀಡಿದೆ.
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…