ಪುಷ್ಪ-2 ಸಿನಿಮಾದ ಪ್ರೀಮಿಯರ್ ಶೋ ವೇಳೆ ನಡೆದ ಘಟನೆಗೆ ಸಂಬಂಧಿಸಿದಂತೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಪೊಲೀಸರು Arrest) ಬಂಧಿಸಿದ್ದರು. ಮಾತ್ರವಲ್ಲ ನಟನಿಗೆ 14 ದಿನ ನ್ಯಾಯಾಂಗ ಬಂಧವನ್ನೂ ವಿಧಿಸಲಾಗಿತ್ತು. ಆದರೀಗ ಅಲ್ಲು ಅರ್ಜುನ್ಗೆ ಕೋರ್ಟ್ ಜಾಮೀನು ನೀಡಿದೆ.
ಜೈಲಿಗೆ ಸೇರಿದ ತಕ್ಷಣವೇ ನಟನಿಗೆ ಜಾಮೀನು ಸಿಕ್ಕಿದೆ. ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಮೃತ ರೇವತಿ ಅವರ ಪತಿ ಭಾಸ್ಕರ್ ನೀಡಿದ ದೂರಿನ ಮೇಲೆ ಪೊಲೀಸರು ಅಲ್ಲು ಅರ್ಜುನ್ ಅವರನ್ನು ವಶಕ್ಕೆ ಪಡೆದಿದ್ದರು. ಇದೀಗ ಮೃತಳ ಪತಿ ಭಾಸ್ಕರ್ ದೂರು ಹಿಂಪಡೆಯುವುದಾಗಿ ತಿಳಿಸಿದ್ದಾರೆ.
ಡಿಸೆಂಬರ್ 4ರಂದು ಹೈದರಾಬಾದ್ನ ಸಂಧ್ಯಾ ಥಿಯೇಟರ್ ಬಳಿ ತಮ್ಮ ನೆಚ್ಚಿನ ನಟನನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ ಕಾಲ್ತುಳಿತ ಘಟನೆ ಸಂಭವಿಸುತ್ತದೆ. ಈ ಘಟನೆಯಲ್ಲಿ 35 ವರ್ಷದ ಮಹಿಳೆ ಸಾವನ್ನಪ್ಪಿದ್ದರು.
ಈ ಪ್ರಕರಣಕ್ಕರ ಸಂಬಂಧಿಸಿದಂತೆ ಅಲ್ಲು ಅರ್ಜುನ್ನನ್ನು ಇಂದು ಬಂಧಿಸಿ ನಾಂಪಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇದೀಗ ಕೋರ್ಟ್ ಅಲ್ಲು ಅರ್ಜುನ್ ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಚಂಚಲಗುಡ ಜೈಲು ಪಾಲಾಗಲಿದ್ದರು. ಆದರೆ ಇದೀಗ ಕೋರ್ಟ್ ಮಧ್ಯಂತರ ಜಾಮೀನು ಪಡೆದು ಹೊರ ಬಂದಿದ್ದಾರೆ.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…