ಪುಷ್ಪ-2 ಸಿನಿಮಾದ ಪ್ರೀಮಿಯರ್ ಶೋ ವೇಳೆ ನಡೆದ ಘಟನೆಗೆ ಸಂಬಂಧಿಸಿದಂತೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಪೊಲೀಸರು Arrest) ಬಂಧಿಸಿದ್ದರು. ಮಾತ್ರವಲ್ಲ ನಟನಿಗೆ 14 ದಿನ ನ್ಯಾಯಾಂಗ ಬಂಧವನ್ನೂ ವಿಧಿಸಲಾಗಿತ್ತು. ಆದರೀಗ ಅಲ್ಲು ಅರ್ಜುನ್ಗೆ ಕೋರ್ಟ್ ಜಾಮೀನು ನೀಡಿದೆ.
ಜೈಲಿಗೆ ಸೇರಿದ ತಕ್ಷಣವೇ ನಟನಿಗೆ ಜಾಮೀನು ಸಿಕ್ಕಿದೆ. ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಮೃತ ರೇವತಿ ಅವರ ಪತಿ ಭಾಸ್ಕರ್ ನೀಡಿದ ದೂರಿನ ಮೇಲೆ ಪೊಲೀಸರು ಅಲ್ಲು ಅರ್ಜುನ್ ಅವರನ್ನು ವಶಕ್ಕೆ ಪಡೆದಿದ್ದರು. ಇದೀಗ ಮೃತಳ ಪತಿ ಭಾಸ್ಕರ್ ದೂರು ಹಿಂಪಡೆಯುವುದಾಗಿ ತಿಳಿಸಿದ್ದಾರೆ.
ಡಿಸೆಂಬರ್ 4ರಂದು ಹೈದರಾಬಾದ್ನ ಸಂಧ್ಯಾ ಥಿಯೇಟರ್ ಬಳಿ ತಮ್ಮ ನೆಚ್ಚಿನ ನಟನನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ ಕಾಲ್ತುಳಿತ ಘಟನೆ ಸಂಭವಿಸುತ್ತದೆ. ಈ ಘಟನೆಯಲ್ಲಿ 35 ವರ್ಷದ ಮಹಿಳೆ ಸಾವನ್ನಪ್ಪಿದ್ದರು.
ಈ ಪ್ರಕರಣಕ್ಕರ ಸಂಬಂಧಿಸಿದಂತೆ ಅಲ್ಲು ಅರ್ಜುನ್ನನ್ನು ಇಂದು ಬಂಧಿಸಿ ನಾಂಪಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇದೀಗ ಕೋರ್ಟ್ ಅಲ್ಲು ಅರ್ಜುನ್ ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಚಂಚಲಗುಡ ಜೈಲು ಪಾಲಾಗಲಿದ್ದರು. ಆದರೆ ಇದೀಗ ಕೋರ್ಟ್ ಮಧ್ಯಂತರ ಜಾಮೀನು ಪಡೆದು ಹೊರ ಬಂದಿದ್ದಾರೆ.
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…