‘ಪುಷ್ಪ-2’ ಸಿನಿಮಾ ಖ್ಯಾತಿಯ ಐಕಾನ್ ಸ್ಟಾರ್ ನಟ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಡಿಸೆಂಬರ್ 4 ರಂದು ‘ಪುಷ್ಪ 2’ ಸಿನಿಮಾ ರಿಲೀಸ್ ದಿನ ಸಂಧ್ಯಾ ಥಿಯೇಟರ್ ಬಳಿ ಕಾಲ್ತುಳಿತ ನಡೆದಿತ್ತು. ಇದೇ ಕಾಲ್ತುಳಿತದಲ್ಲಿ ರೇವತಿ ಎಂಬ ಮಹಿಳೆ ಮೃತಪಟ್ಟಿದ್ದರು.
ಕಾಲ್ತುಳಿತ ಘಟನೆ ಕುರಿತು ಚಿಕ್ಕಡಪಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಕೂಡ ಪೊಲೀಸರು ಆರೋಪಿಯನ್ನಾಗಿ ಸೇರಿಸಿದ್ದರು. ಈ ಹಿನ್ನೆಲೆ ಅಲ್ಲು ಅರ್ಜುನ್ ಬಂಧನವಾಗಿದೆ. ಆದರೆ, ಅಲ್ಲು ಅರ್ಜುನ್ ಈಗಾಗಲೇ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದರು. ಆದ್ರೆ ಅಲ್ಲು ಅರ್ಜುನ್ ಹಠಾತ್ ಬಂಧನದಿಂದ ಚಿತ್ರರಂಗದ ಜೊತೆಗೆ ಅಭಿಮಾನಿಗಳು ಬೆಚ್ಚಿಬಿದ್ದಿದ್ದಾರೆ.
ಇದರಿಂದ ಅಲ್ಲಿದ್ದ ಅಭಿಮಾನಿಗಳು ತನ್ನ ನೆಚ್ಚಿನ ನಟನ ಜೊತೆ ಫೋಟೋ ತೆಗಿಸಿಕೊಳ್ಳಲು ಮುಗಿ ಬಿದ್ದಿದ್ದರು. ಈ ವೇಳೆ ಅಲ್ಲಿದ್ದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ ಹಿನ್ನೆಲೆಯಲ್ಲಿ ಜನ ಓಡುವ ವೇಳೆ ಕಾಲ್ತುಳಿತ ಸಂಭವಿಸತ್ತು. ಈ ವೇಳೆ ಮಹಿಳೆಯೊಬ್ಬರು ಮೃತಪಟ್ಟು ಆಕೆಯ ಮಗ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…