ಐಕಾನ್ ಸ್ಟಾರ್ ನಟ ಅಲ್ಲು ಅರ್ಜುನ್‌ ಅರೆಸ್ಟ್

‘ಪುಷ್ಪ-2’ ಸಿನಿಮಾ ಖ್ಯಾತಿಯ ಐಕಾನ್ ಸ್ಟಾರ್ ನಟ ಅಲ್ಲು ಅರ್ಜುನ್‌ ಅವರನ್ನು ಚಿಕ್ಕಡಪಲ್ಲಿ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

ಡಿಸೆಂಬರ್‌ 4 ರಂದು ‘ಪುಷ್ಪ 2’ ಸಿನಿಮಾ ರಿಲೀಸ್ ದಿನ ಸಂಧ್ಯಾ ಥಿಯೇಟರ್ ಬಳಿ ಕಾಲ್ತುಳಿತ ನಡೆದಿತ್ತು. ಇದೇ ಕಾಲ್ತುಳಿತದಲ್ಲಿ ರೇವತಿ ಎಂಬ ಮಹಿಳೆ ಮೃತಪಟ್ಟಿದ್ದರು.

ಕಾಲ್ತುಳಿತ ಘಟನೆ ಕುರಿತು ಚಿಕ್ಕಡಪಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಕೂಡ ಪೊಲೀಸರು ಆರೋಪಿಯನ್ನಾಗಿ ಸೇರಿಸಿದ್ದರು. ಈ ಹಿನ್ನೆಲೆ ಅಲ್ಲು ಅರ್ಜುನ್‌ ಬಂಧನವಾಗಿದೆ. ಆದರೆ, ಅಲ್ಲು ಅರ್ಜುನ್ ಈಗಾಗಲೇ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದರು. ಆದ್ರೆ ಅಲ್ಲು ಅರ್ಜುನ್‌ ಹಠಾತ್ ಬಂಧನದಿಂದ ಚಿತ್ರರಂಗದ ಜೊತೆಗೆ ಅಭಿಮಾನಿಗಳು ಬೆಚ್ಚಿಬಿದ್ದಿದ್ದಾರೆ.

ಡಿಸೆಂಬರ್ 4 ರಂದು ಸಂಧ್ಯಾ ಥಿಯೇಟರ್ ನಲ್ಲಿ ಪುಷ್ಪ ೨ ಚಿತ್ರದ ಪ್ರೀಮಿಯರ್ ಶೋ ನೋಡಲು ಮಹಿಳೆಯೊಬ್ಬರು ತನ್ನ ಪತಿ ಹಾಗೂ ಇಬ್ಬರು ಮಕ್ಕಳೊಂದಿಗೆ ಚಿತ್ರಮಂದಿರಕ್ಕೆ ಬಂದಿದ್ದರು. ಬುಧವಾರ ರಾತ್ರಿ ಸುಮಾರು 10;30 ಸುಮಾರಿಗೆ ಚಿತ್ರದ ಪ್ರೀಮಿಯರ್ ಶೋ ನಡೆಯುತಿದ್ದ ವೇಳೆ ನಟ ಅಲ್ಲು ಅರ್ಜುನ್ ಚಿತ್ರ ಮಂದಿರಕ್ಕೆ ಭೇಟಿ ನೀಡಿದ್ದರು.

ಇದರಿಂದ ಅಲ್ಲಿದ್ದ ಅಭಿಮಾನಿಗಳು ತನ್ನ ನೆಚ್ಚಿನ ನಟನ ಜೊತೆ ಫೋಟೋ ತೆಗಿಸಿಕೊಳ್ಳಲು ಮುಗಿ ಬಿದ್ದಿದ್ದರು. ಈ ವೇಳೆ ಅಲ್ಲಿದ್ದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ ಹಿನ್ನೆಲೆಯಲ್ಲಿ ಜನ ಓಡುವ ವೇಳೆ ಕಾಲ್ತುಳಿತ ಸಂಭವಿಸತ್ತು. ಈ ವೇಳೆ ಮಹಿಳೆಯೊಬ್ಬರು ಮೃತಪಟ್ಟು ಆಕೆಯ ಮಗ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

19 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

24 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

2 days ago