‘ಐತಿಹಾಸಿಕ ಪಾತ್ರಗಳಿಂದ ಕರ್ನಾಟಕ ಇತಿಹಾಸದ ವೈಭವ ಮರುಸೃಷ್ಟಿ ಮಾಡಿದವರು ಡಾ.ರಾಜ್ ಕುಮಾರ್’

ಡಾ.ರಾಜಕುಮಾರ್ ಅವರ ಕನ್ನಡ ನಾಡು, ನುಡಿಯ ಪ್ರೀತಿ ಅನನ್ಯವಾದದ್ದು. ಐತಿಹಾಸಿಕ ಪಾತ್ರಗಳ ಮೂಲಕ ಕರ್ನಾಟಕ ಇತಿಹಾಸದ ವೈಭವವನ್ನು ಮರುಸೃಷ್ಟಿ ಮಾಡಿದವರು ಎಂದು ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಅಂಗವಾಗಿ ನಡೆದ  ಕನ್ನಡ ಅಭಿಮಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಡಾ.ರಾಜ್ ಕುಮಾರ್ ಗೋಕಾಕ್ ಚಳುವಳಿಯಲ್ಲಿ ಭಾಗವಹಿಸಿ ಕನ್ನಡಿಗರಲ್ಲಿ ಕನ್ನಡ ಪ್ರಜ್ಞೆಯನ್ನು  ಎಚ್ಚರಿಸಿರುವುದನ್ನು ಕನ್ನಡಿಗರು ಎಂದು ಮರೆಯುವುದಿಲ್ಲ.
ಸರಳ, ಸಜ್ಜನ, ನಿಷ್ಠಾವಂತ, ಪ್ರಾಮಾಣಿಕ, ಅಪ್ರತಿಮ  ಕಲಾವಿದ ಎಂದು ಎಲ್ಲಾ ಜನರ ಪ್ರೀತಿಗೆ ಪಾತ್ರರಾದ ಡಾ.ರಾಜಕುಮಾರ ಅವರ ವ್ಯಕ್ತಿತ್ವ ಎಲ್ಲರಿಗೂ ಮಾದರಿ ಎಂದರು.

ಡಾ.ರಾಜ್ ಕುಮಾರ್ ಅವರು ಅಮೆರಿಕ ಸಂಯುಕ್ತ ಸಂಸ್ಥಾನದಲ್ಲಿ ನೀಡಲಾಗುವ ಅತ್ಯುನ್ನತ ಗೌರವವಾದ ಕೆಂಟುಕಿ ಕರ್ನಲ್ ಪ್ರಶಸ್ತಿಯನ್ನು ಪಡೆದ ಏಕೈಕ ಭಾರತೀಯ ನಟರಾಗಿದ್ದಾರೆ. ಡಾ.ರಾಜಕುಮಾರ್ ತನಗೆ ಪ್ರೀತಿ, ಯಶಸ್ಸು ಹಾಗು ಬದುಕು ಕೊಟ್ಟ ಕನ್ನಡ ಭಾಷೆ ಮತ್ತು ಸಂಸ್ಕೃತಿಗೆ ಸ್ಮರಣೀಯ ಕಾಣಿಕೆ ನೀಡಿದ್ದಾರೆ. ಡಾ.ರಾಜ್ ಕುಮಾರ್  ಅವರ ವೈಯಕ್ತಿಕ ಮತ್ತು ವೃತ್ತಿಪರ ರಂಗಗಳಲ್ಲಿ ಅವರ ಅತ್ಯಂತ ಶಿಸ್ತುಬದ್ಧ ಮತ್ತು ಸರಳ ಜೀವನಶೈಲಿಯನ್ನು  ಎಲ್ಲರೂ ಗೌರವಪೂರ್ವಕವಾಗಿ ಸ್ಮರಿಸುತ್ತಾರೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ಮಾತನಾಡಿ, ಡಾ.ರಾಜ್ ಕುಮಾರ್ ಎಲ್ಲ ವರ್ಗದ ಪ್ರೇಕ್ಷಕರ ಮನಮುಟ್ಟುವ ಪಾತ್ರಗಳನ್ನು ಅಭಿನಯಿಸಿದ್ದಾರೆ. ಮೇರು ನಟರಾದ ಸಂದರ್ಭದಲ್ಲೂ ರೈತ, ಕೂಲಿಕಾರ, ವಾದ್ಯಗಾರ,  ಲಾಯರ್, ಅಧ್ಯಾಪಕ ಮುಂತಾದ ನೂರಾರು ಪಾತ್ರಗಳನ್ನು ಅಭಿನಯಿಸುವಾಗ ಸಾಕಷ್ಟು ಸಿದ್ದತೆ ಮಾಡಿಕೊಳ್ಳುತ್ತಿದ್ದರು.   ನಟನೆ ಮತ್ತು ಗಾಯನ ಎರಡರಲ್ಲೂ ಪ್ರಬುದ್ಧ ಕಲಾವಿದರಾದ ಡಾ.ರಾಜ್ ಕುಮಾರ್ ಎಲ್ಲಾ ಕಲಾವಿದರಿಗೂ ಮಾದರಿ ಆಗಿದ್ದಾರೆ. ಕನ್ನಡಿಗರ ಮನಸ್ಸಿನಲ್ಲಿ  ಡಾ.ರಾಜ್ ಕುಮಾರ್ ಶಾಶ್ವತ ಸ್ಥಾನ ಪಡೆದುಕೊಂಡಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಕನ್ನಡಪರ ಹಿರಿಯ ಹೋರಾಟಗಾರರುಗಳಾದ ಗುರುರಾಜಪ್ಪ,  ಟಿ.ಜಿ.ಮಂಜುನಾಥ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್,  ನಿಕಟಪೂರ್ವ  ಕೋಶಾಧ್ಯಕ್ಷ ನಂ.ಮಹಾದೇವ್, ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ‌‌ ಆಯುಕ್ತ ವೆಂಕಟರಾಜು, ಸೂರ್ಯ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಎಂ.ಸಿ.ಮಂಜುನಾಥ್,  ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಅಣ್ಣಯ್ಯ, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾಮಹಾದೇವ್, ಗೌರವ ಕಾರ್ಯದರ್ಶಿ ಎ.ಜಯರಾಮ್, ಕೋಶಾಧ್ಯಕ್ಷ  ಸಾ.ಲ.ಕಮಲನಾಥ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಕಸಬಾ ಹೋಬಳಿ ಘಟಕದ ಅಧ್ಯಕ್ಷ ದಾದಾಪೀರ್, ಪ್ರತಿನಿಧಿ ನಾಗರತ್ನಮ್ಮ, ಷಫೀರ್,  ಕನ್ನಡ ಜಾಗೃತ ವೇದಿಕೆ ಜಿಲ್ಲಾ ಅಧ್ಯಕ್ಷ ನಾಗರಾಜು,  ಕಲಾವಿದರಾದ ದರ್ಗಾಜೋಗಿಹಳ್ಳಿ ಮಲ್ಲೇಶ್, ರಾಮಕೃಷ್ಣ  ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

3 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

5 hours ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

11 hours ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

12 hours ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

24 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

24 hours ago