‘ಐತಿಹಾಸಿಕ ಪಾತ್ರಗಳಿಂದ ಕರ್ನಾಟಕ ಇತಿಹಾಸದ ವೈಭವ ಮರುಸೃಷ್ಟಿ ಮಾಡಿದವರು ಡಾ.ರಾಜ್ ಕುಮಾರ್’

ಡಾ.ರಾಜಕುಮಾರ್ ಅವರ ಕನ್ನಡ ನಾಡು, ನುಡಿಯ ಪ್ರೀತಿ ಅನನ್ಯವಾದದ್ದು. ಐತಿಹಾಸಿಕ ಪಾತ್ರಗಳ ಮೂಲಕ ಕರ್ನಾಟಕ ಇತಿಹಾಸದ ವೈಭವವನ್ನು ಮರುಸೃಷ್ಟಿ ಮಾಡಿದವರು ಎಂದು ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಅಂಗವಾಗಿ ನಡೆದ  ಕನ್ನಡ ಅಭಿಮಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಡಾ.ರಾಜ್ ಕುಮಾರ್ ಗೋಕಾಕ್ ಚಳುವಳಿಯಲ್ಲಿ ಭಾಗವಹಿಸಿ ಕನ್ನಡಿಗರಲ್ಲಿ ಕನ್ನಡ ಪ್ರಜ್ಞೆಯನ್ನು  ಎಚ್ಚರಿಸಿರುವುದನ್ನು ಕನ್ನಡಿಗರು ಎಂದು ಮರೆಯುವುದಿಲ್ಲ.
ಸರಳ, ಸಜ್ಜನ, ನಿಷ್ಠಾವಂತ, ಪ್ರಾಮಾಣಿಕ, ಅಪ್ರತಿಮ  ಕಲಾವಿದ ಎಂದು ಎಲ್ಲಾ ಜನರ ಪ್ರೀತಿಗೆ ಪಾತ್ರರಾದ ಡಾ.ರಾಜಕುಮಾರ ಅವರ ವ್ಯಕ್ತಿತ್ವ ಎಲ್ಲರಿಗೂ ಮಾದರಿ ಎಂದರು.

ಡಾ.ರಾಜ್ ಕುಮಾರ್ ಅವರು ಅಮೆರಿಕ ಸಂಯುಕ್ತ ಸಂಸ್ಥಾನದಲ್ಲಿ ನೀಡಲಾಗುವ ಅತ್ಯುನ್ನತ ಗೌರವವಾದ ಕೆಂಟುಕಿ ಕರ್ನಲ್ ಪ್ರಶಸ್ತಿಯನ್ನು ಪಡೆದ ಏಕೈಕ ಭಾರತೀಯ ನಟರಾಗಿದ್ದಾರೆ. ಡಾ.ರಾಜಕುಮಾರ್ ತನಗೆ ಪ್ರೀತಿ, ಯಶಸ್ಸು ಹಾಗು ಬದುಕು ಕೊಟ್ಟ ಕನ್ನಡ ಭಾಷೆ ಮತ್ತು ಸಂಸ್ಕೃತಿಗೆ ಸ್ಮರಣೀಯ ಕಾಣಿಕೆ ನೀಡಿದ್ದಾರೆ. ಡಾ.ರಾಜ್ ಕುಮಾರ್  ಅವರ ವೈಯಕ್ತಿಕ ಮತ್ತು ವೃತ್ತಿಪರ ರಂಗಗಳಲ್ಲಿ ಅವರ ಅತ್ಯಂತ ಶಿಸ್ತುಬದ್ಧ ಮತ್ತು ಸರಳ ಜೀವನಶೈಲಿಯನ್ನು  ಎಲ್ಲರೂ ಗೌರವಪೂರ್ವಕವಾಗಿ ಸ್ಮರಿಸುತ್ತಾರೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ಮಾತನಾಡಿ, ಡಾ.ರಾಜ್ ಕುಮಾರ್ ಎಲ್ಲ ವರ್ಗದ ಪ್ರೇಕ್ಷಕರ ಮನಮುಟ್ಟುವ ಪಾತ್ರಗಳನ್ನು ಅಭಿನಯಿಸಿದ್ದಾರೆ. ಮೇರು ನಟರಾದ ಸಂದರ್ಭದಲ್ಲೂ ರೈತ, ಕೂಲಿಕಾರ, ವಾದ್ಯಗಾರ,  ಲಾಯರ್, ಅಧ್ಯಾಪಕ ಮುಂತಾದ ನೂರಾರು ಪಾತ್ರಗಳನ್ನು ಅಭಿನಯಿಸುವಾಗ ಸಾಕಷ್ಟು ಸಿದ್ದತೆ ಮಾಡಿಕೊಳ್ಳುತ್ತಿದ್ದರು.   ನಟನೆ ಮತ್ತು ಗಾಯನ ಎರಡರಲ್ಲೂ ಪ್ರಬುದ್ಧ ಕಲಾವಿದರಾದ ಡಾ.ರಾಜ್ ಕುಮಾರ್ ಎಲ್ಲಾ ಕಲಾವಿದರಿಗೂ ಮಾದರಿ ಆಗಿದ್ದಾರೆ. ಕನ್ನಡಿಗರ ಮನಸ್ಸಿನಲ್ಲಿ  ಡಾ.ರಾಜ್ ಕುಮಾರ್ ಶಾಶ್ವತ ಸ್ಥಾನ ಪಡೆದುಕೊಂಡಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಕನ್ನಡಪರ ಹಿರಿಯ ಹೋರಾಟಗಾರರುಗಳಾದ ಗುರುರಾಜಪ್ಪ,  ಟಿ.ಜಿ.ಮಂಜುನಾಥ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್,  ನಿಕಟಪೂರ್ವ  ಕೋಶಾಧ್ಯಕ್ಷ ನಂ.ಮಹಾದೇವ್, ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ‌‌ ಆಯುಕ್ತ ವೆಂಕಟರಾಜು, ಸೂರ್ಯ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಎಂ.ಸಿ.ಮಂಜುನಾಥ್,  ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಅಣ್ಣಯ್ಯ, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾಮಹಾದೇವ್, ಗೌರವ ಕಾರ್ಯದರ್ಶಿ ಎ.ಜಯರಾಮ್, ಕೋಶಾಧ್ಯಕ್ಷ  ಸಾ.ಲ.ಕಮಲನಾಥ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಕಸಬಾ ಹೋಬಳಿ ಘಟಕದ ಅಧ್ಯಕ್ಷ ದಾದಾಪೀರ್, ಪ್ರತಿನಿಧಿ ನಾಗರತ್ನಮ್ಮ, ಷಫೀರ್,  ಕನ್ನಡ ಜಾಗೃತ ವೇದಿಕೆ ಜಿಲ್ಲಾ ಅಧ್ಯಕ್ಷ ನಾಗರಾಜು,  ಕಲಾವಿದರಾದ ದರ್ಗಾಜೋಗಿಹಳ್ಳಿ ಮಲ್ಲೇಶ್, ರಾಮಕೃಷ್ಣ  ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

3 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

12 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

13 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago