ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೋಡಿಪಾಳ್ಯ ಗ್ರಾಮದಲ್ಲಿ ಇಂದಿಗೂ ನಲವತ್ತಕ್ಕೂ ಹೆಚ್ಚು ಕುಟುಂಬಗಳು ಗುಡಿಸಲಿನಲ್ಲೇ ಜೀವನ ಸಾಗಿಸುತ್ತಿರುವುದು ವ್ಯವಸ್ಥೆಯ ವೈಫಲ್ಯಕ್ಕೆ ಸಾಕ್ಷಿಯಾಗಿದೆ.

ಚನ್ನದೇವಿ ಅಗ್ರಹಾರ ಗ್ರಾಮ ಪಂಚಾಯಿತಿಯಿಂದ ಕೇವಲ ನೂರು ಮೀಟರ್ ದೂರದಲ್ಲೇ ಸುಮಾರು 40ಕ್ಕೂ ಹೆಚ್ಚು ಗುಡಿಸಲುಗಳು ನಿರ್ಮಾಣವಾಗಿದ್ದು, ಇಲ್ಲಿ ನೂರಕ್ಕೂ ಹೆಚ್ಚು ಮಂದಿ ವಾಸವಿದ್ದೇವೆ. ಬಹುತೇಕ ಹಕ್ಕಿಪಿಕ್ಕಿ ಜನಾಂಗದ ಕುಟುಂಬಗಳು ಕಳೆದ ಐದು ದಶಕಗಳಿಂದ ಸರ್ಕಾರಿ ಗುಂಡುತೋಪು ಪ್ರದೇಶದಲ್ಲಿ ನೆಲೆಸಿದ್ದರೂ, ನಮಗೆ ಇದುವರೆಗೆ ಸಮರ್ಪಕ ಸರ್ಕಾರಿ ಸೌಲಭ್ಯಗಳು ದೊರೆತಿಲ್ಲ ಎಂದು ಗುಡಿಸಲು ನಿವಾಸಿ ನಾಗಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುಡಿಸಲಿನಲ್ಲಿ ವಾಸಿಸುವ ಹಲವರಿಗೆ ಇನ್ನೂ ಪಿಂಚಣಿ ಸೌಲಭ್ಯ ಸಿಕ್ಕಿಲ್ಲ. ಕೆಲವರಿಗೆ ಆಧಾರ್ ಕಾರ್ಡ್ ಇಲ್ಲದ ಪರಿಸ್ಥಿತಿಯಿದ್ದು, ಇಲ್ಲಿ ಜನಿಸಿದ ಅನೇಕ ಮಕ್ಕಳಿಗೆ ಜನನ ಪ್ರಮಾಣ ಪತ್ರವೇ ಇಲ್ಲ. ಮತದಾನದ ಸಮಯದಲ್ಲಿ ಮಾತ್ರ ಜನಪ್ರತಿನಿಧಿಗಳು ಬಂದು ಮತದಾರರ ಗುರುತಿನ ಚೀಟಿ ಮಾಡಿಸಿಕೊಟ್ಟಿದ್ದಾರೆ ಹೊರತು ಬೇರೆ ಯಾವುದೇ ದಾಖಲೆ ಅಥವಾ ಸೌಲಭ್ಯ ಕಲ್ಪಿಸಿಲ್ಲ ಎಂದು ಆರೋಪಿಸಿದ್ದಾರೆ.

ಮಾಜಿ ಗ್ರಾಮ ಪಂಚಾಯಿತಿ ಸದಸ್ಯೆ ಕಾಂತಲಕ್ಷ್ಮೀ ಮಾತನಾಡಿ, ಮದುರೆ ಕೆರೆಯ ಅಂಚಿನಲ್ಲಿ ಈ ಗುಡಿಸಲುಗಳು ನಿರ್ಮಾಣವಾಗಿರುವುದರಿಂದ ಮಳೆಗಾಲದಲ್ಲಿ ಅಪಾಯ ಮತ್ತಷ್ಟು ಹೆಚ್ಚಾಗುತ್ತದೆ. ಮಳೆ ಬಂದರೆ ನೀರು ಮನೆಗಳಿಗೆ ನುಗ್ಗುವ ಭೀತಿ ಇದ್ದು, ಕೆರೆ ಕೋಡಿ ಹೊಡೆದರೆ ಸಂಪೂರ್ಣ ಗುಡಿಸಲುಗಳು ನೀರಿನಲ್ಲಿ ಕೊಚ್ಚಿ ಹೋಗುವ ಆತಂಕದಲ್ಲಿ ಜನ ಜೀವನ ಸಾಗಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ರಾತ್ರಿ ವೇಳೆಯಲ್ಲಿ ಮಕ್ಕಳಿಗೆ ಓದಲು ಸಮರ್ಪಕ ವಿದ್ಯುತ್ ವ್ಯವಸ್ಥೆಯಿಲ್ಲದ ಕಾರಣ ಬೀದಿ ದೀಪದ ಕೆಳಗೆ ಕುಳಿತು ವಿದ್ಯಾಭ್ಯಾಸ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಜೊತೆಗೆ, ಮೃತಪಟ್ಟವರ ಅಂತ್ಯಸಂಸ್ಕಾರಕ್ಕೂ ಜಾಗವಿಲ್ಲ ಎಂದು ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.

“ನಾವು ಸಾಯೋದರ ಒಳಗೆ ಒಂದು ಮನೆ ಕಟ್ಟಿಕೊಡಿ” ಎಂದು ವಯೋವೃದ್ಧರು ಸರ್ಕಾರದ ಮುಂದೆ ಮನವಿ ಮಾಡುತ್ತಿರುವ ದೃಶ್ಯ ಮನಕಲಕುವಂತಿದೆ. ಹಕ್ಕಿಪಿಕ್ಕಿ ಸಮುದಾಯಕ್ಕೆ ಜಾಗ ನೀಡುವ ವಿಚಾರದಲ್ಲಿ ಪಂಚಾಯಿತಿಯ ಕೆಲ ಸದಸ್ಯರು ನಿರಾಸಕ್ತಿ ತೋರುತ್ತಿದ್ದಾರೆ ಎನ್ನುವ ಆರೋಪವೂ ಕೇಳಿಬಂದಿದೆ.

ಈ ಸ್ಥಳಕ್ಕೆ ಕಳೆದ ವರ್ಷ ಮಕ್ಕಳ ಆಯೋಗದ ಅಧ್ಯಕ್ಷರು ಸಹ ಭೇಟಿ ನೀಡಿದ್ದರು. ನಂತರ 2026ರ ಜನವರಿ 2ರಂದು ಜಿಲ್ಲಾಧಿಕಾರಿ, ತಹಶೀಲ್ದಾರ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ‌ ಪರಿಶೀಲನೆ ನಡೆಸಿದ್ದರು. ಇಲ್ಲಿನ ನಿವಾಸಿಗಳಿಗೆ ಸಲ್ಲಬೇಕಾದ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದ್ದರು. ಆದರೆ, ಅಧಿಕಾರಿಗಳು ಇದೂವರೆಗೆ ಯಾವುದೇ ಸೌಕರ್ಯಗಳನ್ನು ಒದಗಿಸದೇ ನಿರ್ಲಕ್ಷ್ಯವಹಿಸುತ್ತಿದ್ದಾರೆ. ದಾಖಲೆಗಳಿದ್ದರೆ ಆಯೋಶ್ರಯ ಯೋಜನೆಗೆ ಅನುಕೂಲವಾಗುತ್ತವೆ. ಆದರೆ, ಆ ದಾಖಲೆಗಳನ್ನು ಮಾಡಿಕೊಡಲು ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದಾರೆ. ಅಸ್ಪೃಶ್ಯತೆಯನ್ನು ಜೀವಂತವಾಗಿ ಇಡಲು ಯತ್ನ ನಡೆಯುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ ಚಿದಾನಂದ ಆರೋಪಿಸಿದರು..

ಬೆಂಗಳೂರು ನಗರದ ಕೂಗಳತೆ ದೂರದಲ್ಲೇ ಇಂತಹ ದುಸ್ಥಿತಿ ಮುಂದುವರಿದಿರುವುದು ಸರ್ಕಾರ ಹಾಗೂ ಜನಪ್ರತಿನಿಧಿಗಳಿಗೆ ಕಪ್ಪು ಚುಕ್ಕಿಯಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಂಡು ಈ ಕುಟುಂಬಗಳಿಗೆ ಶಾಶ್ವತ ನೆಲೆ ಕಲ್ಪಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

4 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

4 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

6 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

10 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

16 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago