ಐದು ಫಲಾನುಭವಿ ಆಧಾರಿತ ಯೋಜನೆಗಳ ಸೌಲಭ್ಯ ಪಡೆಯಲು ವಿಕಲಚೇತನರಿಂದ ಅರ್ಜಿ ಆಹ್ವಾನ

2025-26ನೇ ಸಾಲಿನ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ 05 ಫಲಾನುಭವಿ ಆಧಾರಿತ ಯೋಜನೆಗಳಿಗೆ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿವಾಹ ಪ್ರೋತ್ಸಾಹಧನ ಯೋಜನೆಯ ಹೂಡಿಕೆಯ ರೂಪದಲ್ಲಿ ವಿಕಲಚೇತನ ವ್ಯಕ್ತಿಗಳೊಡನೆ ವಿವಾಹ ಏರ್ಪಡುವ ಪ್ರಕರಣಗಳಲ್ಲಿ, ವಿಕಲಚೇತನ ವ್ಯಕ್ತಿಯ ಹೆಸರಿನಲ್ಲಿ ರೂ.50 ಸಾವಿರವನ್ನು ನೀಡಲಾಗುವುದು.
ಎಸ್.ಎಸ್.ಎಲ್.ಸಿ ನಂತರ ವಿಕಲಚೇತನ
ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆ.
ಬುದ್ಧಿಮಾಂದ್ಯರು, ಸೆರಬ್ರಲ್ ಪಾಲ್ಸಿ, ಆಟಿಸಂ ಮತ್ತು ಬಹುವಿಧ ಅಂಗವಿಕಲತೆಗೆ ಒಳಗಾದ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ವಿಕಲಚೇತನರಿಗೆ “ನಿರಾಮಯ” ಆರೋಗ್ಯ ವಿಮಾ ಯೋಜನೆ.
07 ಬಗೆಯ ವಿಕಲಚೇತನರ ಆರೈಕೆದಾರರ ಪ್ರೋತ್ಸಾಹಧನ ಯೋಜನೆ (ಶೇ.75 ಮತ್ತು ಹೆಚ್ಚಿನ ಅಂಗವಿಕಲತೆ ಹೊಂದಿರುವ).
05 ವಿಕಲಚೇತನ ಕ್ರೀಡಾ ಪಟುಗಳಿಗೆ ಸಾಧನೆ ಯೋಜನೆಯಡಿ ಧನ ಸಹಾಯ.

ಅರ್ಜಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹ ವಿಕಲಚೇತನರು ಹತ್ತಿರದ ಗ್ರಾಮ ಪಂಚಾಯಿತಿ,ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಅಥವಾ ತಾಲ್ಲೂಕು ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ/ನಗರ/ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರುಗಳಿಂದ ಅಥವಾ ಈ ಕಛೇರಿಯಿಂದ ನಿಗದಿತ ಅರ್ಜಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಅಕ್ಟೋಬರ್ 10ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಸಹಾಯವಾಣಿ ಕೇಂದ್ರದ ದೂ,ಸಂಖ್ಯೆ:080-29787441 ಗೆ ಅಥವಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗೆ ಕಚೇರಿ ಸಮಯದಲ್ಲಿ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.

Ramesh Babu

Journalist

Recent Posts

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

1 hour ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

15 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

16 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

17 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

18 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

1 day ago