2025-26ನೇ ಸಾಲಿನ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ 05 ಫಲಾನುಭವಿ ಆಧಾರಿತ ಯೋಜನೆಗಳಿಗೆ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿವಾಹ ಪ್ರೋತ್ಸಾಹಧನ ಯೋಜನೆಯ ಹೂಡಿಕೆಯ ರೂಪದಲ್ಲಿ ವಿಕಲಚೇತನ ವ್ಯಕ್ತಿಗಳೊಡನೆ ವಿವಾಹ ಏರ್ಪಡುವ ಪ್ರಕರಣಗಳಲ್ಲಿ, ವಿಕಲಚೇತನ ವ್ಯಕ್ತಿಯ ಹೆಸರಿನಲ್ಲಿ ರೂ.50 ಸಾವಿರವನ್ನು ನೀಡಲಾಗುವುದು.
ಎಸ್.ಎಸ್.ಎಲ್.ಸಿ ನಂತರ ವಿಕಲಚೇತನ
ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆ.
ಬುದ್ಧಿಮಾಂದ್ಯರು, ಸೆರಬ್ರಲ್ ಪಾಲ್ಸಿ, ಆಟಿಸಂ ಮತ್ತು ಬಹುವಿಧ ಅಂಗವಿಕಲತೆಗೆ ಒಳಗಾದ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ವಿಕಲಚೇತನರಿಗೆ “ನಿರಾಮಯ” ಆರೋಗ್ಯ ವಿಮಾ ಯೋಜನೆ.
07 ಬಗೆಯ ವಿಕಲಚೇತನರ ಆರೈಕೆದಾರರ ಪ್ರೋತ್ಸಾಹಧನ ಯೋಜನೆ (ಶೇ.75 ಮತ್ತು ಹೆಚ್ಚಿನ ಅಂಗವಿಕಲತೆ ಹೊಂದಿರುವ).
05 ವಿಕಲಚೇತನ ಕ್ರೀಡಾ ಪಟುಗಳಿಗೆ ಸಾಧನೆ ಯೋಜನೆಯಡಿ ಧನ ಸಹಾಯ.
ಅರ್ಜಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹ ವಿಕಲಚೇತನರು ಹತ್ತಿರದ ಗ್ರಾಮ ಪಂಚಾಯಿತಿ,ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಅಥವಾ ತಾಲ್ಲೂಕು ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ/ನಗರ/ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರುಗಳಿಂದ ಅಥವಾ ಈ ಕಛೇರಿಯಿಂದ ನಿಗದಿತ ಅರ್ಜಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಅಕ್ಟೋಬರ್ 10ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಸಹಾಯವಾಣಿ ಕೇಂದ್ರದ ದೂ,ಸಂಖ್ಯೆ:080-29787441 ಗೆ ಅಥವಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗೆ ಕಚೇರಿ ಸಮಯದಲ್ಲಿ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…