ಐದು ವರ್ಷದ ನಂತರ ಅಭಿವೃದ್ಧಿ ರಿಪೋರ್ಟ್ ಕಾರ್ಡ್ ಇಟ್ಟುಕೊಂಡು ನಿಮ್ಮ ಮುಂದೆ ಬಂದು ಮಾತುನಾಡುತ್ತೇನೆ- ಶಾಸಕ ಧೀರಜ್ ಮುನಿರಾಜ್

ಪ್ರತಿಯೊಬ್ಬರು ಇ-ಖಾತಾ ಮಾಡಿಸಿಕೊಳ್ಳಬೇಕು. ಇ-ಖಾತಾ ಬಂದಿದೆ ಎಂದು ಆಸ್ತಿ ಮಾರಾಟ ಮಾಡಬಾರದು. ಇ-ಖಾತೆ ಇದ್ದರೆ ಸಿಂಗಲ್ ಟ್ಯಾಕ್ಸ್ ಕಟ್ಟಲು, ಲೋನ್ ತೆಗೆದುಕೊಳ್ಳಲು ಅನುಕೂಲವಾಗುತ್ತದೆ. ಆದ್ದರಿಂದ ಇ-ಖಾತಾ ಅಭಿಯಾನವನ್ನು ಎಲ್ಲರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.

ನಗರಸಭೆ ವ್ಯಾಪ್ತಿಯ 13ನೇ ವಾರ್ಡ್ ಭುವನೇಶ್ವರಿ ನಗರದಲ್ಲಿ ಇ-ಖಾತಾ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ 16 ಸಾವಿರ ಆಸ್ತಿಗಳು ಇ-ಖಾತಾ, ಬಿ ಖಾತಾ ಬಾಕಿ ಇದೆ. ಅಷ್ಟು‌ ಆಸ್ತಿಗಳಿಗೆ ಇ-ಖಾತಾ, ಬಿ ಖಾತಾ ಮಾಡಿಸಬೇಕು ಎಂದರು.

ಸ್ವಚ್ಛ ಹಾಗೂ ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇನೆ ಎಂದು ಅಂದು ನಾನು‌ ನಿಮಗೆ ಮಾತು ಕೊಟ್ಟಿದ್ದೆ. ಅದರಂತೆ ಈಗ ನಾನು ನಡೆದುಕೊಳ್ಳುತ್ತಿದ್ದೇನೆ ಎಂದರು.

ನಗರಸಭೆಯಲ್ಲಿ ಇಂದು ಯಾವುದಕ್ಕೆ, ಯಾರು ಟ್ಯಾಕ್ಸ್ ಕಟ್ಟಿದ್ದಾರೆ ಎಂಬುದರ ಕುರಿತು ಸೂಕ್ತ ದಾಖಲೆಗಳು ಇಲ್ಲ.‌ ಇನ್ನೂ ಎಷ್ಟು ಟ್ಯಾಕ್ಸ್ ಕಟ್ಟೋದು ಬಾಕಿ ಇದೆ ಎಂಬುದರ ಕುರಿತೂ ದಾಖಲೆ ಇಲ್ಲ. ನಾನಂತು ಸ್ವಚ್ಛವಾಗಿದ್ದೇನೆ. ಎಲ್ಲರನ್ನು ಸ್ವಚ್ಛ‌ ಮಾಡುವುದಕ್ಕೆ ಆಗಲ್ಲ. ಐದು ವರ್ಷದ ನಂತರ ಅಭಿವೃದ್ಧಿ ರಿಪೋರ್ಟ್ ಕಾರ್ಡ್ ಇಟ್ಟುಕೊಂಡು ನಿಮ್ಮ ಮುಂದೆ ಬಂದು ಮಾತುನಾಡುತ್ತೇನೆ ಎಂದರು.

ನಂತರ ವಾರ್ಡ್ ಸದಸ್ಯ ಬಂತಿ ವೆಂಕಟೇಶ್ ಮಾತನಾಡಿ, ನಮ್ಮ ವಾರ್ಡ್ ಅಭಿವೃದ್ಧಿ ಮಾಡಲು ಮೂರುವರೆ ವರ್ಷದಲ್ಲಿ ನಾಲ್ಕೂವರೆ ಕೋಟಿ ಅನುದಾನ ತಂದು ಕಾಮಗಾರಿ ಮಾಡಿ ಅಭಿವೃದ್ಧಿ ಮಾಡಿದ್ದೇನೆ. ಸುಮಾರು 28 ವರ್ಷದಿಂದ ಅಂಗನವಾಡಿ ಸಮಸ್ಯೆ ಇದೆ. ಸ್ವಂತ ಕಟ್ಟಡವಿಲ್ಲದೇ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ನಡೆಸಲಾಗುತ್ತಿದೆ. ಅಂಗನವಾಡಿ ನಡೆಸಲು ಸ್ವಂತ ಕಟ್ಟಡ ನಿರ್ಮಾಣ ಮಾಡುವುದಕ್ಕೆ ಅನುದಾನ‌ ಬಿಡುಗಡೆ ಮಾಡಬೇಕು. ನಮ್ಮ ವಾರ್ಡ್ ನಲ್ಲಿ ಜಲ್ವಂತ ಸಮಸ್ಯೆ‌ಯಾದ ಯುಜಿಡಿ ಸಮಸ್ಯೆ ಇದೆ. ಅದನ್ನು ಕೂಡಲೇ ಬಗೆಹರಿಸಲು ಸಹಕಾರ ನೀಡಬೇಕು ಎಂದು ಶಾಸಕರ ಬಳಿ ಮನವಿ ಮಾಡಿದರು.

ಇ-ಖಾತಾ ವಿತರಣಾ ಕಾರ್ಯಕ್ರಮದಲ್ಲಿ ಸುಮಾರು 200‌ ಮಂದಿಗೆ ಇ-ಖಾತಾ ಪತ್ರ ವಿತರಣೆ ಮಾಡಲಾಯಿತು.

ಈ ವೇಳೆ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ವಾರ್ಡ್ ನ ಪ್ರಮುಖ ಮುಖಂಡರು, ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

8 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

11 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

11 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

1 day ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

1 day ago