ಪ್ರತಿಯೊಬ್ಬರು ಇ-ಖಾತಾ ಮಾಡಿಸಿಕೊಳ್ಳಬೇಕು. ಇ-ಖಾತಾ ಬಂದಿದೆ ಎಂದು ಆಸ್ತಿ ಮಾರಾಟ ಮಾಡಬಾರದು. ಇ-ಖಾತೆ ಇದ್ದರೆ ಸಿಂಗಲ್ ಟ್ಯಾಕ್ಸ್ ಕಟ್ಟಲು, ಲೋನ್ ತೆಗೆದುಕೊಳ್ಳಲು ಅನುಕೂಲವಾಗುತ್ತದೆ. ಆದ್ದರಿಂದ ಇ-ಖಾತಾ ಅಭಿಯಾನವನ್ನು ಎಲ್ಲರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.
ನಗರಸಭೆ ವ್ಯಾಪ್ತಿಯ 13ನೇ ವಾರ್ಡ್ ಭುವನೇಶ್ವರಿ ನಗರದಲ್ಲಿ ಇ-ಖಾತಾ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ 16 ಸಾವಿರ ಆಸ್ತಿಗಳು ಇ-ಖಾತಾ, ಬಿ ಖಾತಾ ಬಾಕಿ ಇದೆ. ಅಷ್ಟು ಆಸ್ತಿಗಳಿಗೆ ಇ-ಖಾತಾ, ಬಿ ಖಾತಾ ಮಾಡಿಸಬೇಕು ಎಂದರು.
ಸ್ವಚ್ಛ ಹಾಗೂ ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇನೆ ಎಂದು ಅಂದು ನಾನು ನಿಮಗೆ ಮಾತು ಕೊಟ್ಟಿದ್ದೆ. ಅದರಂತೆ ಈಗ ನಾನು ನಡೆದುಕೊಳ್ಳುತ್ತಿದ್ದೇನೆ ಎಂದರು.
ನಗರಸಭೆಯಲ್ಲಿ ಇಂದು ಯಾವುದಕ್ಕೆ, ಯಾರು ಟ್ಯಾಕ್ಸ್ ಕಟ್ಟಿದ್ದಾರೆ ಎಂಬುದರ ಕುರಿತು ಸೂಕ್ತ ದಾಖಲೆಗಳು ಇಲ್ಲ. ಇನ್ನೂ ಎಷ್ಟು ಟ್ಯಾಕ್ಸ್ ಕಟ್ಟೋದು ಬಾಕಿ ಇದೆ ಎಂಬುದರ ಕುರಿತೂ ದಾಖಲೆ ಇಲ್ಲ. ನಾನಂತು ಸ್ವಚ್ಛವಾಗಿದ್ದೇನೆ. ಎಲ್ಲರನ್ನು ಸ್ವಚ್ಛ ಮಾಡುವುದಕ್ಕೆ ಆಗಲ್ಲ. ಐದು ವರ್ಷದ ನಂತರ ಅಭಿವೃದ್ಧಿ ರಿಪೋರ್ಟ್ ಕಾರ್ಡ್ ಇಟ್ಟುಕೊಂಡು ನಿಮ್ಮ ಮುಂದೆ ಬಂದು ಮಾತುನಾಡುತ್ತೇನೆ ಎಂದರು.
ನಂತರ ವಾರ್ಡ್ ಸದಸ್ಯ ಬಂತಿ ವೆಂಕಟೇಶ್ ಮಾತನಾಡಿ, ನಮ್ಮ ವಾರ್ಡ್ ಅಭಿವೃದ್ಧಿ ಮಾಡಲು ಮೂರುವರೆ ವರ್ಷದಲ್ಲಿ ನಾಲ್ಕೂವರೆ ಕೋಟಿ ಅನುದಾನ ತಂದು ಕಾಮಗಾರಿ ಮಾಡಿ ಅಭಿವೃದ್ಧಿ ಮಾಡಿದ್ದೇನೆ. ಸುಮಾರು 28 ವರ್ಷದಿಂದ ಅಂಗನವಾಡಿ ಸಮಸ್ಯೆ ಇದೆ. ಸ್ವಂತ ಕಟ್ಟಡವಿಲ್ಲದೇ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ನಡೆಸಲಾಗುತ್ತಿದೆ. ಅಂಗನವಾಡಿ ನಡೆಸಲು ಸ್ವಂತ ಕಟ್ಟಡ ನಿರ್ಮಾಣ ಮಾಡುವುದಕ್ಕೆ ಅನುದಾನ ಬಿಡುಗಡೆ ಮಾಡಬೇಕು. ನಮ್ಮ ವಾರ್ಡ್ ನಲ್ಲಿ ಜಲ್ವಂತ ಸಮಸ್ಯೆಯಾದ ಯುಜಿಡಿ ಸಮಸ್ಯೆ ಇದೆ. ಅದನ್ನು ಕೂಡಲೇ ಬಗೆಹರಿಸಲು ಸಹಕಾರ ನೀಡಬೇಕು ಎಂದು ಶಾಸಕರ ಬಳಿ ಮನವಿ ಮಾಡಿದರು.
ಇ-ಖಾತಾ ವಿತರಣಾ ಕಾರ್ಯಕ್ರಮದಲ್ಲಿ ಸುಮಾರು 200 ಮಂದಿಗೆ ಇ-ಖಾತಾ ಪತ್ರ ವಿತರಣೆ ಮಾಡಲಾಯಿತು.
ಈ ವೇಳೆ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ವಾರ್ಡ್ ನ ಪ್ರಮುಖ ಮುಖಂಡರು, ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.
‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…
ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…
ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…
ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…
ದೇವರಹಿಪ್ಪರಗಿ: ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…
ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…