ಐದು ವರ್ಷದ ನಂತರ ಅಭಿವೃದ್ಧಿ ರಿಪೋರ್ಟ್ ಕಾರ್ಡ್ ಇಟ್ಟುಕೊಂಡು ನಿಮ್ಮ ಮುಂದೆ ಬಂದು ಮಾತುನಾಡುತ್ತೇನೆ- ಶಾಸಕ ಧೀರಜ್ ಮುನಿರಾಜ್

ಪ್ರತಿಯೊಬ್ಬರು ಇ-ಖಾತಾ ಮಾಡಿಸಿಕೊಳ್ಳಬೇಕು. ಇ-ಖಾತಾ ಬಂದಿದೆ ಎಂದು ಆಸ್ತಿ ಮಾರಾಟ ಮಾಡಬಾರದು. ಇ-ಖಾತೆ ಇದ್ದರೆ ಸಿಂಗಲ್ ಟ್ಯಾಕ್ಸ್ ಕಟ್ಟಲು, ಲೋನ್ ತೆಗೆದುಕೊಳ್ಳಲು ಅನುಕೂಲವಾಗುತ್ತದೆ. ಆದ್ದರಿಂದ ಇ-ಖಾತಾ ಅಭಿಯಾನವನ್ನು ಎಲ್ಲರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.

ನಗರಸಭೆ ವ್ಯಾಪ್ತಿಯ 13ನೇ ವಾರ್ಡ್ ಭುವನೇಶ್ವರಿ ನಗರದಲ್ಲಿ ಇ-ಖಾತಾ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ 16 ಸಾವಿರ ಆಸ್ತಿಗಳು ಇ-ಖಾತಾ, ಬಿ ಖಾತಾ ಬಾಕಿ ಇದೆ. ಅಷ್ಟು‌ ಆಸ್ತಿಗಳಿಗೆ ಇ-ಖಾತಾ, ಬಿ ಖಾತಾ ಮಾಡಿಸಬೇಕು ಎಂದರು.

ಸ್ವಚ್ಛ ಹಾಗೂ ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇನೆ ಎಂದು ಅಂದು ನಾನು‌ ನಿಮಗೆ ಮಾತು ಕೊಟ್ಟಿದ್ದೆ. ಅದರಂತೆ ಈಗ ನಾನು ನಡೆದುಕೊಳ್ಳುತ್ತಿದ್ದೇನೆ ಎಂದರು.

ನಗರಸಭೆಯಲ್ಲಿ ಇಂದು ಯಾವುದಕ್ಕೆ, ಯಾರು ಟ್ಯಾಕ್ಸ್ ಕಟ್ಟಿದ್ದಾರೆ ಎಂಬುದರ ಕುರಿತು ಸೂಕ್ತ ದಾಖಲೆಗಳು ಇಲ್ಲ.‌ ಇನ್ನೂ ಎಷ್ಟು ಟ್ಯಾಕ್ಸ್ ಕಟ್ಟೋದು ಬಾಕಿ ಇದೆ ಎಂಬುದರ ಕುರಿತೂ ದಾಖಲೆ ಇಲ್ಲ. ನಾನಂತು ಸ್ವಚ್ಛವಾಗಿದ್ದೇನೆ. ಎಲ್ಲರನ್ನು ಸ್ವಚ್ಛ‌ ಮಾಡುವುದಕ್ಕೆ ಆಗಲ್ಲ. ಐದು ವರ್ಷದ ನಂತರ ಅಭಿವೃದ್ಧಿ ರಿಪೋರ್ಟ್ ಕಾರ್ಡ್ ಇಟ್ಟುಕೊಂಡು ನಿಮ್ಮ ಮುಂದೆ ಬಂದು ಮಾತುನಾಡುತ್ತೇನೆ ಎಂದರು.

ನಂತರ ವಾರ್ಡ್ ಸದಸ್ಯ ಬಂತಿ ವೆಂಕಟೇಶ್ ಮಾತನಾಡಿ, ನಮ್ಮ ವಾರ್ಡ್ ಅಭಿವೃದ್ಧಿ ಮಾಡಲು ಮೂರುವರೆ ವರ್ಷದಲ್ಲಿ ನಾಲ್ಕೂವರೆ ಕೋಟಿ ಅನುದಾನ ತಂದು ಕಾಮಗಾರಿ ಮಾಡಿ ಅಭಿವೃದ್ಧಿ ಮಾಡಿದ್ದೇನೆ. ಸುಮಾರು 28 ವರ್ಷದಿಂದ ಅಂಗನವಾಡಿ ಸಮಸ್ಯೆ ಇದೆ. ಸ್ವಂತ ಕಟ್ಟಡವಿಲ್ಲದೇ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ನಡೆಸಲಾಗುತ್ತಿದೆ. ಅಂಗನವಾಡಿ ನಡೆಸಲು ಸ್ವಂತ ಕಟ್ಟಡ ನಿರ್ಮಾಣ ಮಾಡುವುದಕ್ಕೆ ಅನುದಾನ‌ ಬಿಡುಗಡೆ ಮಾಡಬೇಕು. ನಮ್ಮ ವಾರ್ಡ್ ನಲ್ಲಿ ಜಲ್ವಂತ ಸಮಸ್ಯೆ‌ಯಾದ ಯುಜಿಡಿ ಸಮಸ್ಯೆ ಇದೆ. ಅದನ್ನು ಕೂಡಲೇ ಬಗೆಹರಿಸಲು ಸಹಕಾರ ನೀಡಬೇಕು ಎಂದು ಶಾಸಕರ ಬಳಿ ಮನವಿ ಮಾಡಿದರು.

ಇ-ಖಾತಾ ವಿತರಣಾ ಕಾರ್ಯಕ್ರಮದಲ್ಲಿ ಸುಮಾರು 200‌ ಮಂದಿಗೆ ಇ-ಖಾತಾ ಪತ್ರ ವಿತರಣೆ ಮಾಡಲಾಯಿತು.

ಈ ವೇಳೆ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ವಾರ್ಡ್ ನ ಪ್ರಮುಖ ಮುಖಂಡರು, ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

26 minutes ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

9 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

19 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

21 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 day ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

1 day ago