ಪ್ರತಿಯೊಬ್ಬರು ಇ-ಖಾತಾ ಮಾಡಿಸಿಕೊಳ್ಳಬೇಕು. ಇ-ಖಾತಾ ಬಂದಿದೆ ಎಂದು ಆಸ್ತಿ ಮಾರಾಟ ಮಾಡಬಾರದು. ಇ-ಖಾತೆ ಇದ್ದರೆ ಸಿಂಗಲ್ ಟ್ಯಾಕ್ಸ್ ಕಟ್ಟಲು, ಲೋನ್ ತೆಗೆದುಕೊಳ್ಳಲು ಅನುಕೂಲವಾಗುತ್ತದೆ. ಆದ್ದರಿಂದ ಇ-ಖಾತಾ ಅಭಿಯಾನವನ್ನು ಎಲ್ಲರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.
ನಗರಸಭೆ ವ್ಯಾಪ್ತಿಯ 13ನೇ ವಾರ್ಡ್ ಭುವನೇಶ್ವರಿ ನಗರದಲ್ಲಿ ಇ-ಖಾತಾ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ 16 ಸಾವಿರ ಆಸ್ತಿಗಳು ಇ-ಖಾತಾ, ಬಿ ಖಾತಾ ಬಾಕಿ ಇದೆ. ಅಷ್ಟು ಆಸ್ತಿಗಳಿಗೆ ಇ-ಖಾತಾ, ಬಿ ಖಾತಾ ಮಾಡಿಸಬೇಕು ಎಂದರು.
ಸ್ವಚ್ಛ ಹಾಗೂ ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇನೆ ಎಂದು ಅಂದು ನಾನು ನಿಮಗೆ ಮಾತು ಕೊಟ್ಟಿದ್ದೆ. ಅದರಂತೆ ಈಗ ನಾನು ನಡೆದುಕೊಳ್ಳುತ್ತಿದ್ದೇನೆ ಎಂದರು.
ನಗರಸಭೆಯಲ್ಲಿ ಇಂದು ಯಾವುದಕ್ಕೆ, ಯಾರು ಟ್ಯಾಕ್ಸ್ ಕಟ್ಟಿದ್ದಾರೆ ಎಂಬುದರ ಕುರಿತು ಸೂಕ್ತ ದಾಖಲೆಗಳು ಇಲ್ಲ. ಇನ್ನೂ ಎಷ್ಟು ಟ್ಯಾಕ್ಸ್ ಕಟ್ಟೋದು ಬಾಕಿ ಇದೆ ಎಂಬುದರ ಕುರಿತೂ ದಾಖಲೆ ಇಲ್ಲ. ನಾನಂತು ಸ್ವಚ್ಛವಾಗಿದ್ದೇನೆ. ಎಲ್ಲರನ್ನು ಸ್ವಚ್ಛ ಮಾಡುವುದಕ್ಕೆ ಆಗಲ್ಲ. ಐದು ವರ್ಷದ ನಂತರ ಅಭಿವೃದ್ಧಿ ರಿಪೋರ್ಟ್ ಕಾರ್ಡ್ ಇಟ್ಟುಕೊಂಡು ನಿಮ್ಮ ಮುಂದೆ ಬಂದು ಮಾತುನಾಡುತ್ತೇನೆ ಎಂದರು.
ನಂತರ ವಾರ್ಡ್ ಸದಸ್ಯ ಬಂತಿ ವೆಂಕಟೇಶ್ ಮಾತನಾಡಿ, ನಮ್ಮ ವಾರ್ಡ್ ಅಭಿವೃದ್ಧಿ ಮಾಡಲು ಮೂರುವರೆ ವರ್ಷದಲ್ಲಿ ನಾಲ್ಕೂವರೆ ಕೋಟಿ ಅನುದಾನ ತಂದು ಕಾಮಗಾರಿ ಮಾಡಿ ಅಭಿವೃದ್ಧಿ ಮಾಡಿದ್ದೇನೆ. ಸುಮಾರು 28 ವರ್ಷದಿಂದ ಅಂಗನವಾಡಿ ಸಮಸ್ಯೆ ಇದೆ. ಸ್ವಂತ ಕಟ್ಟಡವಿಲ್ಲದೇ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ನಡೆಸಲಾಗುತ್ತಿದೆ. ಅಂಗನವಾಡಿ ನಡೆಸಲು ಸ್ವಂತ ಕಟ್ಟಡ ನಿರ್ಮಾಣ ಮಾಡುವುದಕ್ಕೆ ಅನುದಾನ ಬಿಡುಗಡೆ ಮಾಡಬೇಕು. ನಮ್ಮ ವಾರ್ಡ್ ನಲ್ಲಿ ಜಲ್ವಂತ ಸಮಸ್ಯೆಯಾದ ಯುಜಿಡಿ ಸಮಸ್ಯೆ ಇದೆ. ಅದನ್ನು ಕೂಡಲೇ ಬಗೆಹರಿಸಲು ಸಹಕಾರ ನೀಡಬೇಕು ಎಂದು ಶಾಸಕರ ಬಳಿ ಮನವಿ ಮಾಡಿದರು.
ಇ-ಖಾತಾ ವಿತರಣಾ ಕಾರ್ಯಕ್ರಮದಲ್ಲಿ ಸುಮಾರು 200 ಮಂದಿಗೆ ಇ-ಖಾತಾ ಪತ್ರ ವಿತರಣೆ ಮಾಡಲಾಯಿತು.
ಈ ವೇಳೆ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ವಾರ್ಡ್ ನ ಪ್ರಮುಖ ಮುಖಂಡರು, ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…