ಪ್ರತಿಯೊಬ್ಬರು ಇ-ಖಾತಾ ಮಾಡಿಸಿಕೊಳ್ಳಬೇಕು. ಇ-ಖಾತಾ ಬಂದಿದೆ ಎಂದು ಆಸ್ತಿ ಮಾರಾಟ ಮಾಡಬಾರದು. ಇ-ಖಾತೆ ಇದ್ದರೆ ಸಿಂಗಲ್ ಟ್ಯಾಕ್ಸ್ ಕಟ್ಟಲು, ಲೋನ್ ತೆಗೆದುಕೊಳ್ಳಲು ಅನುಕೂಲವಾಗುತ್ತದೆ. ಆದ್ದರಿಂದ ಇ-ಖಾತಾ ಅಭಿಯಾನವನ್ನು ಎಲ್ಲರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.
ನಗರಸಭೆ ವ್ಯಾಪ್ತಿಯ 13ನೇ ವಾರ್ಡ್ ಭುವನೇಶ್ವರಿ ನಗರದಲ್ಲಿ ಇ-ಖಾತಾ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ 16 ಸಾವಿರ ಆಸ್ತಿಗಳು ಇ-ಖಾತಾ, ಬಿ ಖಾತಾ ಬಾಕಿ ಇದೆ. ಅಷ್ಟು ಆಸ್ತಿಗಳಿಗೆ ಇ-ಖಾತಾ, ಬಿ ಖಾತಾ ಮಾಡಿಸಬೇಕು ಎಂದರು.
ಸ್ವಚ್ಛ ಹಾಗೂ ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇನೆ ಎಂದು ಅಂದು ನಾನು ನಿಮಗೆ ಮಾತು ಕೊಟ್ಟಿದ್ದೆ. ಅದರಂತೆ ಈಗ ನಾನು ನಡೆದುಕೊಳ್ಳುತ್ತಿದ್ದೇನೆ ಎಂದರು.
ನಗರಸಭೆಯಲ್ಲಿ ಇಂದು ಯಾವುದಕ್ಕೆ, ಯಾರು ಟ್ಯಾಕ್ಸ್ ಕಟ್ಟಿದ್ದಾರೆ ಎಂಬುದರ ಕುರಿತು ಸೂಕ್ತ ದಾಖಲೆಗಳು ಇಲ್ಲ. ಇನ್ನೂ ಎಷ್ಟು ಟ್ಯಾಕ್ಸ್ ಕಟ್ಟೋದು ಬಾಕಿ ಇದೆ ಎಂಬುದರ ಕುರಿತೂ ದಾಖಲೆ ಇಲ್ಲ. ನಾನಂತು ಸ್ವಚ್ಛವಾಗಿದ್ದೇನೆ. ಎಲ್ಲರನ್ನು ಸ್ವಚ್ಛ ಮಾಡುವುದಕ್ಕೆ ಆಗಲ್ಲ. ಐದು ವರ್ಷದ ನಂತರ ಅಭಿವೃದ್ಧಿ ರಿಪೋರ್ಟ್ ಕಾರ್ಡ್ ಇಟ್ಟುಕೊಂಡು ನಿಮ್ಮ ಮುಂದೆ ಬಂದು ಮಾತುನಾಡುತ್ತೇನೆ ಎಂದರು.
ನಂತರ ವಾರ್ಡ್ ಸದಸ್ಯ ಬಂತಿ ವೆಂಕಟೇಶ್ ಮಾತನಾಡಿ, ನಮ್ಮ ವಾರ್ಡ್ ಅಭಿವೃದ್ಧಿ ಮಾಡಲು ಮೂರುವರೆ ವರ್ಷದಲ್ಲಿ ನಾಲ್ಕೂವರೆ ಕೋಟಿ ಅನುದಾನ ತಂದು ಕಾಮಗಾರಿ ಮಾಡಿ ಅಭಿವೃದ್ಧಿ ಮಾಡಿದ್ದೇನೆ. ಸುಮಾರು 28 ವರ್ಷದಿಂದ ಅಂಗನವಾಡಿ ಸಮಸ್ಯೆ ಇದೆ. ಸ್ವಂತ ಕಟ್ಟಡವಿಲ್ಲದೇ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ನಡೆಸಲಾಗುತ್ತಿದೆ. ಅಂಗನವಾಡಿ ನಡೆಸಲು ಸ್ವಂತ ಕಟ್ಟಡ ನಿರ್ಮಾಣ ಮಾಡುವುದಕ್ಕೆ ಅನುದಾನ ಬಿಡುಗಡೆ ಮಾಡಬೇಕು. ನಮ್ಮ ವಾರ್ಡ್ ನಲ್ಲಿ ಜಲ್ವಂತ ಸಮಸ್ಯೆಯಾದ ಯುಜಿಡಿ ಸಮಸ್ಯೆ ಇದೆ. ಅದನ್ನು ಕೂಡಲೇ ಬಗೆಹರಿಸಲು ಸಹಕಾರ ನೀಡಬೇಕು ಎಂದು ಶಾಸಕರ ಬಳಿ ಮನವಿ ಮಾಡಿದರು.
ಇ-ಖಾತಾ ವಿತರಣಾ ಕಾರ್ಯಕ್ರಮದಲ್ಲಿ ಸುಮಾರು 200 ಮಂದಿಗೆ ಇ-ಖಾತಾ ಪತ್ರ ವಿತರಣೆ ಮಾಡಲಾಯಿತು.
ಈ ವೇಳೆ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ವಾರ್ಡ್ ನ ಪ್ರಮುಖ ಮುಖಂಡರು, ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…