ಪ್ರತಿಯೊಬ್ಬರು ಇ-ಖಾತಾ ಮಾಡಿಸಿಕೊಳ್ಳಬೇಕು. ಇ-ಖಾತಾ ಬಂದಿದೆ ಎಂದು ಆಸ್ತಿ ಮಾರಾಟ ಮಾಡಬಾರದು. ಇ-ಖಾತೆ ಇದ್ದರೆ ಸಿಂಗಲ್ ಟ್ಯಾಕ್ಸ್ ಕಟ್ಟಲು, ಲೋನ್ ತೆಗೆದುಕೊಳ್ಳಲು ಅನುಕೂಲವಾಗುತ್ತದೆ. ಆದ್ದರಿಂದ ಇ-ಖಾತಾ ಅಭಿಯಾನವನ್ನು ಎಲ್ಲರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.
ನಗರಸಭೆ ವ್ಯಾಪ್ತಿಯ 13ನೇ ವಾರ್ಡ್ ಭುವನೇಶ್ವರಿ ನಗರದಲ್ಲಿ ಇ-ಖಾತಾ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ 16 ಸಾವಿರ ಆಸ್ತಿಗಳು ಇ-ಖಾತಾ, ಬಿ ಖಾತಾ ಬಾಕಿ ಇದೆ. ಅಷ್ಟು ಆಸ್ತಿಗಳಿಗೆ ಇ-ಖಾತಾ, ಬಿ ಖಾತಾ ಮಾಡಿಸಬೇಕು ಎಂದರು.
ಸ್ವಚ್ಛ ಹಾಗೂ ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇನೆ ಎಂದು ಅಂದು ನಾನು ನಿಮಗೆ ಮಾತು ಕೊಟ್ಟಿದ್ದೆ. ಅದರಂತೆ ಈಗ ನಾನು ನಡೆದುಕೊಳ್ಳುತ್ತಿದ್ದೇನೆ ಎಂದರು.
ನಗರಸಭೆಯಲ್ಲಿ ಇಂದು ಯಾವುದಕ್ಕೆ, ಯಾರು ಟ್ಯಾಕ್ಸ್ ಕಟ್ಟಿದ್ದಾರೆ ಎಂಬುದರ ಕುರಿತು ಸೂಕ್ತ ದಾಖಲೆಗಳು ಇಲ್ಲ. ಇನ್ನೂ ಎಷ್ಟು ಟ್ಯಾಕ್ಸ್ ಕಟ್ಟೋದು ಬಾಕಿ ಇದೆ ಎಂಬುದರ ಕುರಿತೂ ದಾಖಲೆ ಇಲ್ಲ. ನಾನಂತು ಸ್ವಚ್ಛವಾಗಿದ್ದೇನೆ. ಎಲ್ಲರನ್ನು ಸ್ವಚ್ಛ ಮಾಡುವುದಕ್ಕೆ ಆಗಲ್ಲ. ಐದು ವರ್ಷದ ನಂತರ ಅಭಿವೃದ್ಧಿ ರಿಪೋರ್ಟ್ ಕಾರ್ಡ್ ಇಟ್ಟುಕೊಂಡು ನಿಮ್ಮ ಮುಂದೆ ಬಂದು ಮಾತುನಾಡುತ್ತೇನೆ ಎಂದರು.
ನಂತರ ವಾರ್ಡ್ ಸದಸ್ಯ ಬಂತಿ ವೆಂಕಟೇಶ್ ಮಾತನಾಡಿ, ನಮ್ಮ ವಾರ್ಡ್ ಅಭಿವೃದ್ಧಿ ಮಾಡಲು ಮೂರುವರೆ ವರ್ಷದಲ್ಲಿ ನಾಲ್ಕೂವರೆ ಕೋಟಿ ಅನುದಾನ ತಂದು ಕಾಮಗಾರಿ ಮಾಡಿ ಅಭಿವೃದ್ಧಿ ಮಾಡಿದ್ದೇನೆ. ಸುಮಾರು 28 ವರ್ಷದಿಂದ ಅಂಗನವಾಡಿ ಸಮಸ್ಯೆ ಇದೆ. ಸ್ವಂತ ಕಟ್ಟಡವಿಲ್ಲದೇ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ನಡೆಸಲಾಗುತ್ತಿದೆ. ಅಂಗನವಾಡಿ ನಡೆಸಲು ಸ್ವಂತ ಕಟ್ಟಡ ನಿರ್ಮಾಣ ಮಾಡುವುದಕ್ಕೆ ಅನುದಾನ ಬಿಡುಗಡೆ ಮಾಡಬೇಕು. ನಮ್ಮ ವಾರ್ಡ್ ನಲ್ಲಿ ಜಲ್ವಂತ ಸಮಸ್ಯೆಯಾದ ಯುಜಿಡಿ ಸಮಸ್ಯೆ ಇದೆ. ಅದನ್ನು ಕೂಡಲೇ ಬಗೆಹರಿಸಲು ಸಹಕಾರ ನೀಡಬೇಕು ಎಂದು ಶಾಸಕರ ಬಳಿ ಮನವಿ ಮಾಡಿದರು.
ಇ-ಖಾತಾ ವಿತರಣಾ ಕಾರ್ಯಕ್ರಮದಲ್ಲಿ ಸುಮಾರು 200 ಮಂದಿಗೆ ಇ-ಖಾತಾ ಪತ್ರ ವಿತರಣೆ ಮಾಡಲಾಯಿತು.
ಈ ವೇಳೆ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ವಾರ್ಡ್ ನ ಪ್ರಮುಖ ಮುಖಂಡರು, ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸಮಾಜದ ಭವಿಷ್ಯವನ್ನು ರೂಪಿಸುವಲ್ಲಿ ಮಕ್ಕಳ ರಕ್ಷಣೆ ಮತ್ತು ಶಿಕ್ಷಣದ ಪಾತ್ರ ಅತೀವ ಮಹತ್ವದ್ದಾಗಿದೆ. ಕಳೆದ ಇಪ್ಪತ್ತು ವರ್ಷಗಳಿಂದ ಈ ದಾರಿಯಲ್ಲಿ…
ದೊಡ್ಡಬಳ್ಳಾಪುರ: ನಾಡಿನ ಜನರ ನಾಡಿ ಮಿಡಿತವನ್ನು ಅರಿತು ಪ್ರಾದೇಶಿಕವಾಗಿ ಅಭಿವೃದ್ಧಿ ಹೊಂದಲು ಜೆಡಿಎಸ್ ಪಕ್ಷ ಸ್ಥಾಪನೆಯಾಗಿದೆ. ಮೇ.8ಕ್ಕೆ 25 ವರ್ಷಗಳನ್ನು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿ ವ್ಯಾಪ್ತಿಯಲ್ಲಿ ಖಾಸಗಿ ಕಂಪನಿಗೆ ಸೇರಿದ ಗೋಡೌನ್ ಒಂದರಲ್ಲಿ ರಾತ್ರಿ ಪಾಳಿಯಲ್ಲಿ…
ದೊಡ್ಡಬಳ್ಳಾಪುರದ ಜೆಡಿಎಸ್ ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡುವ ಬಣ, ಪಕ್ಷಕ್ಕೆ ನಿಷ್ಠಾವಂತರಾಗಿ ದುಡಿಯುವ ಕಾರ್ಯಕರ್ತರ ಬಣ ಎಂಬ ಎರಡು…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿ ಬಿಸವನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪಂಚಾಯಿತಿಯಿಂದ ನಿರ್ವಹಣೆ ಮಾಡದೇ ಖಾಸಗಿ…
ಆಹಾರ ಸಚಿವ ಹಾಗೂ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ಜಿಲ್ಲೆಯಲ್ಲಿ ಬಡವರಿಗೆ ನೀಡಬೇಕಿದ್ದ ಪಡಿತರ ಅಕ್ಕಿ, ರಾಗಿಯನ್ನು ಕಾಳ ಸಂತೆಯಲ್ಲಿ…