ಐದು ವರ್ಷದ ನಂತರ ಅಭಿವೃದ್ಧಿ ರಿಪೋರ್ಟ್ ಕಾರ್ಡ್ ಇಟ್ಟುಕೊಂಡು ನಿಮ್ಮ ಮುಂದೆ ಬಂದು ಮಾತುನಾಡುತ್ತೇನೆ- ಶಾಸಕ ಧೀರಜ್ ಮುನಿರಾಜ್

ಪ್ರತಿಯೊಬ್ಬರು ಇ-ಖಾತಾ ಮಾಡಿಸಿಕೊಳ್ಳಬೇಕು. ಇ-ಖಾತಾ ಬಂದಿದೆ ಎಂದು ಆಸ್ತಿ ಮಾರಾಟ ಮಾಡಬಾರದು. ಇ-ಖಾತೆ ಇದ್ದರೆ ಸಿಂಗಲ್ ಟ್ಯಾಕ್ಸ್ ಕಟ್ಟಲು, ಲೋನ್ ತೆಗೆದುಕೊಳ್ಳಲು ಅನುಕೂಲವಾಗುತ್ತದೆ. ಆದ್ದರಿಂದ ಇ-ಖಾತಾ ಅಭಿಯಾನವನ್ನು ಎಲ್ಲರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.

ನಗರಸಭೆ ವ್ಯಾಪ್ತಿಯ 13ನೇ ವಾರ್ಡ್ ಭುವನೇಶ್ವರಿ ನಗರದಲ್ಲಿ ಇ-ಖಾತಾ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ 16 ಸಾವಿರ ಆಸ್ತಿಗಳು ಇ-ಖಾತಾ, ಬಿ ಖಾತಾ ಬಾಕಿ ಇದೆ. ಅಷ್ಟು‌ ಆಸ್ತಿಗಳಿಗೆ ಇ-ಖಾತಾ, ಬಿ ಖಾತಾ ಮಾಡಿಸಬೇಕು ಎಂದರು.

ಸ್ವಚ್ಛ ಹಾಗೂ ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇನೆ ಎಂದು ಅಂದು ನಾನು‌ ನಿಮಗೆ ಮಾತು ಕೊಟ್ಟಿದ್ದೆ. ಅದರಂತೆ ಈಗ ನಾನು ನಡೆದುಕೊಳ್ಳುತ್ತಿದ್ದೇನೆ ಎಂದರು.

ನಗರಸಭೆಯಲ್ಲಿ ಇಂದು ಯಾವುದಕ್ಕೆ, ಯಾರು ಟ್ಯಾಕ್ಸ್ ಕಟ್ಟಿದ್ದಾರೆ ಎಂಬುದರ ಕುರಿತು ಸೂಕ್ತ ದಾಖಲೆಗಳು ಇಲ್ಲ.‌ ಇನ್ನೂ ಎಷ್ಟು ಟ್ಯಾಕ್ಸ್ ಕಟ್ಟೋದು ಬಾಕಿ ಇದೆ ಎಂಬುದರ ಕುರಿತೂ ದಾಖಲೆ ಇಲ್ಲ. ನಾನಂತು ಸ್ವಚ್ಛವಾಗಿದ್ದೇನೆ. ಎಲ್ಲರನ್ನು ಸ್ವಚ್ಛ‌ ಮಾಡುವುದಕ್ಕೆ ಆಗಲ್ಲ. ಐದು ವರ್ಷದ ನಂತರ ಅಭಿವೃದ್ಧಿ ರಿಪೋರ್ಟ್ ಕಾರ್ಡ್ ಇಟ್ಟುಕೊಂಡು ನಿಮ್ಮ ಮುಂದೆ ಬಂದು ಮಾತುನಾಡುತ್ತೇನೆ ಎಂದರು.

ನಂತರ ವಾರ್ಡ್ ಸದಸ್ಯ ಬಂತಿ ವೆಂಕಟೇಶ್ ಮಾತನಾಡಿ, ನಮ್ಮ ವಾರ್ಡ್ ಅಭಿವೃದ್ಧಿ ಮಾಡಲು ಮೂರುವರೆ ವರ್ಷದಲ್ಲಿ ನಾಲ್ಕೂವರೆ ಕೋಟಿ ಅನುದಾನ ತಂದು ಕಾಮಗಾರಿ ಮಾಡಿ ಅಭಿವೃದ್ಧಿ ಮಾಡಿದ್ದೇನೆ. ಸುಮಾರು 28 ವರ್ಷದಿಂದ ಅಂಗನವಾಡಿ ಸಮಸ್ಯೆ ಇದೆ. ಸ್ವಂತ ಕಟ್ಟಡವಿಲ್ಲದೇ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ನಡೆಸಲಾಗುತ್ತಿದೆ. ಅಂಗನವಾಡಿ ನಡೆಸಲು ಸ್ವಂತ ಕಟ್ಟಡ ನಿರ್ಮಾಣ ಮಾಡುವುದಕ್ಕೆ ಅನುದಾನ‌ ಬಿಡುಗಡೆ ಮಾಡಬೇಕು. ನಮ್ಮ ವಾರ್ಡ್ ನಲ್ಲಿ ಜಲ್ವಂತ ಸಮಸ್ಯೆ‌ಯಾದ ಯುಜಿಡಿ ಸಮಸ್ಯೆ ಇದೆ. ಅದನ್ನು ಕೂಡಲೇ ಬಗೆಹರಿಸಲು ಸಹಕಾರ ನೀಡಬೇಕು ಎಂದು ಶಾಸಕರ ಬಳಿ ಮನವಿ ಮಾಡಿದರು.

ಇ-ಖಾತಾ ವಿತರಣಾ ಕಾರ್ಯಕ್ರಮದಲ್ಲಿ ಸುಮಾರು 200‌ ಮಂದಿಗೆ ಇ-ಖಾತಾ ಪತ್ರ ವಿತರಣೆ ಮಾಡಲಾಯಿತು.

ಈ ವೇಳೆ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ವಾರ್ಡ್ ನ ಪ್ರಮುಖ ಮುಖಂಡರು, ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

11 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

12 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

13 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

13 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

20 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago