Categories: ಐಪಿಎಲ್

ಐಪಿಎಲ್ : ಚಾಂಪಿಯನ್ಸ್ ಗೆ ಶರಣಾದ ಸೂಪರ್ ಕಿಂಗ್ಸ್

ಅಹಮದಬಾದ್ : ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಾಟಾ ಐಪಿಎಲ್ ಹದಿನಾರನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಆರಂಭಿಕ ಜೋಡಿ ಸಹಾ ಹಾಗೂ ಶುಭ್ ಮನ್ ಗಿಲ್ ಅವರ ಆಕರ್ಷಕ ಬ್ಯಾಟಿಂಗ್ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಭರ್ಜರಿ ಗೆಲುವು ಪಡೆದು ಟೂರ್ನಿಯಲ್ಲಿ ಶುಭಾರಂಭ ಮಾಡಿತು.

ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡರು, ಬೌಲಿಂಗ್ ವಿಭಾಗ ಅವರ ನಿರ್ಧಾರವನ್ನು ಸಮರ್ಥಿಸಿಕೊಂಡಿತು, ತಂಡದ ಮೊತ್ತ 14 ರನ್ ಗಳಿಸಿದ್ದಾಗ ಮೊಹಮ್ಮದ್ ಶಮಿ ಆರಂಭಿಕ ಆಘಾತ ನೀಡಿದರು, ಆರಂಭಿಕ ಬ್ಯಾಟ್ಸ್‌ಮನ್ ಕಾನ್ವೆ (1) ರನ್ ಗಳಿಸಿ ವಿಕೆಟ್ ಕಳೆದುಕೊಂಡು ನಿರಾಸೆ ಅನುಭವಿಸಿದರು.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ರುತುರಾಜ್ ಗಾಯಕ್ವಾಡ್ ನಾಲ್ಕು ಬೌಂಡರಿ ಹಾಗೂ ಒಂಬತ್ತು ಸಿಕ್ಸರ್ ಸಿಡಿಸಿ (92)ರನ್ ಗಳಿಸಿ ಭದ್ರ ಬುನಾದಿ ಹಾಕಿದರು, ಆದರೆ ಶತಕ ವಂಚಿತರಾದ ಇವರನ್ನು ಅಲ್ಜಾರಿ ಜೋಸೆಫ್ ಅವರ ಓವರ್ ನಲ್ಲಿ ಶುಭ್ಮಮನ್ ಗಿಲ್ ಹಿಡಿದ ಅತ್ಯುತ್ತಮ ಕ್ಯಾಚ್ ಗೆ ಬಲಿಯಾದರು.

ನಂತರ ಬಂದ ಮೊಯಿನ್ ಆಲಿ (23), ಅಂಬಾಟಿ ರಾಯಡು, ಶಿವಂ ದುಬೆ ಹಾಗೂ ನಾಯಕ ಮಹೇಂದ್ರ ಸಿಂಗ್ ದೋನಿ ತಂಡಕ್ಕೆ ಉತ್ತಮ ರನ್ ಕಾಣಿಕೆ ನೀಡಿದರು, ಇದರ ಪ್ರತಿಫಲವಾಗಿ ತಂಡದ ಮೊತ್ತ 178 ರನ್ ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿದರು.

ಸವಾಲಿನ ಮೊತ್ತ ಬೆನ್ನಟ್ಟಿದ ಚಾಂಪಿಯನ್ಸ್ ತಂಡದ ಆರಂಭಿಕರಾದ ವೃದ್ಧಿಮಾನ್ ಸಹಾ(25) ಹಾಗೂ ಶುಭ್ ಮನ್ ಗಿಲ್ (63) ರನ್ ಗಳಿಸಿ ಭದ್ರ ಬುನಾದಿ ಹಾಕಿದರು ನಂತರ ಬಂದ ಸಾಯಿ ಸುದರ್ಶನ್ ಹಾಗೂ ವಿಜಯ್ ಶಂಕರ್ ತಂಡಕ್ಕೆ ಅಲ್ಪ ಕಾಣಿಕೆ ನೀಡಿದರು ನಂತರ ರಾಹುಲ್ ಥೆವಾಟಿಯಾ ಹಾಗೂ ರಶೀದ್ ಖಾನ್ ಕೊನೆಯವರೆಗೂ ನಿಂತು ದಡ ಸೇರಿಸಿದರು.

ಟೈಟಾನ್ಸ್ ಪರವಾಗಿ ಮೊಹಮ್ಮದ್ ಶಮಿ, ರಶೀದ್ ಖಾನ್ ಹಾಗೂ ಜೋಸೆಫ್ ತಲಾ ಎರಡು ವಿಕೆಟ್ ಪಡೆದರು ತಂಡದ ಪರವಾಗಿ ಮಿಂಚಿನ ಪ್ರದರ್ಶನ ನೀಡಿದ ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

3 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

7 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

10 hours ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

1 day ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ……..

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…

2 days ago