ಅಹಮದಬಾದ್ : ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಾಟಾ ಐಪಿಎಲ್ ಹದಿನಾರನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಆರಂಭಿಕ ಜೋಡಿ ಸಹಾ ಹಾಗೂ ಶುಭ್ ಮನ್ ಗಿಲ್ ಅವರ ಆಕರ್ಷಕ ಬ್ಯಾಟಿಂಗ್ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಭರ್ಜರಿ ಗೆಲುವು ಪಡೆದು ಟೂರ್ನಿಯಲ್ಲಿ ಶುಭಾರಂಭ ಮಾಡಿತು.
ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡರು, ಬೌಲಿಂಗ್ ವಿಭಾಗ ಅವರ ನಿರ್ಧಾರವನ್ನು ಸಮರ್ಥಿಸಿಕೊಂಡಿತು, ತಂಡದ ಮೊತ್ತ 14 ರನ್ ಗಳಿಸಿದ್ದಾಗ ಮೊಹಮ್ಮದ್ ಶಮಿ ಆರಂಭಿಕ ಆಘಾತ ನೀಡಿದರು, ಆರಂಭಿಕ ಬ್ಯಾಟ್ಸ್ಮನ್ ಕಾನ್ವೆ (1) ರನ್ ಗಳಿಸಿ ವಿಕೆಟ್ ಕಳೆದುಕೊಂಡು ನಿರಾಸೆ ಅನುಭವಿಸಿದರು.
ನಂತರ ಬಂದ ಮೊಯಿನ್ ಆಲಿ (23), ಅಂಬಾಟಿ ರಾಯಡು, ಶಿವಂ ದುಬೆ ಹಾಗೂ ನಾಯಕ ಮಹೇಂದ್ರ ಸಿಂಗ್ ದೋನಿ ತಂಡಕ್ಕೆ ಉತ್ತಮ ರನ್ ಕಾಣಿಕೆ ನೀಡಿದರು, ಇದರ ಪ್ರತಿಫಲವಾಗಿ ತಂಡದ ಮೊತ್ತ 178 ರನ್ ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿದರು.
ಟೈಟಾನ್ಸ್ ಪರವಾಗಿ ಮೊಹಮ್ಮದ್ ಶಮಿ, ರಶೀದ್ ಖಾನ್ ಹಾಗೂ ಜೋಸೆಫ್ ತಲಾ ಎರಡು ವಿಕೆಟ್ ಪಡೆದರು ತಂಡದ ಪರವಾಗಿ ಮಿಂಚಿನ ಪ್ರದರ್ಶನ ನೀಡಿದ ಬ್ಯಾಟ್ಸ್ಮನ್ ಶುಭಮನ್ ಗಿಲ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…