Categories: ಐಪಿಎಲ್

ಐಪಿಎಲ್ : ಚಾಂಪಿಯನ್ಸ್ ಗೆ ಶರಣಾದ ಸೂಪರ್ ಕಿಂಗ್ಸ್

ಅಹಮದಬಾದ್ : ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಾಟಾ ಐಪಿಎಲ್ ಹದಿನಾರನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಆರಂಭಿಕ ಜೋಡಿ ಸಹಾ ಹಾಗೂ ಶುಭ್ ಮನ್ ಗಿಲ್ ಅವರ ಆಕರ್ಷಕ ಬ್ಯಾಟಿಂಗ್ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಭರ್ಜರಿ ಗೆಲುವು ಪಡೆದು ಟೂರ್ನಿಯಲ್ಲಿ ಶುಭಾರಂಭ ಮಾಡಿತು.

ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡರು, ಬೌಲಿಂಗ್ ವಿಭಾಗ ಅವರ ನಿರ್ಧಾರವನ್ನು ಸಮರ್ಥಿಸಿಕೊಂಡಿತು, ತಂಡದ ಮೊತ್ತ 14 ರನ್ ಗಳಿಸಿದ್ದಾಗ ಮೊಹಮ್ಮದ್ ಶಮಿ ಆರಂಭಿಕ ಆಘಾತ ನೀಡಿದರು, ಆರಂಭಿಕ ಬ್ಯಾಟ್ಸ್‌ಮನ್ ಕಾನ್ವೆ (1) ರನ್ ಗಳಿಸಿ ವಿಕೆಟ್ ಕಳೆದುಕೊಂಡು ನಿರಾಸೆ ಅನುಭವಿಸಿದರು.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ರುತುರಾಜ್ ಗಾಯಕ್ವಾಡ್ ನಾಲ್ಕು ಬೌಂಡರಿ ಹಾಗೂ ಒಂಬತ್ತು ಸಿಕ್ಸರ್ ಸಿಡಿಸಿ (92)ರನ್ ಗಳಿಸಿ ಭದ್ರ ಬುನಾದಿ ಹಾಕಿದರು, ಆದರೆ ಶತಕ ವಂಚಿತರಾದ ಇವರನ್ನು ಅಲ್ಜಾರಿ ಜೋಸೆಫ್ ಅವರ ಓವರ್ ನಲ್ಲಿ ಶುಭ್ಮಮನ್ ಗಿಲ್ ಹಿಡಿದ ಅತ್ಯುತ್ತಮ ಕ್ಯಾಚ್ ಗೆ ಬಲಿಯಾದರು.

ನಂತರ ಬಂದ ಮೊಯಿನ್ ಆಲಿ (23), ಅಂಬಾಟಿ ರಾಯಡು, ಶಿವಂ ದುಬೆ ಹಾಗೂ ನಾಯಕ ಮಹೇಂದ್ರ ಸಿಂಗ್ ದೋನಿ ತಂಡಕ್ಕೆ ಉತ್ತಮ ರನ್ ಕಾಣಿಕೆ ನೀಡಿದರು, ಇದರ ಪ್ರತಿಫಲವಾಗಿ ತಂಡದ ಮೊತ್ತ 178 ರನ್ ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿದರು.

ಸವಾಲಿನ ಮೊತ್ತ ಬೆನ್ನಟ್ಟಿದ ಚಾಂಪಿಯನ್ಸ್ ತಂಡದ ಆರಂಭಿಕರಾದ ವೃದ್ಧಿಮಾನ್ ಸಹಾ(25) ಹಾಗೂ ಶುಭ್ ಮನ್ ಗಿಲ್ (63) ರನ್ ಗಳಿಸಿ ಭದ್ರ ಬುನಾದಿ ಹಾಕಿದರು ನಂತರ ಬಂದ ಸಾಯಿ ಸುದರ್ಶನ್ ಹಾಗೂ ವಿಜಯ್ ಶಂಕರ್ ತಂಡಕ್ಕೆ ಅಲ್ಪ ಕಾಣಿಕೆ ನೀಡಿದರು ನಂತರ ರಾಹುಲ್ ಥೆವಾಟಿಯಾ ಹಾಗೂ ರಶೀದ್ ಖಾನ್ ಕೊನೆಯವರೆಗೂ ನಿಂತು ದಡ ಸೇರಿಸಿದರು.

ಟೈಟಾನ್ಸ್ ಪರವಾಗಿ ಮೊಹಮ್ಮದ್ ಶಮಿ, ರಶೀದ್ ಖಾನ್ ಹಾಗೂ ಜೋಸೆಫ್ ತಲಾ ಎರಡು ವಿಕೆಟ್ ಪಡೆದರು ತಂಡದ ಪರವಾಗಿ ಮಿಂಚಿನ ಪ್ರದರ್ಶನ ನೀಡಿದ ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಪ್ರಮಾಣ ವಚನ ಅಥವಾ ಪ್ರತಿಜ್ಞಾ ವಿಧಿ……. ಇವು ಆತ್ಮಸಾಕ್ಷಿಯ ನುಡಿಗಳೇ – ಸಂವಿಧಾನಾತ್ಮಕ ಕರ್ತವ್ಯವೇ – ಒಂದು ಒಣ ವಿಧಿ ವಿಧಾನವೇ…….

ನಡೆ ನುಡಿ - ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು…

37 minutes ago

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

14 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

14 hours ago

ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

  ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…

14 hours ago

ಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಕರೆ

ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…

15 hours ago

ಮೀನಿನ ಬಲೆಯಲ್ಲಿ ಸಿಲುಕಿ ಒದ್ದಾಡಿದ ಬೃಹತ್ ಹೆಬ್ಬಾವು; ಗ್ರಾಮಸ್ಥರಿಂದ ರಕ್ಷಣೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…

17 hours ago