Categories: ಐಪಿಎಲ್

ಐಪಿಎಲ್ : ಚಾಂಪಿಯನ್ಸ್ ಗೆ ಶರಣಾದ ಸೂಪರ್ ಕಿಂಗ್ಸ್

ಅಹಮದಬಾದ್ : ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಾಟಾ ಐಪಿಎಲ್ ಹದಿನಾರನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಆರಂಭಿಕ ಜೋಡಿ ಸಹಾ ಹಾಗೂ ಶುಭ್ ಮನ್ ಗಿಲ್ ಅವರ ಆಕರ್ಷಕ ಬ್ಯಾಟಿಂಗ್ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಭರ್ಜರಿ ಗೆಲುವು ಪಡೆದು ಟೂರ್ನಿಯಲ್ಲಿ ಶುಭಾರಂಭ ಮಾಡಿತು.

ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡರು, ಬೌಲಿಂಗ್ ವಿಭಾಗ ಅವರ ನಿರ್ಧಾರವನ್ನು ಸಮರ್ಥಿಸಿಕೊಂಡಿತು, ತಂಡದ ಮೊತ್ತ 14 ರನ್ ಗಳಿಸಿದ್ದಾಗ ಮೊಹಮ್ಮದ್ ಶಮಿ ಆರಂಭಿಕ ಆಘಾತ ನೀಡಿದರು, ಆರಂಭಿಕ ಬ್ಯಾಟ್ಸ್‌ಮನ್ ಕಾನ್ವೆ (1) ರನ್ ಗಳಿಸಿ ವಿಕೆಟ್ ಕಳೆದುಕೊಂಡು ನಿರಾಸೆ ಅನುಭವಿಸಿದರು.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ರುತುರಾಜ್ ಗಾಯಕ್ವಾಡ್ ನಾಲ್ಕು ಬೌಂಡರಿ ಹಾಗೂ ಒಂಬತ್ತು ಸಿಕ್ಸರ್ ಸಿಡಿಸಿ (92)ರನ್ ಗಳಿಸಿ ಭದ್ರ ಬುನಾದಿ ಹಾಕಿದರು, ಆದರೆ ಶತಕ ವಂಚಿತರಾದ ಇವರನ್ನು ಅಲ್ಜಾರಿ ಜೋಸೆಫ್ ಅವರ ಓವರ್ ನಲ್ಲಿ ಶುಭ್ಮಮನ್ ಗಿಲ್ ಹಿಡಿದ ಅತ್ಯುತ್ತಮ ಕ್ಯಾಚ್ ಗೆ ಬಲಿಯಾದರು.

ನಂತರ ಬಂದ ಮೊಯಿನ್ ಆಲಿ (23), ಅಂಬಾಟಿ ರಾಯಡು, ಶಿವಂ ದುಬೆ ಹಾಗೂ ನಾಯಕ ಮಹೇಂದ್ರ ಸಿಂಗ್ ದೋನಿ ತಂಡಕ್ಕೆ ಉತ್ತಮ ರನ್ ಕಾಣಿಕೆ ನೀಡಿದರು, ಇದರ ಪ್ರತಿಫಲವಾಗಿ ತಂಡದ ಮೊತ್ತ 178 ರನ್ ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿದರು.

ಸವಾಲಿನ ಮೊತ್ತ ಬೆನ್ನಟ್ಟಿದ ಚಾಂಪಿಯನ್ಸ್ ತಂಡದ ಆರಂಭಿಕರಾದ ವೃದ್ಧಿಮಾನ್ ಸಹಾ(25) ಹಾಗೂ ಶುಭ್ ಮನ್ ಗಿಲ್ (63) ರನ್ ಗಳಿಸಿ ಭದ್ರ ಬುನಾದಿ ಹಾಕಿದರು ನಂತರ ಬಂದ ಸಾಯಿ ಸುದರ್ಶನ್ ಹಾಗೂ ವಿಜಯ್ ಶಂಕರ್ ತಂಡಕ್ಕೆ ಅಲ್ಪ ಕಾಣಿಕೆ ನೀಡಿದರು ನಂತರ ರಾಹುಲ್ ಥೆವಾಟಿಯಾ ಹಾಗೂ ರಶೀದ್ ಖಾನ್ ಕೊನೆಯವರೆಗೂ ನಿಂತು ದಡ ಸೇರಿಸಿದರು.

ಟೈಟಾನ್ಸ್ ಪರವಾಗಿ ಮೊಹಮ್ಮದ್ ಶಮಿ, ರಶೀದ್ ಖಾನ್ ಹಾಗೂ ಜೋಸೆಫ್ ತಲಾ ಎರಡು ವಿಕೆಟ್ ಪಡೆದರು ತಂಡದ ಪರವಾಗಿ ಮಿಂಚಿನ ಪ್ರದರ್ಶನ ನೀಡಿದ ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

10 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

10 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

14 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

15 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

21 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

23 hours ago