ಅಹಮದಬಾದ್ : ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಾಟಾ ಐಪಿಎಲ್ ಹದಿನಾರನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಆರಂಭಿಕ ಜೋಡಿ ಸಹಾ ಹಾಗೂ ಶುಭ್ ಮನ್ ಗಿಲ್ ಅವರ ಆಕರ್ಷಕ ಬ್ಯಾಟಿಂಗ್ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಭರ್ಜರಿ ಗೆಲುವು ಪಡೆದು ಟೂರ್ನಿಯಲ್ಲಿ ಶುಭಾರಂಭ ಮಾಡಿತು.
ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡರು, ಬೌಲಿಂಗ್ ವಿಭಾಗ ಅವರ ನಿರ್ಧಾರವನ್ನು ಸಮರ್ಥಿಸಿಕೊಂಡಿತು, ತಂಡದ ಮೊತ್ತ 14 ರನ್ ಗಳಿಸಿದ್ದಾಗ ಮೊಹಮ್ಮದ್ ಶಮಿ ಆರಂಭಿಕ ಆಘಾತ ನೀಡಿದರು, ಆರಂಭಿಕ ಬ್ಯಾಟ್ಸ್ಮನ್ ಕಾನ್ವೆ (1) ರನ್ ಗಳಿಸಿ ವಿಕೆಟ್ ಕಳೆದುಕೊಂಡು ನಿರಾಸೆ ಅನುಭವಿಸಿದರು.
ನಂತರ ಬಂದ ಮೊಯಿನ್ ಆಲಿ (23), ಅಂಬಾಟಿ ರಾಯಡು, ಶಿವಂ ದುಬೆ ಹಾಗೂ ನಾಯಕ ಮಹೇಂದ್ರ ಸಿಂಗ್ ದೋನಿ ತಂಡಕ್ಕೆ ಉತ್ತಮ ರನ್ ಕಾಣಿಕೆ ನೀಡಿದರು, ಇದರ ಪ್ರತಿಫಲವಾಗಿ ತಂಡದ ಮೊತ್ತ 178 ರನ್ ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿದರು.
ಟೈಟಾನ್ಸ್ ಪರವಾಗಿ ಮೊಹಮ್ಮದ್ ಶಮಿ, ರಶೀದ್ ಖಾನ್ ಹಾಗೂ ಜೋಸೆಫ್ ತಲಾ ಎರಡು ವಿಕೆಟ್ ಪಡೆದರು ತಂಡದ ಪರವಾಗಿ ಮಿಂಚಿನ ಪ್ರದರ್ಶನ ನೀಡಿದ ಬ್ಯಾಟ್ಸ್ಮನ್ ಶುಭಮನ್ ಗಿಲ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…