ಅಹಮದಬಾದ್ : ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಾಟಾ ಐಪಿಎಲ್ ಹದಿನಾರನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಆರಂಭಿಕ ಜೋಡಿ ಸಹಾ ಹಾಗೂ ಶುಭ್ ಮನ್ ಗಿಲ್ ಅವರ ಆಕರ್ಷಕ ಬ್ಯಾಟಿಂಗ್ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಭರ್ಜರಿ ಗೆಲುವು ಪಡೆದು ಟೂರ್ನಿಯಲ್ಲಿ ಶುಭಾರಂಭ ಮಾಡಿತು.
ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡರು, ಬೌಲಿಂಗ್ ವಿಭಾಗ ಅವರ ನಿರ್ಧಾರವನ್ನು ಸಮರ್ಥಿಸಿಕೊಂಡಿತು, ತಂಡದ ಮೊತ್ತ 14 ರನ್ ಗಳಿಸಿದ್ದಾಗ ಮೊಹಮ್ಮದ್ ಶಮಿ ಆರಂಭಿಕ ಆಘಾತ ನೀಡಿದರು, ಆರಂಭಿಕ ಬ್ಯಾಟ್ಸ್ಮನ್ ಕಾನ್ವೆ (1) ರನ್ ಗಳಿಸಿ ವಿಕೆಟ್ ಕಳೆದುಕೊಂಡು ನಿರಾಸೆ ಅನುಭವಿಸಿದರು.
ನಂತರ ಬಂದ ಮೊಯಿನ್ ಆಲಿ (23), ಅಂಬಾಟಿ ರಾಯಡು, ಶಿವಂ ದುಬೆ ಹಾಗೂ ನಾಯಕ ಮಹೇಂದ್ರ ಸಿಂಗ್ ದೋನಿ ತಂಡಕ್ಕೆ ಉತ್ತಮ ರನ್ ಕಾಣಿಕೆ ನೀಡಿದರು, ಇದರ ಪ್ರತಿಫಲವಾಗಿ ತಂಡದ ಮೊತ್ತ 178 ರನ್ ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿದರು.
ಟೈಟಾನ್ಸ್ ಪರವಾಗಿ ಮೊಹಮ್ಮದ್ ಶಮಿ, ರಶೀದ್ ಖಾನ್ ಹಾಗೂ ಜೋಸೆಫ್ ತಲಾ ಎರಡು ವಿಕೆಟ್ ಪಡೆದರು ತಂಡದ ಪರವಾಗಿ ಮಿಂಚಿನ ಪ್ರದರ್ಶನ ನೀಡಿದ ಬ್ಯಾಟ್ಸ್ಮನ್ ಶುಭಮನ್ ಗಿಲ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…