ಅಹಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 19ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಸತತ ಎರಡನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪ್ರಶಸ್ತಿ ಸುತ್ತಿನ ಹಣಾಹಣಿಯಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್, ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 155 ರನ್ ಗಳಿಸಿತು.
ಗುಜರಾತ್ ಪರ ವಾಷಿಂಗ್ಟನ್ ಸುಂದರ್ 37 ಎಸೆತಗಳಲ್ಲಿ ಅಜೇಯ 50 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಆರ್ಸಿಬಿ ಬೌಲಿಂಗ್ ವಿಭಾಗದಲ್ಲಿ ಭುವನೇಶ್ವರ್ ಕುಮಾರ್ ಮತ್ತು ಹ್ಯಾಜಲ್ವುಡ್ ತಲಾ ಎರಡು ವಿಕೆಟ್ ಪಡೆದರೆ, ರಸಿಕ್ ಸಲಾಂ ದಾರ್ ಮೂರು ವಿಕೆಟ್ ಕಬಳಿಸಿ ಮಿಂಚಿದರು. ಕೃನಾಲ್ ಪಾಂಡ್ಯ ಒಂದು ವಿಕೆಟ್ ಪಡೆದರು.
156 ರನ್ಗಳ ಗುರಿ ಬೆನ್ನತ್ತಿದ ಆರ್ಸಿಬಿಗೆ ಆರಂಭದಿಂದಲೇ ಆತ್ಮವಿಶ್ವಾಸದ ಬ್ಯಾಟಿಂಗ್ ಕಂಡುಬಂದಿತು. ಅನುಭವಿ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಅಜೇಯ 75 ರನ್ಗಳ ಅಮೋಘ ಇನ್ನಿಂಗ್ಸ್ ಆಡಿದರೆ, ವೆಂಕಟೇಶ್ ಅಯ್ಯರ್ 32 ರನ್ಗಳ ಕೊಡುಗೆ ನೀಡಿದರು. ಇದರ ಫಲವಾಗಿ ಆರ್ಸಿಬಿ 18 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 161 ರನ್ ಗಳಿಸಿ 5 ವಿಕೆಟ್ಗಳ ಗೆಲುವು ದಾಖಲಿಸಿತು.
ಈ ಜಯದೊಂದಿಗೆ ಆರ್ಸಿಬಿ ಸತತ ಎರಡನೇ ಬಾರಿ ಐಪಿಎಲ್ ಟ್ರೋಫಿ ಗೆದ್ದು ತನ್ನ ಪ್ರಾಬಲ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಪಂದ್ಯಶ್ರೇಷ್ಠ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.
ಆರ್ ಸಿಬಿ ಅಭಿಮಾನಿಗಳಲ್ಲಿ ಹರ್ಷೋದ್ಘಾರ ಮನೆ ಮಾಡಿದ್ದು, ಎಲ್ಲೆಡೆ ಅಭಿಮಾನಿಗಳು ಕುಣಿದು ಕುಪ್ಪಳಿಸಿ ತಮ್ಮ ಸಂತೋಷ ವ್ಯಕ್ತಪಡಿಸಿದ್ದಾರೆ..
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…