Categories: ಐಪಿಎಲ್

ಐಪಿಎಲ್ ಫೈನಲ್‌ನಲ್ಲಿ ಆರ್‌ಸಿಬಿಗೆ ಐತಿಹಾಸಿಕ ಜಯ: ಸತತ 2ನೇ ಬಾರಿ ಚಾಂಪಿಯನ್

ಅಹಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 19ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಸತತ ಎರಡನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪ್ರಶಸ್ತಿ ಸುತ್ತಿನ ಹಣಾಹಣಿಯಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್, ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 155 ರನ್ ಗಳಿಸಿತು.

ಗುಜರಾತ್ ಪರ ವಾಷಿಂಗ್ಟನ್ ಸುಂದರ್ 37 ಎಸೆತಗಳಲ್ಲಿ ಅಜೇಯ 50 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಆರ್‌ಸಿಬಿ ಬೌಲಿಂಗ್ ವಿಭಾಗದಲ್ಲಿ ಭುವನೇಶ್ವರ್ ಕುಮಾರ್ ಮತ್ತು ಹ್ಯಾಜಲ್‌ವುಡ್ ತಲಾ ಎರಡು ವಿಕೆಟ್ ಪಡೆದರೆ, ರಸಿಕ್ ಸಲಾಂ ದಾರ್ ಮೂರು ವಿಕೆಟ್ ಕಬಳಿಸಿ ಮಿಂಚಿದರು. ಕೃನಾಲ್ ಪಾಂಡ್ಯ ಒಂದು ವಿಕೆಟ್ ಪಡೆದರು.

156 ರನ್‌ಗಳ ಗುರಿ ಬೆನ್ನತ್ತಿದ ಆರ್‌ಸಿಬಿಗೆ ಆರಂಭದಿಂದಲೇ ಆತ್ಮವಿಶ್ವಾಸದ ಬ್ಯಾಟಿಂಗ್ ಕಂಡುಬಂದಿತು. ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅಜೇಯ 75 ರನ್‌ಗಳ ಅಮೋಘ ಇನ್ನಿಂಗ್ಸ್ ಆಡಿದರೆ, ವೆಂಕಟೇಶ್ ಅಯ್ಯರ್ 32 ರನ್‌ಗಳ ಕೊಡುಗೆ ನೀಡಿದರು. ಇದರ ಫಲವಾಗಿ ಆರ್‌ಸಿಬಿ 18 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 161 ರನ್ ಗಳಿಸಿ 5 ವಿಕೆಟ್‌ಗಳ ಗೆಲುವು ದಾಖಲಿಸಿತು.

ಈ ಜಯದೊಂದಿಗೆ ಆರ್‌ಸಿಬಿ ಸತತ ಎರಡನೇ ಬಾರಿ ಐಪಿಎಲ್ ಟ್ರೋಫಿ ಗೆದ್ದು ತನ್ನ ಪ್ರಾಬಲ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಪಂದ್ಯಶ್ರೇಷ್ಠ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

ಆರ್ ಸಿ‌ಬಿ ಅಭಿಮಾನಿಗಳಲ್ಲಿ ಹರ್ಷೋದ್ಘಾರ ಮನೆ ಮಾಡಿದ್ದು, ಎಲ್ಲೆಡೆ ಅಭಿಮಾನಿಗಳು ಕುಣಿದು ಕುಪ್ಪಳಿಸಿ ತಮ್ಮ ಸಂತೋಷ ವ್ಯಕ್ತಪಡಿಸಿದ್ದಾರೆ..

Ramesh Babu

Journalist

Share
Published by
Ramesh Babu

Recent Posts

ನಗರಸಭೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಸೌಕರ್ಯ ಕೊರತೆ: ಜನ ಹೈರಾಣ

ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…

2 hours ago

ಮಾದಕ ದ್ರವ್ಯ ಮುಕ್ತ ಕರ್ನಾಟಕ ನಿರ್ಮಾಣಕ್ಕಾಗಿ ಕಟ್ಟುನಿಟ್ಟಿನ ಕ್ರಮ

ಇಂದು ವಿಕಾಸಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಹಿರಿಯ ಪೊಲೀಸ್‌ ಅಧಿಕಾರಿಗಳು ಹಾಗೂ ವಿವಿಧ ಇಲಾಖಾ ಮುಖ್ಯಸ್ಥರ ಸಮ್ಮುಖದಲ್ಲಿ ನಡೆದ ಪರಿಶೀಲನಾ…

14 hours ago

ಬೈಕ್ ಗೆ ಕಾರು ಡಿಕ್ಕಿ: ಹಲವರಿಗೆ ಗಂಭೀರ ಗಾಯ

ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಬಳಿ‌‌ ನಡೆದಿದೆ..…

16 hours ago

ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಮೈಸೂರಿನ ತಿ. ನರಸೀಪುರ ತಾಲೂಕಿನ ಕೆಂಪಯ್ಯನ ಹುಂಡಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ.…

18 hours ago

ಇಂದು ತಾಲೂಕಿನ ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಇಂದು (ಜೂ.22) 66/11ಕೆವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಸದರಿ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್…

1 day ago

ರೈಲು ಹಳಿಯಲ್ಲಿ ಅಪರಿಚಿತ ಮಹಿಳೆ ಸಾವು

ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪದ ರೈಲು ಹಳಿಯಲ್ಲಿ ಸುಮಾರು 50 ವರ್ಷದ ಅಪರಿಚಿತ ಮಹಿಳೆಯೊಬ್ಬರು ರೈಲಿಗೆ ಸಿಲುಕಿ ಮೃತಪಟ್ಟಿರುವ ಘಟನೆ…

2 days ago