Categories: ಐಪಿಎಲ್

ಐಪಿಎಲ್ ಫೈನಲ್‌ನಲ್ಲಿ ಆರ್‌ಸಿಬಿಗೆ ಐತಿಹಾಸಿಕ ಜಯ: ಸತತ 2ನೇ ಬಾರಿ ಚಾಂಪಿಯನ್

ಅಹಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 19ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಸತತ ಎರಡನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪ್ರಶಸ್ತಿ ಸುತ್ತಿನ ಹಣಾಹಣಿಯಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್, ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 155 ರನ್ ಗಳಿಸಿತು.

ಗುಜರಾತ್ ಪರ ವಾಷಿಂಗ್ಟನ್ ಸುಂದರ್ 37 ಎಸೆತಗಳಲ್ಲಿ ಅಜೇಯ 50 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಆರ್‌ಸಿಬಿ ಬೌಲಿಂಗ್ ವಿಭಾಗದಲ್ಲಿ ಭುವನೇಶ್ವರ್ ಕುಮಾರ್ ಮತ್ತು ಹ್ಯಾಜಲ್‌ವುಡ್ ತಲಾ ಎರಡು ವಿಕೆಟ್ ಪಡೆದರೆ, ರಸಿಕ್ ಸಲಾಂ ದಾರ್ ಮೂರು ವಿಕೆಟ್ ಕಬಳಿಸಿ ಮಿಂಚಿದರು. ಕೃನಾಲ್ ಪಾಂಡ್ಯ ಒಂದು ವಿಕೆಟ್ ಪಡೆದರು.

156 ರನ್‌ಗಳ ಗುರಿ ಬೆನ್ನತ್ತಿದ ಆರ್‌ಸಿಬಿಗೆ ಆರಂಭದಿಂದಲೇ ಆತ್ಮವಿಶ್ವಾಸದ ಬ್ಯಾಟಿಂಗ್ ಕಂಡುಬಂದಿತು. ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅಜೇಯ 75 ರನ್‌ಗಳ ಅಮೋಘ ಇನ್ನಿಂಗ್ಸ್ ಆಡಿದರೆ, ವೆಂಕಟೇಶ್ ಅಯ್ಯರ್ 32 ರನ್‌ಗಳ ಕೊಡುಗೆ ನೀಡಿದರು. ಇದರ ಫಲವಾಗಿ ಆರ್‌ಸಿಬಿ 18 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 161 ರನ್ ಗಳಿಸಿ 5 ವಿಕೆಟ್‌ಗಳ ಗೆಲುವು ದಾಖಲಿಸಿತು.

ಈ ಜಯದೊಂದಿಗೆ ಆರ್‌ಸಿಬಿ ಸತತ ಎರಡನೇ ಬಾರಿ ಐಪಿಎಲ್ ಟ್ರೋಫಿ ಗೆದ್ದು ತನ್ನ ಪ್ರಾಬಲ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಪಂದ್ಯಶ್ರೇಷ್ಠ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

ಆರ್ ಸಿ‌ಬಿ ಅಭಿಮಾನಿಗಳಲ್ಲಿ ಹರ್ಷೋದ್ಘಾರ ಮನೆ ಮಾಡಿದ್ದು, ಎಲ್ಲೆಡೆ ಅಭಿಮಾನಿಗಳು ಕುಣಿದು ಕುಪ್ಪಳಿಸಿ ತಮ್ಮ ಸಂತೋಷ ವ್ಯಕ್ತಪಡಿಸಿದ್ದಾರೆ..

Ramesh Babu

Journalist

Share
Published by
Ramesh Babu

Recent Posts

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

5 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

7 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

2 days ago