ಐಪಿಎಲ್ ಹರಾಜು: ದಾಖಲೆ ಬೆಲೆಗೆ ಬಿಕರಿಯಾದ ಸ್ಯಾಮ್ ಕರನ್

ವಿಶ್ವದಾದ್ಯಂತ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿರುವ ಐಪಿಎಲ್ ಟೂರ್ನಿಯ 2023 ನೇ ಸಾಲಿನ ಮಿನಿ ಹರಾಜಿನಲ್ಲಿ ಟಿ-ಟ್ವೆಂಟಿ ವಿಶ್ವಕಪ್ ಫೈನಲ್ ಹೀರೋ ಇಂಗ್ಲೆಂಡ್ ತಂಡದ ಸ್ಟಾರ್ ಆಲ್ ರೌಂಡರ್ ಸ್ಯಾಮ್ ಕರನ್ ನಿರೀಕ್ಷೆಯಂತೆ ಐಪಿಎಲ್ ಇತಿಹಾಸದಲ್ಲಿಯೇ ದಾಖಲೆಯ ಮೊತ್ತ 18.50 ಕೋಟಿಗೆ ಪಂಜಾಬ್ ಕಿಂಗ್ಸ್ ತಂಡದ ಪಾಲಾದರು.

ಆಸ್ಟ್ರೇಲಿಯಾದ ಸ್ಟಾರ್ ಆಲ್ ರೌಂಡರ್ ಕೆಮುರೆನ್ ಗ್ರೀನ್ 17.50 ಕೋಟಿಗೆ ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿಕೊಂಡರು, ಇಂಗ್ಲೆಂಡ್ ತಂಡದ ಮತ್ತೊಬ್ಬ ಸ್ಟಾರ್ ಆಲ್ ರೌಂಡರ್ ಬೆನ್ ಸ್ಟೋಕ್ 16.50 ಕೋಟಿ ರೂಪಾಯಿ ಪಡೆಯುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೇರ್ಪಡೆಯಾದರು.

ಇಂಗ್ಲೆಂಡ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಹ್ಯಾರಿ ಬ್ರೂಕ್ ರನ್ನು ಕೊಂಡುಕೊಳ್ಳಲು ರಾಜಸ್ಥಾನ ರಾಯಲ್ಸ್ ಹಾಗೂ ಹೈದರಾಬಾದ್ ಸನ್ ರೈಸರ್ಸ್ ಸಾಕಷ್ಟು ಪ್ರಯತ್ನ ಪಟ್ಟರೂ ಸಹ ಕೊನೆಗೆ 13.25 ಕೋಟಿ ರೂಪಾಯಿ ಮೌಲ್ಯವನ್ನು ಪಡೆಯುವ ಮೂಲಕ ಹೈದರಾಬಾದ್ ತಂಡವನ್ನು ಕೂಡಿಕೊಂಡರು.

ಕನ್ನಡಿಗರಾದ ಮಯಾಂಕ್ ಅಗರ್ವಾಲ್ 8.25 ಕೋಟಿ (ಹೈದರಾಬಾದ್ ಸನ್ ರೈಸರ್ಸ್), ಮನೀಷ್ ಪಾಂಡೆ 2.40 ಕೋಟಿ (ಡೆಲ್ಲಿ ಕ್ಯಾಪಿಟಲ್) ಸೇರುವ ಮೂಲಕ ಈ ಬಾರಿಯೂ ಸಹ ತವರಿನ ಆರ್ ಸಿಬಿ ಬಿಟ್ಟು ಬೇರೆ ತಂಡಗಳ ಪರವಾಗಿ ಆಡುವಂತಾಗಿದ್ದು ಉತ್ತಮ ಮೌಲ್ಯವನ್ನೇ ಪಡೆದಿದ್ದಾರೆ.

ಇನ್ನುಳಿದಂತೆ ಸ್ಟಾರ್ ಬ್ಯಾಟ್ಸ್‌ಮನ್ಗಳಾದ ಅಂಜಿಕ್ಯಾ ರಹಾನೆ 50 ಲಕ್ಷ (ಸಿಎಸ್ ಕೆ), ವೆಸ್ಟ್ ಇಂಡೀಸ್ನ ಓಡಿಯನ್ ಸ್ಮಿತ್ 1 ಕೋಟಿ (ಎಸ್ ಆರ್ ಎಚ್), ನಿಕಲಸ್ ಪೂರನ್ 16 ಕೋಟಿ (ಲಕ್ನೋ), ಕ್ಲಾಸನ್ (ಎಸ್ ಆರ್ ಎಚ್), ಕೇನ್ ವಿಲಿಯಮ್ಸನ್ 2 ಕೋಟಿ (ಲಕ್ನೋ), ಆಲ್ ರೌಂಡರ್ ಜೈಸನ್ ಹೋಲ್ಡರ್ 5.5 ಕೋಟಿ (ರಾಜಸ್ಥಾನ ರಾಯಲ್ಸ್), ಸ್ಟಾರ್ ಬೌಲರ್ ಶಿವಾಮ್ ಮಾವಿ 6 ಕೋಟಿ (ಗುಜರಾತ್ ಜೈಂಟ್), ಇಂಗ್ಲೆಂಡ್ ಬೌಲರ್‌ ಟ್ರೋಪ್ಲೆ 1.90 ಕೋಟಿ (ಆರ್ ಸಿ ಬಿ) ತಂಡವನ್ನು ಸೇರಿಕೊಂಡರು.

ವಿಶ್ವದ ಶ್ರೇಷ್ಠ ಆಲ್ ರೌಂಡರ್ ಶಕೀಬ್ ಆಲ್ ಹಸನ್, ಬಾಂಗ್ಲಾದೇಶ ತಂಡದ ನಾಯಕ ಲಿಟನ್ ದಾಸ್, ಆಲ್ ರೌಂಡರ್ ಕ್ರಿಸ್ ಜೋರ್ಡನ್, ಸ್ಪಿನ್ನರ್ ಆಡಂ ಜಂಪಾ, ಆಡಂ ಮಿಲ್ಲ್ನೆ, ಮುರುಗನ್ ಅಶ್ವಿನ್ ಸೇರಿದಂತೆ ಹಲವಾರು ಮಂದಿ ಹರಾಜಾಗದೆ ಉಳಿದುಕೊಂಡರು.

Ramesh Babu

Journalist

Share
Published by
Ramesh Babu

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

12 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

13 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

21 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 days ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago