ಐಪಿಎಲ್ ಹರಾಜು: ದಾಖಲೆ ಬೆಲೆಗೆ ಬಿಕರಿಯಾದ ಸ್ಯಾಮ್ ಕರನ್

ವಿಶ್ವದಾದ್ಯಂತ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿರುವ ಐಪಿಎಲ್ ಟೂರ್ನಿಯ 2023 ನೇ ಸಾಲಿನ ಮಿನಿ ಹರಾಜಿನಲ್ಲಿ ಟಿ-ಟ್ವೆಂಟಿ ವಿಶ್ವಕಪ್ ಫೈನಲ್ ಹೀರೋ ಇಂಗ್ಲೆಂಡ್ ತಂಡದ ಸ್ಟಾರ್ ಆಲ್ ರೌಂಡರ್ ಸ್ಯಾಮ್ ಕರನ್ ನಿರೀಕ್ಷೆಯಂತೆ ಐಪಿಎಲ್ ಇತಿಹಾಸದಲ್ಲಿಯೇ ದಾಖಲೆಯ ಮೊತ್ತ 18.50 ಕೋಟಿಗೆ ಪಂಜಾಬ್ ಕಿಂಗ್ಸ್ ತಂಡದ ಪಾಲಾದರು.

ಆಸ್ಟ್ರೇಲಿಯಾದ ಸ್ಟಾರ್ ಆಲ್ ರೌಂಡರ್ ಕೆಮುರೆನ್ ಗ್ರೀನ್ 17.50 ಕೋಟಿಗೆ ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿಕೊಂಡರು, ಇಂಗ್ಲೆಂಡ್ ತಂಡದ ಮತ್ತೊಬ್ಬ ಸ್ಟಾರ್ ಆಲ್ ರೌಂಡರ್ ಬೆನ್ ಸ್ಟೋಕ್ 16.50 ಕೋಟಿ ರೂಪಾಯಿ ಪಡೆಯುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೇರ್ಪಡೆಯಾದರು.

ಇಂಗ್ಲೆಂಡ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಹ್ಯಾರಿ ಬ್ರೂಕ್ ರನ್ನು ಕೊಂಡುಕೊಳ್ಳಲು ರಾಜಸ್ಥಾನ ರಾಯಲ್ಸ್ ಹಾಗೂ ಹೈದರಾಬಾದ್ ಸನ್ ರೈಸರ್ಸ್ ಸಾಕಷ್ಟು ಪ್ರಯತ್ನ ಪಟ್ಟರೂ ಸಹ ಕೊನೆಗೆ 13.25 ಕೋಟಿ ರೂಪಾಯಿ ಮೌಲ್ಯವನ್ನು ಪಡೆಯುವ ಮೂಲಕ ಹೈದರಾಬಾದ್ ತಂಡವನ್ನು ಕೂಡಿಕೊಂಡರು.

ಕನ್ನಡಿಗರಾದ ಮಯಾಂಕ್ ಅಗರ್ವಾಲ್ 8.25 ಕೋಟಿ (ಹೈದರಾಬಾದ್ ಸನ್ ರೈಸರ್ಸ್), ಮನೀಷ್ ಪಾಂಡೆ 2.40 ಕೋಟಿ (ಡೆಲ್ಲಿ ಕ್ಯಾಪಿಟಲ್) ಸೇರುವ ಮೂಲಕ ಈ ಬಾರಿಯೂ ಸಹ ತವರಿನ ಆರ್ ಸಿಬಿ ಬಿಟ್ಟು ಬೇರೆ ತಂಡಗಳ ಪರವಾಗಿ ಆಡುವಂತಾಗಿದ್ದು ಉತ್ತಮ ಮೌಲ್ಯವನ್ನೇ ಪಡೆದಿದ್ದಾರೆ.

ಇನ್ನುಳಿದಂತೆ ಸ್ಟಾರ್ ಬ್ಯಾಟ್ಸ್‌ಮನ್ಗಳಾದ ಅಂಜಿಕ್ಯಾ ರಹಾನೆ 50 ಲಕ್ಷ (ಸಿಎಸ್ ಕೆ), ವೆಸ್ಟ್ ಇಂಡೀಸ್ನ ಓಡಿಯನ್ ಸ್ಮಿತ್ 1 ಕೋಟಿ (ಎಸ್ ಆರ್ ಎಚ್), ನಿಕಲಸ್ ಪೂರನ್ 16 ಕೋಟಿ (ಲಕ್ನೋ), ಕ್ಲಾಸನ್ (ಎಸ್ ಆರ್ ಎಚ್), ಕೇನ್ ವಿಲಿಯಮ್ಸನ್ 2 ಕೋಟಿ (ಲಕ್ನೋ), ಆಲ್ ರೌಂಡರ್ ಜೈಸನ್ ಹೋಲ್ಡರ್ 5.5 ಕೋಟಿ (ರಾಜಸ್ಥಾನ ರಾಯಲ್ಸ್), ಸ್ಟಾರ್ ಬೌಲರ್ ಶಿವಾಮ್ ಮಾವಿ 6 ಕೋಟಿ (ಗುಜರಾತ್ ಜೈಂಟ್), ಇಂಗ್ಲೆಂಡ್ ಬೌಲರ್‌ ಟ್ರೋಪ್ಲೆ 1.90 ಕೋಟಿ (ಆರ್ ಸಿ ಬಿ) ತಂಡವನ್ನು ಸೇರಿಕೊಂಡರು.

ವಿಶ್ವದ ಶ್ರೇಷ್ಠ ಆಲ್ ರೌಂಡರ್ ಶಕೀಬ್ ಆಲ್ ಹಸನ್, ಬಾಂಗ್ಲಾದೇಶ ತಂಡದ ನಾಯಕ ಲಿಟನ್ ದಾಸ್, ಆಲ್ ರೌಂಡರ್ ಕ್ರಿಸ್ ಜೋರ್ಡನ್, ಸ್ಪಿನ್ನರ್ ಆಡಂ ಜಂಪಾ, ಆಡಂ ಮಿಲ್ಲ್ನೆ, ಮುರುಗನ್ ಅಶ್ವಿನ್ ಸೇರಿದಂತೆ ಹಲವಾರು ಮಂದಿ ಹರಾಜಾಗದೆ ಉಳಿದುಕೊಂಡರು.

Ramesh Babu

Journalist

Recent Posts

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

3 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

5 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

1 day ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

1 day ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

1 day ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

2 days ago