ಐಪಿಎಲ್ ಹರಾಜು: ದಾಖಲೆ ಬೆಲೆಗೆ ಬಿಕರಿಯಾದ ಸ್ಯಾಮ್ ಕರನ್

ವಿಶ್ವದಾದ್ಯಂತ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿರುವ ಐಪಿಎಲ್ ಟೂರ್ನಿಯ 2023 ನೇ ಸಾಲಿನ ಮಿನಿ ಹರಾಜಿನಲ್ಲಿ ಟಿ-ಟ್ವೆಂಟಿ ವಿಶ್ವಕಪ್ ಫೈನಲ್ ಹೀರೋ ಇಂಗ್ಲೆಂಡ್ ತಂಡದ ಸ್ಟಾರ್ ಆಲ್ ರೌಂಡರ್ ಸ್ಯಾಮ್ ಕರನ್ ನಿರೀಕ್ಷೆಯಂತೆ ಐಪಿಎಲ್ ಇತಿಹಾಸದಲ್ಲಿಯೇ ದಾಖಲೆಯ ಮೊತ್ತ 18.50 ಕೋಟಿಗೆ ಪಂಜಾಬ್ ಕಿಂಗ್ಸ್ ತಂಡದ ಪಾಲಾದರು.

ಆಸ್ಟ್ರೇಲಿಯಾದ ಸ್ಟಾರ್ ಆಲ್ ರೌಂಡರ್ ಕೆಮುರೆನ್ ಗ್ರೀನ್ 17.50 ಕೋಟಿಗೆ ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿಕೊಂಡರು, ಇಂಗ್ಲೆಂಡ್ ತಂಡದ ಮತ್ತೊಬ್ಬ ಸ್ಟಾರ್ ಆಲ್ ರೌಂಡರ್ ಬೆನ್ ಸ್ಟೋಕ್ 16.50 ಕೋಟಿ ರೂಪಾಯಿ ಪಡೆಯುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೇರ್ಪಡೆಯಾದರು.

ಇಂಗ್ಲೆಂಡ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಹ್ಯಾರಿ ಬ್ರೂಕ್ ರನ್ನು ಕೊಂಡುಕೊಳ್ಳಲು ರಾಜಸ್ಥಾನ ರಾಯಲ್ಸ್ ಹಾಗೂ ಹೈದರಾಬಾದ್ ಸನ್ ರೈಸರ್ಸ್ ಸಾಕಷ್ಟು ಪ್ರಯತ್ನ ಪಟ್ಟರೂ ಸಹ ಕೊನೆಗೆ 13.25 ಕೋಟಿ ರೂಪಾಯಿ ಮೌಲ್ಯವನ್ನು ಪಡೆಯುವ ಮೂಲಕ ಹೈದರಾಬಾದ್ ತಂಡವನ್ನು ಕೂಡಿಕೊಂಡರು.

ಕನ್ನಡಿಗರಾದ ಮಯಾಂಕ್ ಅಗರ್ವಾಲ್ 8.25 ಕೋಟಿ (ಹೈದರಾಬಾದ್ ಸನ್ ರೈಸರ್ಸ್), ಮನೀಷ್ ಪಾಂಡೆ 2.40 ಕೋಟಿ (ಡೆಲ್ಲಿ ಕ್ಯಾಪಿಟಲ್) ಸೇರುವ ಮೂಲಕ ಈ ಬಾರಿಯೂ ಸಹ ತವರಿನ ಆರ್ ಸಿಬಿ ಬಿಟ್ಟು ಬೇರೆ ತಂಡಗಳ ಪರವಾಗಿ ಆಡುವಂತಾಗಿದ್ದು ಉತ್ತಮ ಮೌಲ್ಯವನ್ನೇ ಪಡೆದಿದ್ದಾರೆ.

ಇನ್ನುಳಿದಂತೆ ಸ್ಟಾರ್ ಬ್ಯಾಟ್ಸ್‌ಮನ್ಗಳಾದ ಅಂಜಿಕ್ಯಾ ರಹಾನೆ 50 ಲಕ್ಷ (ಸಿಎಸ್ ಕೆ), ವೆಸ್ಟ್ ಇಂಡೀಸ್ನ ಓಡಿಯನ್ ಸ್ಮಿತ್ 1 ಕೋಟಿ (ಎಸ್ ಆರ್ ಎಚ್), ನಿಕಲಸ್ ಪೂರನ್ 16 ಕೋಟಿ (ಲಕ್ನೋ), ಕ್ಲಾಸನ್ (ಎಸ್ ಆರ್ ಎಚ್), ಕೇನ್ ವಿಲಿಯಮ್ಸನ್ 2 ಕೋಟಿ (ಲಕ್ನೋ), ಆಲ್ ರೌಂಡರ್ ಜೈಸನ್ ಹೋಲ್ಡರ್ 5.5 ಕೋಟಿ (ರಾಜಸ್ಥಾನ ರಾಯಲ್ಸ್), ಸ್ಟಾರ್ ಬೌಲರ್ ಶಿವಾಮ್ ಮಾವಿ 6 ಕೋಟಿ (ಗುಜರಾತ್ ಜೈಂಟ್), ಇಂಗ್ಲೆಂಡ್ ಬೌಲರ್‌ ಟ್ರೋಪ್ಲೆ 1.90 ಕೋಟಿ (ಆರ್ ಸಿ ಬಿ) ತಂಡವನ್ನು ಸೇರಿಕೊಂಡರು.

ವಿಶ್ವದ ಶ್ರೇಷ್ಠ ಆಲ್ ರೌಂಡರ್ ಶಕೀಬ್ ಆಲ್ ಹಸನ್, ಬಾಂಗ್ಲಾದೇಶ ತಂಡದ ನಾಯಕ ಲಿಟನ್ ದಾಸ್, ಆಲ್ ರೌಂಡರ್ ಕ್ರಿಸ್ ಜೋರ್ಡನ್, ಸ್ಪಿನ್ನರ್ ಆಡಂ ಜಂಪಾ, ಆಡಂ ಮಿಲ್ಲ್ನೆ, ಮುರುಗನ್ ಅಶ್ವಿನ್ ಸೇರಿದಂತೆ ಹಲವಾರು ಮಂದಿ ಹರಾಜಾಗದೆ ಉಳಿದುಕೊಂಡರು.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

8 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

16 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

20 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

2 days ago