ಐಪಿಎಲ್ ಹರಾಜು: ದಾಖಲೆ ಬೆಲೆಗೆ ಬಿಕರಿಯಾದ ಸ್ಯಾಮ್ ಕರನ್

ವಿಶ್ವದಾದ್ಯಂತ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿರುವ ಐಪಿಎಲ್ ಟೂರ್ನಿಯ 2023 ನೇ ಸಾಲಿನ ಮಿನಿ ಹರಾಜಿನಲ್ಲಿ ಟಿ-ಟ್ವೆಂಟಿ ವಿಶ್ವಕಪ್ ಫೈನಲ್ ಹೀರೋ ಇಂಗ್ಲೆಂಡ್ ತಂಡದ ಸ್ಟಾರ್ ಆಲ್ ರೌಂಡರ್ ಸ್ಯಾಮ್ ಕರನ್ ನಿರೀಕ್ಷೆಯಂತೆ ಐಪಿಎಲ್ ಇತಿಹಾಸದಲ್ಲಿಯೇ ದಾಖಲೆಯ ಮೊತ್ತ 18.50 ಕೋಟಿಗೆ ಪಂಜಾಬ್ ಕಿಂಗ್ಸ್ ತಂಡದ ಪಾಲಾದರು.

ಆಸ್ಟ್ರೇಲಿಯಾದ ಸ್ಟಾರ್ ಆಲ್ ರೌಂಡರ್ ಕೆಮುರೆನ್ ಗ್ರೀನ್ 17.50 ಕೋಟಿಗೆ ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿಕೊಂಡರು, ಇಂಗ್ಲೆಂಡ್ ತಂಡದ ಮತ್ತೊಬ್ಬ ಸ್ಟಾರ್ ಆಲ್ ರೌಂಡರ್ ಬೆನ್ ಸ್ಟೋಕ್ 16.50 ಕೋಟಿ ರೂಪಾಯಿ ಪಡೆಯುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೇರ್ಪಡೆಯಾದರು.

ಇಂಗ್ಲೆಂಡ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಹ್ಯಾರಿ ಬ್ರೂಕ್ ರನ್ನು ಕೊಂಡುಕೊಳ್ಳಲು ರಾಜಸ್ಥಾನ ರಾಯಲ್ಸ್ ಹಾಗೂ ಹೈದರಾಬಾದ್ ಸನ್ ರೈಸರ್ಸ್ ಸಾಕಷ್ಟು ಪ್ರಯತ್ನ ಪಟ್ಟರೂ ಸಹ ಕೊನೆಗೆ 13.25 ಕೋಟಿ ರೂಪಾಯಿ ಮೌಲ್ಯವನ್ನು ಪಡೆಯುವ ಮೂಲಕ ಹೈದರಾಬಾದ್ ತಂಡವನ್ನು ಕೂಡಿಕೊಂಡರು.

ಕನ್ನಡಿಗರಾದ ಮಯಾಂಕ್ ಅಗರ್ವಾಲ್ 8.25 ಕೋಟಿ (ಹೈದರಾಬಾದ್ ಸನ್ ರೈಸರ್ಸ್), ಮನೀಷ್ ಪಾಂಡೆ 2.40 ಕೋಟಿ (ಡೆಲ್ಲಿ ಕ್ಯಾಪಿಟಲ್) ಸೇರುವ ಮೂಲಕ ಈ ಬಾರಿಯೂ ಸಹ ತವರಿನ ಆರ್ ಸಿಬಿ ಬಿಟ್ಟು ಬೇರೆ ತಂಡಗಳ ಪರವಾಗಿ ಆಡುವಂತಾಗಿದ್ದು ಉತ್ತಮ ಮೌಲ್ಯವನ್ನೇ ಪಡೆದಿದ್ದಾರೆ.

ಇನ್ನುಳಿದಂತೆ ಸ್ಟಾರ್ ಬ್ಯಾಟ್ಸ್‌ಮನ್ಗಳಾದ ಅಂಜಿಕ್ಯಾ ರಹಾನೆ 50 ಲಕ್ಷ (ಸಿಎಸ್ ಕೆ), ವೆಸ್ಟ್ ಇಂಡೀಸ್ನ ಓಡಿಯನ್ ಸ್ಮಿತ್ 1 ಕೋಟಿ (ಎಸ್ ಆರ್ ಎಚ್), ನಿಕಲಸ್ ಪೂರನ್ 16 ಕೋಟಿ (ಲಕ್ನೋ), ಕ್ಲಾಸನ್ (ಎಸ್ ಆರ್ ಎಚ್), ಕೇನ್ ವಿಲಿಯಮ್ಸನ್ 2 ಕೋಟಿ (ಲಕ್ನೋ), ಆಲ್ ರೌಂಡರ್ ಜೈಸನ್ ಹೋಲ್ಡರ್ 5.5 ಕೋಟಿ (ರಾಜಸ್ಥಾನ ರಾಯಲ್ಸ್), ಸ್ಟಾರ್ ಬೌಲರ್ ಶಿವಾಮ್ ಮಾವಿ 6 ಕೋಟಿ (ಗುಜರಾತ್ ಜೈಂಟ್), ಇಂಗ್ಲೆಂಡ್ ಬೌಲರ್‌ ಟ್ರೋಪ್ಲೆ 1.90 ಕೋಟಿ (ಆರ್ ಸಿ ಬಿ) ತಂಡವನ್ನು ಸೇರಿಕೊಂಡರು.

ವಿಶ್ವದ ಶ್ರೇಷ್ಠ ಆಲ್ ರೌಂಡರ್ ಶಕೀಬ್ ಆಲ್ ಹಸನ್, ಬಾಂಗ್ಲಾದೇಶ ತಂಡದ ನಾಯಕ ಲಿಟನ್ ದಾಸ್, ಆಲ್ ರೌಂಡರ್ ಕ್ರಿಸ್ ಜೋರ್ಡನ್, ಸ್ಪಿನ್ನರ್ ಆಡಂ ಜಂಪಾ, ಆಡಂ ಮಿಲ್ಲ್ನೆ, ಮುರುಗನ್ ಅಶ್ವಿನ್ ಸೇರಿದಂತೆ ಹಲವಾರು ಮಂದಿ ಹರಾಜಾಗದೆ ಉಳಿದುಕೊಂಡರು.

Ramesh Babu

Journalist

Recent Posts

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

6 minutes ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

2 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

3 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

16 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

20 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago