ಡಿಜಿ ಐಜಿಪಿಯಾಗಿದ್ದ ಪ್ರವೀಣ್ ಸೂದ್ ಅವರನ್ನು ಸಿಬಿಐ ನಿರ್ದೇಶಕರಾಗಿ ನೇಮಕ ಮಾಡಲಾಯಿತು. ತೆರವಾಗಿದ್ದ ಸ್ಥಾನಕ್ಕೆ ಅಲೋಕ್ ಮೋಹನ್ ಅವರಿಗೆ ಹೆಚ್ಚುವರಿ ಹೊಣೆ ನೀಡಿ ನಿಯೋಜಿಸಲಾಗಿದೆ.
ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಜಿಪಿ ಅಲೋಕ್ ಮೋಹನ್ ಅವರಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ–ಐಜಿಪಿ) ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಡಿಜಿ– ಐಜಿಪಿಯಾಗಿರುವ ಪ್ರವೀಣ್ ಸೂದ್ ಅವರು ಕೇಂದ್ರೀಯ ತನಿಖಾ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಿ ನೇಮಕಗೊಂಡಿದ್ದು, ಮೇ 22ರಂದು ಡಿಜಿ– ಐಜಿಪಿ ಹುದ್ದೆಯಿಂದ ಬಿಡುಗಡೆಯಾಗಲಿದ್ದಾರೆ. ಇದರಿಂದ ತೆರವಾಗಲಿರುವ ಹುದ್ದೆಗೆ ಅಲೋಕ್ ಮೋಹನ್ ಅವರನ್ನು ನೇಮಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ(ಡಿಪಿಎಆರ್) ಆದೇಶ ಹೊರಡಿಸಿದೆ. ಕರ್ನಾಟಕ ಪೊಲೀಸ್ ಹೌಸಿಂಗ್ ಕಾರ್ಪೊರೇಷನ್ ಅಧ್ಯಕ್ಷ ಹುದ್ದೆಯ ಜವಾಬ್ದಾರಿಯನ್ನೂ ಇವರಿಗೆ ವಹಿಸಲಾಗಿದೆ.
ಅಲೋಕ್ ಅವರು ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ. ಬಿಹಾರ ಪಾಟ್ನಾದ ಅಲೋಕ್ ಮೋಹನ್, 1987ನೇ ಬ್ಯಾಚ್ನ ಇವರು ಎಂ.ಎಸ್ಸಿ ಹಾಗೂ ಎಂ.ಫಿಲ್ ವ್ಯಾಸಂಗ ಮಾಡಿದ್ದಾರೆ.. ಅತ್ಯುತ್ತಮ ಸೇವೆಗೆ ರಾಷ್ಟ್ರಪತಿ ಪದಕವನ್ನು ಪಡೆದಿದ್ಧಾರೆ. ಇಲಾಖೆಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದರು.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…