Categories: ರಾಜ್ಯ

ಐಪಿಎಸ್ ಅಲೋಕ್ ಮೋಹನ್ ಅವರಿಗೆ ಹೆಚ್ಚುವರಿಯಾಗಿ ಡಿಜಿ–ಐಜಿಪಿ ಜವಾಬ್ದಾರಿ

ಡಿಜಿ ಐಜಿಪಿಯಾಗಿದ್ದ ಪ್ರವೀಣ್‌ ಸೂದ್‌ ಅವರನ್ನು ಸಿಬಿಐ ನಿರ್ದೇಶಕರಾಗಿ ನೇಮಕ ಮಾಡಲಾಯಿತು. ತೆರವಾಗಿದ್ದ ಸ್ಥಾನಕ್ಕೆ ಅಲೋಕ್‌ ಮೋಹನ್‌ ಅವರಿಗೆ ಹೆಚ್ಚುವರಿ ಹೊಣೆ ನೀಡಿ ನಿಯೋಜಿಸಲಾಗಿದೆ.

ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಜಿಪಿ ಅಲೋಕ್ ಮೋಹನ್ ಅವರಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ–ಐಜಿಪಿ) ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ಡಿಜಿ– ಐಜಿಪಿಯಾಗಿರುವ ಪ್ರವೀಣ್ ಸೂದ್ ಅವರು ಕೇಂದ್ರೀಯ ತನಿಖಾ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಿ ನೇಮಕಗೊಂಡಿದ್ದು, ಮೇ 22ರಂದು ಡಿಜಿ– ಐಜಿಪಿ ಹುದ್ದೆಯಿಂದ ಬಿಡುಗಡೆಯಾಗಲಿದ್ದಾರೆ. ಇದರಿಂದ ತೆರವಾಗಲಿರುವ ಹುದ್ದೆಗೆ ಅಲೋಕ್ ಮೋಹನ್ ಅವರನ್ನು ನೇಮಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ(ಡಿಪಿಎಆರ್‌) ಆದೇಶ ಹೊರಡಿಸಿದೆ. ಕರ್ನಾಟಕ ಪೊಲೀಸ್ ಹೌಸಿಂಗ್ ಕಾರ್ಪೊರೇಷನ್‌ ಅಧ್ಯಕ್ಷ ಹುದ್ದೆಯ ಜವಾಬ್ದಾರಿಯನ್ನೂ ಇವರಿಗೆ ವಹಿಸಲಾಗಿದೆ.

ಅಲೋಕ್ ಅವರು ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ. ಬಿಹಾರ ಪಾಟ್ನಾದ ಅಲೋಕ್‌ ಮೋಹನ್, 1987ನೇ ಬ್ಯಾಚ್‌ನ ಇವರು ಎಂ.ಎಸ್ಸಿ ಹಾಗೂ ಎಂ.ಫಿಲ್ ವ್ಯಾಸಂಗ ಮಾಡಿದ್ದಾರೆ.. ಅತ್ಯುತ್ತಮ ಸೇವೆಗೆ ರಾಷ್ಟ್ರಪತಿ ಪದಕವನ್ನು ಪಡೆದಿದ್ಧಾರೆ. ಇಲಾಖೆಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದರು.

Ramesh Babu

Journalist

Recent Posts

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

14 hours ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

16 hours ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

22 hours ago

ಫುಟ್ ಪಾತ್…… (ಗೂಡಂಗಡಿಯ ಜನರ ಕರುಳ ಬಳ್ಳಿಯ ಕರೆ….)

Footpath...... ಫುಟ್ ಪಾತ್...... ( ಗೂಡಂಗಡಿಯ ಜನರ ಕರುಳ ಬಳ್ಳಿಯ ಕರೆ....) ಫುಟ್ ಪಾತ್ ಎಂದು ಆಂಗ್ಲ ಭಾಷೆಯಲ್ಲಿ ಕರೆಯಲ್ಪಡುವ…

1 day ago

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ: ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿ ವಿಸ್ತರಣೆ

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಸಂಬಂಧಿಸಿದಂತೆ ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಯ ದಿನಾಂಕವನ್ನು ವಿಸ್ತರಿಸಲಾಗಿದೆ. ಜೊತೆಗೆ, ಈಗಾಗಲೇ…

2 days ago

ಪೂರ್ವ ವೈಷಮ್ಯದ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ

ದೊಡ್ಡಬಳ್ಳಾಪುರ: 2019ರ ಜನವರಿಯಲ್ಲಿ ದೊಡ್ಡಬಳ್ಳಾಪುರ ನಗರದ ಕೊರಚರಹಟ್ಟಿಯ ಪ್ರೀತಿ ವೈನ್ಸ್ ವೃತ್ತದ ಸಮೀಪ ನಡೆದಿದ್ದ ಗಂಗಾಧರ್ ಅಲಿಯಾಸ್ ದಾಸ್ ಕೊಲೆ…

2 days ago