ಡಿಜಿ ಐಜಿಪಿಯಾಗಿದ್ದ ಪ್ರವೀಣ್ ಸೂದ್ ಅವರನ್ನು ಸಿಬಿಐ ನಿರ್ದೇಶಕರಾಗಿ ನೇಮಕ ಮಾಡಲಾಯಿತು. ತೆರವಾಗಿದ್ದ ಸ್ಥಾನಕ್ಕೆ ಅಲೋಕ್ ಮೋಹನ್ ಅವರಿಗೆ ಹೆಚ್ಚುವರಿ ಹೊಣೆ ನೀಡಿ ನಿಯೋಜಿಸಲಾಗಿದೆ.
ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಜಿಪಿ ಅಲೋಕ್ ಮೋಹನ್ ಅವರಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ–ಐಜಿಪಿ) ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಡಿಜಿ– ಐಜಿಪಿಯಾಗಿರುವ ಪ್ರವೀಣ್ ಸೂದ್ ಅವರು ಕೇಂದ್ರೀಯ ತನಿಖಾ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಿ ನೇಮಕಗೊಂಡಿದ್ದು, ಮೇ 22ರಂದು ಡಿಜಿ– ಐಜಿಪಿ ಹುದ್ದೆಯಿಂದ ಬಿಡುಗಡೆಯಾಗಲಿದ್ದಾರೆ. ಇದರಿಂದ ತೆರವಾಗಲಿರುವ ಹುದ್ದೆಗೆ ಅಲೋಕ್ ಮೋಹನ್ ಅವರನ್ನು ನೇಮಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ(ಡಿಪಿಎಆರ್) ಆದೇಶ ಹೊರಡಿಸಿದೆ. ಕರ್ನಾಟಕ ಪೊಲೀಸ್ ಹೌಸಿಂಗ್ ಕಾರ್ಪೊರೇಷನ್ ಅಧ್ಯಕ್ಷ ಹುದ್ದೆಯ ಜವಾಬ್ದಾರಿಯನ್ನೂ ಇವರಿಗೆ ವಹಿಸಲಾಗಿದೆ.
ಅಲೋಕ್ ಅವರು ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ. ಬಿಹಾರ ಪಾಟ್ನಾದ ಅಲೋಕ್ ಮೋಹನ್, 1987ನೇ ಬ್ಯಾಚ್ನ ಇವರು ಎಂ.ಎಸ್ಸಿ ಹಾಗೂ ಎಂ.ಫಿಲ್ ವ್ಯಾಸಂಗ ಮಾಡಿದ್ದಾರೆ.. ಅತ್ಯುತ್ತಮ ಸೇವೆಗೆ ರಾಷ್ಟ್ರಪತಿ ಪದಕವನ್ನು ಪಡೆದಿದ್ಧಾರೆ. ಇಲಾಖೆಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದರು.
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…
ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…
ಹೊಸಕೋಟೆ: ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…