ಐಫೋನ್ 16 ಆವೃತ್ತಿಯ ಮೊಬೈಲ್ ಮಾರುಕಟ್ಟೆಗೆ ಲಗ್ಗೆ: ಐಫೋನ್ 16 ಖರೀದಿಸಲು ಮುಗಿಬಿದ್ದ ಜನ: ಬೆಳಗ್ಗೆ 5 ಗಂಟೆಯಿಂದಲೆ ಐಫೋನ್ ಸ್ಟೋರ್ ಗಳ ಮುಂದೆ ಜನ ಜಮಾವಣೆ

ಮಹಾರಾಷ್ಟ್ರ: ಐಫೋನ್ 16 ಆವೃತ್ತಿಯ ಮೊಬೈಲ್ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ದೆಹಲಿ ಹಾಗೂ ಮುಂಬೈನ ಐಫೋನ್ ಸ್ಟೋರ್ ಗಳಲ್ಲಿ ಮಾತ್ರ ಲಭ್ಯವಿದ್ದು, ಇದೀಗ ಈ ಫೋನ್ ಖರೀದಿಸಲು ಬೆಳಗ್ಗೆ 5 ಗಂಟೆಯಿಂದಲೆ ಜನ ಜಮಾಯಿಸಿದ್ದಾರೆ.

‘ಮೇಕ್ ಇನ್ ಇಂಡಿಯಾ’ ಐಫೋನ್ 16 ಗಾಗಿ ಮುಂಗಡ ಆರ್ಡರ್ ನಲ್ಲಿ ಏರಿಕೆ ಕಂಡಿದೆ.

ಐಫೋನ್ 16 ಪ್ರೊ ಬೆಲೆ ₹1.19 ಲಕ್ಷ ಹಾಗೂ ಐಫೋನ್ 16 ಪ್ರೊ ಮ್ಯಾಕ್ಸ್ ಬೆಲೆ ₹1.44ಲಕ್ಷದಿಂದ ಲಭ್ಯ’ ಎಂದು ಕಂಪನಿ ಹೇಳಿದೆ.

ಐಫೋನ್ 16 ಮಾದರಿಗೆ ದೇಶ ಸೇರಿದಂತೆ ವಿದೇಶದಲ್ಲೂ ಸಾಕಷ್ಟು ಬೇಡಿಕೆಯಿದ್ದು, ದಾಖಲೆ ಪ್ರಮಾಣದಲ್ಲಿ ಮಾರಾಟವಾಗುವ ಸಾಧ್ಯತೆಯಿದೆ. ಅಲ್ಲದೇ ಹೊಸ 16 ಸರಣಿಯು ಹಿಂದಿನ ದಾಖಲೆಗಳನ್ನು ಮುರಿಯುವುದು ಖಚಿತ ಎಂದು ವರದಿಯಾಗಿದೆ..

ಐಫೋನ್ 16 ಪ್ರೊ ಹಾಗೂ ಐಫೋನ್ 16 ಪ್ರೊ ಮ್ಯಾಕ್ಸ್ ಫೋನ್‌ಗಳು 128ಜಿಬಿ, 256ಜಿಬಿ, 512ಜಿಬಿ ಹಾಗೂ 1 ಟಿಬಿ ಎಕ್ಸ್ಟ್ರನಲ್ ಸಾಮರ್ಥ್ಯದೊಂದಿಗೆ ಲಭ್ಯವಿದೆ. ಈವರೆಗಿನ ಐಫೋನ್‌ಗಳಲ್ಲೇ ಅತಿ ದೊಡ್ಡ ಡಿಸ್‌ಪ್ಲೇ 6.3 ಇಂಚು ಹಾಗೂ 6.9 ಇಂಚಿನ ಪರದೆಯುಳ್ಳ ಫೋನ್‌ಗಳು ಇವಾಗಿವೆ.

ಇದೇ ಮೊದಲ ಬಾರಿಗೆ ಹಿಂದಿನ ಆವೃತ್ತಿಯ ದುಬಾರಿ ಮಾದರಿಯ ಫೋನ್ ಬೆಲೆಗಿದ ಅಗ್ಗದ ಬೆಲೆಗೆ 16 ಸರಣಿಯ ಐಫೋನ್ ಪ್ರೊ ಸರಣಿ ಮಾರಾಟವಾಗುತ್ತಿರುವುದು ವಿಶೇಷವಾಗಿದೆ.

ಭಾರತದಲ್ಲಿ ತಯಾರಾದ ಐಫೋನ್ 16 ಹಾಗೂ ಐಫೋನ್ 16 ಪ್ಲಸ್ ಫೋನ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಐಫೋನ್ 16ರ ಬೆಲೆ ₹79,900ರಿಂದ ಆರಂಭವಾದರೆ, 16 ಪ್ಲಸ್ ಫೋನ್ ಬೆಲೆ ₹89,900ರಿಂದ ಲಭ್ಯ. ಈ ಫೋನ್‌ಗಳು 128ಜಿಬಿ, 256ಜಿಬಿ, 512ಜಿಬಿ ಎಕ್ಸ್ಟ್ರನಲ್ ಸಾಮರ್ಥ್ಯದೊಂದಿಗೆ ಲಭ್ಯ ಎಂದು ಕಂಪನಿ ಹೇಳಿದೆ.

Ramesh Babu

Journalist

Share
Published by
Ramesh Babu

Recent Posts

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

41 minutes ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

9 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

11 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

21 hours ago

ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ- ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ- ಶಾಸಕ ಧೀರಜ್‌ ಮುನಿರಾಜ್

ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ. ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಧೀರಜ್‌…

1 day ago

ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ…

1 day ago