ಐಫೋನ್ 16 ಆವೃತ್ತಿಯ ಮೊಬೈಲ್ ಮಾರುಕಟ್ಟೆಗೆ ಲಗ್ಗೆ: ಐಫೋನ್ 16 ಖರೀದಿಸಲು ಮುಗಿಬಿದ್ದ ಜನ: ಬೆಳಗ್ಗೆ 5 ಗಂಟೆಯಿಂದಲೆ ಐಫೋನ್ ಸ್ಟೋರ್ ಗಳ ಮುಂದೆ ಜನ ಜಮಾವಣೆ

ಮಹಾರಾಷ್ಟ್ರ: ಐಫೋನ್ 16 ಆವೃತ್ತಿಯ ಮೊಬೈಲ್ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ದೆಹಲಿ ಹಾಗೂ ಮುಂಬೈನ ಐಫೋನ್ ಸ್ಟೋರ್ ಗಳಲ್ಲಿ ಮಾತ್ರ ಲಭ್ಯವಿದ್ದು, ಇದೀಗ ಈ ಫೋನ್ ಖರೀದಿಸಲು ಬೆಳಗ್ಗೆ 5 ಗಂಟೆಯಿಂದಲೆ ಜನ ಜಮಾಯಿಸಿದ್ದಾರೆ.

‘ಮೇಕ್ ಇನ್ ಇಂಡಿಯಾ’ ಐಫೋನ್ 16 ಗಾಗಿ ಮುಂಗಡ ಆರ್ಡರ್ ನಲ್ಲಿ ಏರಿಕೆ ಕಂಡಿದೆ.

ಐಫೋನ್ 16 ಪ್ರೊ ಬೆಲೆ ₹1.19 ಲಕ್ಷ ಹಾಗೂ ಐಫೋನ್ 16 ಪ್ರೊ ಮ್ಯಾಕ್ಸ್ ಬೆಲೆ ₹1.44ಲಕ್ಷದಿಂದ ಲಭ್ಯ’ ಎಂದು ಕಂಪನಿ ಹೇಳಿದೆ.

ಐಫೋನ್ 16 ಮಾದರಿಗೆ ದೇಶ ಸೇರಿದಂತೆ ವಿದೇಶದಲ್ಲೂ ಸಾಕಷ್ಟು ಬೇಡಿಕೆಯಿದ್ದು, ದಾಖಲೆ ಪ್ರಮಾಣದಲ್ಲಿ ಮಾರಾಟವಾಗುವ ಸಾಧ್ಯತೆಯಿದೆ. ಅಲ್ಲದೇ ಹೊಸ 16 ಸರಣಿಯು ಹಿಂದಿನ ದಾಖಲೆಗಳನ್ನು ಮುರಿಯುವುದು ಖಚಿತ ಎಂದು ವರದಿಯಾಗಿದೆ..

ಐಫೋನ್ 16 ಪ್ರೊ ಹಾಗೂ ಐಫೋನ್ 16 ಪ್ರೊ ಮ್ಯಾಕ್ಸ್ ಫೋನ್‌ಗಳು 128ಜಿಬಿ, 256ಜಿಬಿ, 512ಜಿಬಿ ಹಾಗೂ 1 ಟಿಬಿ ಎಕ್ಸ್ಟ್ರನಲ್ ಸಾಮರ್ಥ್ಯದೊಂದಿಗೆ ಲಭ್ಯವಿದೆ. ಈವರೆಗಿನ ಐಫೋನ್‌ಗಳಲ್ಲೇ ಅತಿ ದೊಡ್ಡ ಡಿಸ್‌ಪ್ಲೇ 6.3 ಇಂಚು ಹಾಗೂ 6.9 ಇಂಚಿನ ಪರದೆಯುಳ್ಳ ಫೋನ್‌ಗಳು ಇವಾಗಿವೆ.

ಇದೇ ಮೊದಲ ಬಾರಿಗೆ ಹಿಂದಿನ ಆವೃತ್ತಿಯ ದುಬಾರಿ ಮಾದರಿಯ ಫೋನ್ ಬೆಲೆಗಿದ ಅಗ್ಗದ ಬೆಲೆಗೆ 16 ಸರಣಿಯ ಐಫೋನ್ ಪ್ರೊ ಸರಣಿ ಮಾರಾಟವಾಗುತ್ತಿರುವುದು ವಿಶೇಷವಾಗಿದೆ.

ಭಾರತದಲ್ಲಿ ತಯಾರಾದ ಐಫೋನ್ 16 ಹಾಗೂ ಐಫೋನ್ 16 ಪ್ಲಸ್ ಫೋನ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಐಫೋನ್ 16ರ ಬೆಲೆ ₹79,900ರಿಂದ ಆರಂಭವಾದರೆ, 16 ಪ್ಲಸ್ ಫೋನ್ ಬೆಲೆ ₹89,900ರಿಂದ ಲಭ್ಯ. ಈ ಫೋನ್‌ಗಳು 128ಜಿಬಿ, 256ಜಿಬಿ, 512ಜಿಬಿ ಎಕ್ಸ್ಟ್ರನಲ್ ಸಾಮರ್ಥ್ಯದೊಂದಿಗೆ ಲಭ್ಯ ಎಂದು ಕಂಪನಿ ಹೇಳಿದೆ.

Ramesh Babu

Journalist

Share
Published by
Ramesh Babu

Recent Posts

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

26 minutes ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

1 hour ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

2 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

4 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

11 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

11 hours ago