ಐಫೋನ್ 16 ಆವೃತ್ತಿಯ ಮೊಬೈಲ್ ಮಾರುಕಟ್ಟೆಗೆ ಲಗ್ಗೆ: ಐಫೋನ್ 16 ಖರೀದಿಸಲು ಮುಗಿಬಿದ್ದ ಜನ: ಬೆಳಗ್ಗೆ 5 ಗಂಟೆಯಿಂದಲೆ ಐಫೋನ್ ಸ್ಟೋರ್ ಗಳ ಮುಂದೆ ಜನ ಜಮಾವಣೆ

ಮಹಾರಾಷ್ಟ್ರ: ಐಫೋನ್ 16 ಆವೃತ್ತಿಯ ಮೊಬೈಲ್ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ದೆಹಲಿ ಹಾಗೂ ಮುಂಬೈನ ಐಫೋನ್ ಸ್ಟೋರ್ ಗಳಲ್ಲಿ ಮಾತ್ರ ಲಭ್ಯವಿದ್ದು, ಇದೀಗ ಈ ಫೋನ್ ಖರೀದಿಸಲು ಬೆಳಗ್ಗೆ 5 ಗಂಟೆಯಿಂದಲೆ ಜನ ಜಮಾಯಿಸಿದ್ದಾರೆ.

‘ಮೇಕ್ ಇನ್ ಇಂಡಿಯಾ’ ಐಫೋನ್ 16 ಗಾಗಿ ಮುಂಗಡ ಆರ್ಡರ್ ನಲ್ಲಿ ಏರಿಕೆ ಕಂಡಿದೆ.

ಐಫೋನ್ 16 ಪ್ರೊ ಬೆಲೆ ₹1.19 ಲಕ್ಷ ಹಾಗೂ ಐಫೋನ್ 16 ಪ್ರೊ ಮ್ಯಾಕ್ಸ್ ಬೆಲೆ ₹1.44ಲಕ್ಷದಿಂದ ಲಭ್ಯ’ ಎಂದು ಕಂಪನಿ ಹೇಳಿದೆ.

ಐಫೋನ್ 16 ಮಾದರಿಗೆ ದೇಶ ಸೇರಿದಂತೆ ವಿದೇಶದಲ್ಲೂ ಸಾಕಷ್ಟು ಬೇಡಿಕೆಯಿದ್ದು, ದಾಖಲೆ ಪ್ರಮಾಣದಲ್ಲಿ ಮಾರಾಟವಾಗುವ ಸಾಧ್ಯತೆಯಿದೆ. ಅಲ್ಲದೇ ಹೊಸ 16 ಸರಣಿಯು ಹಿಂದಿನ ದಾಖಲೆಗಳನ್ನು ಮುರಿಯುವುದು ಖಚಿತ ಎಂದು ವರದಿಯಾಗಿದೆ..

ಐಫೋನ್ 16 ಪ್ರೊ ಹಾಗೂ ಐಫೋನ್ 16 ಪ್ರೊ ಮ್ಯಾಕ್ಸ್ ಫೋನ್‌ಗಳು 128ಜಿಬಿ, 256ಜಿಬಿ, 512ಜಿಬಿ ಹಾಗೂ 1 ಟಿಬಿ ಎಕ್ಸ್ಟ್ರನಲ್ ಸಾಮರ್ಥ್ಯದೊಂದಿಗೆ ಲಭ್ಯವಿದೆ. ಈವರೆಗಿನ ಐಫೋನ್‌ಗಳಲ್ಲೇ ಅತಿ ದೊಡ್ಡ ಡಿಸ್‌ಪ್ಲೇ 6.3 ಇಂಚು ಹಾಗೂ 6.9 ಇಂಚಿನ ಪರದೆಯುಳ್ಳ ಫೋನ್‌ಗಳು ಇವಾಗಿವೆ.

ಇದೇ ಮೊದಲ ಬಾರಿಗೆ ಹಿಂದಿನ ಆವೃತ್ತಿಯ ದುಬಾರಿ ಮಾದರಿಯ ಫೋನ್ ಬೆಲೆಗಿದ ಅಗ್ಗದ ಬೆಲೆಗೆ 16 ಸರಣಿಯ ಐಫೋನ್ ಪ್ರೊ ಸರಣಿ ಮಾರಾಟವಾಗುತ್ತಿರುವುದು ವಿಶೇಷವಾಗಿದೆ.

ಭಾರತದಲ್ಲಿ ತಯಾರಾದ ಐಫೋನ್ 16 ಹಾಗೂ ಐಫೋನ್ 16 ಪ್ಲಸ್ ಫೋನ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಐಫೋನ್ 16ರ ಬೆಲೆ ₹79,900ರಿಂದ ಆರಂಭವಾದರೆ, 16 ಪ್ಲಸ್ ಫೋನ್ ಬೆಲೆ ₹89,900ರಿಂದ ಲಭ್ಯ. ಈ ಫೋನ್‌ಗಳು 128ಜಿಬಿ, 256ಜಿಬಿ, 512ಜಿಬಿ ಎಕ್ಸ್ಟ್ರನಲ್ ಸಾಮರ್ಥ್ಯದೊಂದಿಗೆ ಲಭ್ಯ ಎಂದು ಕಂಪನಿ ಹೇಳಿದೆ.

Ramesh Babu

Journalist

Share
Published by
Ramesh Babu

Recent Posts

ಬಿಸಿಲ ಬೇಗೆಯ ಎಫೆಕ್ಟ್: 2 ತಿಂಗಳಲ್ಲಿ 2.82 ಲಕ್ಷ ಲೀಟರ್ ಬಿಯರ್ ಮಾರಾಟ!: ಕಳೆದ ವರ್ಷಕ್ಕಿಂತ ಶೇ.33ರಷ್ಟು ಏರಿಕೆ

ಬೆಂಗಳೂರು ಗ್ರಾಮಾಂತರ: ಈ ಬಾರಿ ಬೇಸಿಗೆಯ ಬಿರು ಬಿಸಿಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಯರ್ ಮಾರಾಟಕ್ಕೆ ಹೊಸ ಉತ್ತೇಜನ ನೀಡಿದೆ.…

49 minutes ago

ಆರ್‌ಒ ಘಟಕಗಳ ನೀರಿನ ಗುಣಮಟ್ಟ ಪ್ರಮಾಣಪತ್ರ ಪ್ರದರ್ಶನಕ್ಕೆ ಸದಸ್ಯರ ಆಗ್ರಹ

ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್‌ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…

12 hours ago

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ‍್ಯಾಂಕ್ ಪಡೆದ…

14 hours ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

14 hours ago

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ ರಾಜೀನಾಮೆ: ಜಿಲ್ಲಾಧಿಕಾರಿ ಅಂಗೀಕಾರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…

23 hours ago

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

1 day ago