ಐಫೋನ್ 16 ಆವೃತ್ತಿಯ ಮೊಬೈಲ್ ಮಾರುಕಟ್ಟೆಗೆ ಲಗ್ಗೆ: ಐಫೋನ್ 16 ಖರೀದಿಸಲು ಮುಗಿಬಿದ್ದ ಜನ: ಬೆಳಗ್ಗೆ 5 ಗಂಟೆಯಿಂದಲೆ ಐಫೋನ್ ಸ್ಟೋರ್ ಗಳ ಮುಂದೆ ಜನ ಜಮಾವಣೆ

ಮಹಾರಾಷ್ಟ್ರ: ಐಫೋನ್ 16 ಆವೃತ್ತಿಯ ಮೊಬೈಲ್ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ದೆಹಲಿ ಹಾಗೂ ಮುಂಬೈನ ಐಫೋನ್ ಸ್ಟೋರ್ ಗಳಲ್ಲಿ ಮಾತ್ರ ಲಭ್ಯವಿದ್ದು, ಇದೀಗ ಈ ಫೋನ್ ಖರೀದಿಸಲು ಬೆಳಗ್ಗೆ 5 ಗಂಟೆಯಿಂದಲೆ ಜನ ಜಮಾಯಿಸಿದ್ದಾರೆ.

‘ಮೇಕ್ ಇನ್ ಇಂಡಿಯಾ’ ಐಫೋನ್ 16 ಗಾಗಿ ಮುಂಗಡ ಆರ್ಡರ್ ನಲ್ಲಿ ಏರಿಕೆ ಕಂಡಿದೆ.

ಐಫೋನ್ 16 ಪ್ರೊ ಬೆಲೆ ₹1.19 ಲಕ್ಷ ಹಾಗೂ ಐಫೋನ್ 16 ಪ್ರೊ ಮ್ಯಾಕ್ಸ್ ಬೆಲೆ ₹1.44ಲಕ್ಷದಿಂದ ಲಭ್ಯ’ ಎಂದು ಕಂಪನಿ ಹೇಳಿದೆ.

ಐಫೋನ್ 16 ಮಾದರಿಗೆ ದೇಶ ಸೇರಿದಂತೆ ವಿದೇಶದಲ್ಲೂ ಸಾಕಷ್ಟು ಬೇಡಿಕೆಯಿದ್ದು, ದಾಖಲೆ ಪ್ರಮಾಣದಲ್ಲಿ ಮಾರಾಟವಾಗುವ ಸಾಧ್ಯತೆಯಿದೆ. ಅಲ್ಲದೇ ಹೊಸ 16 ಸರಣಿಯು ಹಿಂದಿನ ದಾಖಲೆಗಳನ್ನು ಮುರಿಯುವುದು ಖಚಿತ ಎಂದು ವರದಿಯಾಗಿದೆ..

ಐಫೋನ್ 16 ಪ್ರೊ ಹಾಗೂ ಐಫೋನ್ 16 ಪ್ರೊ ಮ್ಯಾಕ್ಸ್ ಫೋನ್‌ಗಳು 128ಜಿಬಿ, 256ಜಿಬಿ, 512ಜಿಬಿ ಹಾಗೂ 1 ಟಿಬಿ ಎಕ್ಸ್ಟ್ರನಲ್ ಸಾಮರ್ಥ್ಯದೊಂದಿಗೆ ಲಭ್ಯವಿದೆ. ಈವರೆಗಿನ ಐಫೋನ್‌ಗಳಲ್ಲೇ ಅತಿ ದೊಡ್ಡ ಡಿಸ್‌ಪ್ಲೇ 6.3 ಇಂಚು ಹಾಗೂ 6.9 ಇಂಚಿನ ಪರದೆಯುಳ್ಳ ಫೋನ್‌ಗಳು ಇವಾಗಿವೆ.

ಇದೇ ಮೊದಲ ಬಾರಿಗೆ ಹಿಂದಿನ ಆವೃತ್ತಿಯ ದುಬಾರಿ ಮಾದರಿಯ ಫೋನ್ ಬೆಲೆಗಿದ ಅಗ್ಗದ ಬೆಲೆಗೆ 16 ಸರಣಿಯ ಐಫೋನ್ ಪ್ರೊ ಸರಣಿ ಮಾರಾಟವಾಗುತ್ತಿರುವುದು ವಿಶೇಷವಾಗಿದೆ.

ಭಾರತದಲ್ಲಿ ತಯಾರಾದ ಐಫೋನ್ 16 ಹಾಗೂ ಐಫೋನ್ 16 ಪ್ಲಸ್ ಫೋನ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಐಫೋನ್ 16ರ ಬೆಲೆ ₹79,900ರಿಂದ ಆರಂಭವಾದರೆ, 16 ಪ್ಲಸ್ ಫೋನ್ ಬೆಲೆ ₹89,900ರಿಂದ ಲಭ್ಯ. ಈ ಫೋನ್‌ಗಳು 128ಜಿಬಿ, 256ಜಿಬಿ, 512ಜಿಬಿ ಎಕ್ಸ್ಟ್ರನಲ್ ಸಾಮರ್ಥ್ಯದೊಂದಿಗೆ ಲಭ್ಯ ಎಂದು ಕಂಪನಿ ಹೇಳಿದೆ.

Ramesh Babu

Journalist

Share
Published by
Ramesh Babu

Recent Posts

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ……..

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…

2 hours ago

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

1 day ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago