ಐಫೋನ್ 16 ಆವೃತ್ತಿಯ ಮೊಬೈಲ್ ಮಾರುಕಟ್ಟೆಗೆ ಲಗ್ಗೆ: ಐಫೋನ್ 16 ಖರೀದಿಸಲು ಮುಗಿಬಿದ್ದ ಜನ: ಬೆಳಗ್ಗೆ 5 ಗಂಟೆಯಿಂದಲೆ ಐಫೋನ್ ಸ್ಟೋರ್ ಗಳ ಮುಂದೆ ಜನ ಜಮಾವಣೆ

ಮಹಾರಾಷ್ಟ್ರ: ಐಫೋನ್ 16 ಆವೃತ್ತಿಯ ಮೊಬೈಲ್ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ದೆಹಲಿ ಹಾಗೂ ಮುಂಬೈನ ಐಫೋನ್ ಸ್ಟೋರ್ ಗಳಲ್ಲಿ ಮಾತ್ರ ಲಭ್ಯವಿದ್ದು, ಇದೀಗ ಈ ಫೋನ್ ಖರೀದಿಸಲು ಬೆಳಗ್ಗೆ 5 ಗಂಟೆಯಿಂದಲೆ ಜನ ಜಮಾಯಿಸಿದ್ದಾರೆ.

‘ಮೇಕ್ ಇನ್ ಇಂಡಿಯಾ’ ಐಫೋನ್ 16 ಗಾಗಿ ಮುಂಗಡ ಆರ್ಡರ್ ನಲ್ಲಿ ಏರಿಕೆ ಕಂಡಿದೆ.

ಐಫೋನ್ 16 ಪ್ರೊ ಬೆಲೆ ₹1.19 ಲಕ್ಷ ಹಾಗೂ ಐಫೋನ್ 16 ಪ್ರೊ ಮ್ಯಾಕ್ಸ್ ಬೆಲೆ ₹1.44ಲಕ್ಷದಿಂದ ಲಭ್ಯ’ ಎಂದು ಕಂಪನಿ ಹೇಳಿದೆ.

ಐಫೋನ್ 16 ಮಾದರಿಗೆ ದೇಶ ಸೇರಿದಂತೆ ವಿದೇಶದಲ್ಲೂ ಸಾಕಷ್ಟು ಬೇಡಿಕೆಯಿದ್ದು, ದಾಖಲೆ ಪ್ರಮಾಣದಲ್ಲಿ ಮಾರಾಟವಾಗುವ ಸಾಧ್ಯತೆಯಿದೆ. ಅಲ್ಲದೇ ಹೊಸ 16 ಸರಣಿಯು ಹಿಂದಿನ ದಾಖಲೆಗಳನ್ನು ಮುರಿಯುವುದು ಖಚಿತ ಎಂದು ವರದಿಯಾಗಿದೆ..

ಐಫೋನ್ 16 ಪ್ರೊ ಹಾಗೂ ಐಫೋನ್ 16 ಪ್ರೊ ಮ್ಯಾಕ್ಸ್ ಫೋನ್‌ಗಳು 128ಜಿಬಿ, 256ಜಿಬಿ, 512ಜಿಬಿ ಹಾಗೂ 1 ಟಿಬಿ ಎಕ್ಸ್ಟ್ರನಲ್ ಸಾಮರ್ಥ್ಯದೊಂದಿಗೆ ಲಭ್ಯವಿದೆ. ಈವರೆಗಿನ ಐಫೋನ್‌ಗಳಲ್ಲೇ ಅತಿ ದೊಡ್ಡ ಡಿಸ್‌ಪ್ಲೇ 6.3 ಇಂಚು ಹಾಗೂ 6.9 ಇಂಚಿನ ಪರದೆಯುಳ್ಳ ಫೋನ್‌ಗಳು ಇವಾಗಿವೆ.

ಇದೇ ಮೊದಲ ಬಾರಿಗೆ ಹಿಂದಿನ ಆವೃತ್ತಿಯ ದುಬಾರಿ ಮಾದರಿಯ ಫೋನ್ ಬೆಲೆಗಿದ ಅಗ್ಗದ ಬೆಲೆಗೆ 16 ಸರಣಿಯ ಐಫೋನ್ ಪ್ರೊ ಸರಣಿ ಮಾರಾಟವಾಗುತ್ತಿರುವುದು ವಿಶೇಷವಾಗಿದೆ.

ಭಾರತದಲ್ಲಿ ತಯಾರಾದ ಐಫೋನ್ 16 ಹಾಗೂ ಐಫೋನ್ 16 ಪ್ಲಸ್ ಫೋನ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಐಫೋನ್ 16ರ ಬೆಲೆ ₹79,900ರಿಂದ ಆರಂಭವಾದರೆ, 16 ಪ್ಲಸ್ ಫೋನ್ ಬೆಲೆ ₹89,900ರಿಂದ ಲಭ್ಯ. ಈ ಫೋನ್‌ಗಳು 128ಜಿಬಿ, 256ಜಿಬಿ, 512ಜಿಬಿ ಎಕ್ಸ್ಟ್ರನಲ್ ಸಾಮರ್ಥ್ಯದೊಂದಿಗೆ ಲಭ್ಯ ಎಂದು ಕಂಪನಿ ಹೇಳಿದೆ.

Ramesh Babu

Journalist

Share
Published by
Ramesh Babu

Recent Posts

ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…

4 minutes ago

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

3 hours ago

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

10 hours ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

20 hours ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

1 day ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

1 day ago