ಐಫೋನ್ 16 ಆವೃತ್ತಿಯ ಮೊಬೈಲ್ ಮಾರುಕಟ್ಟೆಗೆ ಲಗ್ಗೆ: ಐಫೋನ್ 16 ಖರೀದಿಸಲು ಮುಗಿಬಿದ್ದ ಜನ: ಬೆಳಗ್ಗೆ 5 ಗಂಟೆಯಿಂದಲೆ ಐಫೋನ್ ಸ್ಟೋರ್ ಗಳ ಮುಂದೆ ಜನ ಜಮಾವಣೆ

ಮಹಾರಾಷ್ಟ್ರ: ಐಫೋನ್ 16 ಆವೃತ್ತಿಯ ಮೊಬೈಲ್ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ದೆಹಲಿ ಹಾಗೂ ಮುಂಬೈನ ಐಫೋನ್ ಸ್ಟೋರ್ ಗಳಲ್ಲಿ ಮಾತ್ರ ಲಭ್ಯವಿದ್ದು, ಇದೀಗ ಈ ಫೋನ್ ಖರೀದಿಸಲು ಬೆಳಗ್ಗೆ 5 ಗಂಟೆಯಿಂದಲೆ ಜನ ಜಮಾಯಿಸಿದ್ದಾರೆ.

‘ಮೇಕ್ ಇನ್ ಇಂಡಿಯಾ’ ಐಫೋನ್ 16 ಗಾಗಿ ಮುಂಗಡ ಆರ್ಡರ್ ನಲ್ಲಿ ಏರಿಕೆ ಕಂಡಿದೆ.

ಐಫೋನ್ 16 ಪ್ರೊ ಬೆಲೆ ₹1.19 ಲಕ್ಷ ಹಾಗೂ ಐಫೋನ್ 16 ಪ್ರೊ ಮ್ಯಾಕ್ಸ್ ಬೆಲೆ ₹1.44ಲಕ್ಷದಿಂದ ಲಭ್ಯ’ ಎಂದು ಕಂಪನಿ ಹೇಳಿದೆ.

ಐಫೋನ್ 16 ಮಾದರಿಗೆ ದೇಶ ಸೇರಿದಂತೆ ವಿದೇಶದಲ್ಲೂ ಸಾಕಷ್ಟು ಬೇಡಿಕೆಯಿದ್ದು, ದಾಖಲೆ ಪ್ರಮಾಣದಲ್ಲಿ ಮಾರಾಟವಾಗುವ ಸಾಧ್ಯತೆಯಿದೆ. ಅಲ್ಲದೇ ಹೊಸ 16 ಸರಣಿಯು ಹಿಂದಿನ ದಾಖಲೆಗಳನ್ನು ಮುರಿಯುವುದು ಖಚಿತ ಎಂದು ವರದಿಯಾಗಿದೆ..

ಐಫೋನ್ 16 ಪ್ರೊ ಹಾಗೂ ಐಫೋನ್ 16 ಪ್ರೊ ಮ್ಯಾಕ್ಸ್ ಫೋನ್‌ಗಳು 128ಜಿಬಿ, 256ಜಿಬಿ, 512ಜಿಬಿ ಹಾಗೂ 1 ಟಿಬಿ ಎಕ್ಸ್ಟ್ರನಲ್ ಸಾಮರ್ಥ್ಯದೊಂದಿಗೆ ಲಭ್ಯವಿದೆ. ಈವರೆಗಿನ ಐಫೋನ್‌ಗಳಲ್ಲೇ ಅತಿ ದೊಡ್ಡ ಡಿಸ್‌ಪ್ಲೇ 6.3 ಇಂಚು ಹಾಗೂ 6.9 ಇಂಚಿನ ಪರದೆಯುಳ್ಳ ಫೋನ್‌ಗಳು ಇವಾಗಿವೆ.

ಇದೇ ಮೊದಲ ಬಾರಿಗೆ ಹಿಂದಿನ ಆವೃತ್ತಿಯ ದುಬಾರಿ ಮಾದರಿಯ ಫೋನ್ ಬೆಲೆಗಿದ ಅಗ್ಗದ ಬೆಲೆಗೆ 16 ಸರಣಿಯ ಐಫೋನ್ ಪ್ರೊ ಸರಣಿ ಮಾರಾಟವಾಗುತ್ತಿರುವುದು ವಿಶೇಷವಾಗಿದೆ.

ಭಾರತದಲ್ಲಿ ತಯಾರಾದ ಐಫೋನ್ 16 ಹಾಗೂ ಐಫೋನ್ 16 ಪ್ಲಸ್ ಫೋನ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಐಫೋನ್ 16ರ ಬೆಲೆ ₹79,900ರಿಂದ ಆರಂಭವಾದರೆ, 16 ಪ್ಲಸ್ ಫೋನ್ ಬೆಲೆ ₹89,900ರಿಂದ ಲಭ್ಯ. ಈ ಫೋನ್‌ಗಳು 128ಜಿಬಿ, 256ಜಿಬಿ, 512ಜಿಬಿ ಎಕ್ಸ್ಟ್ರನಲ್ ಸಾಮರ್ಥ್ಯದೊಂದಿಗೆ ಲಭ್ಯ ಎಂದು ಕಂಪನಿ ಹೇಳಿದೆ.

Ramesh Babu

Journalist

Share
Published by
Ramesh Babu

Recent Posts

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

6 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

1 day ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

1 day ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

2 days ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

2 days ago