ಐಫೋನ್ 16 ಆವೃತ್ತಿಯ ಮೊಬೈಲ್ ಮಾರುಕಟ್ಟೆಗೆ ಲಗ್ಗೆ: ಐಫೋನ್ 16 ಖರೀದಿಸಲು ಮುಗಿಬಿದ್ದ ಜನ: ಬೆಳಗ್ಗೆ 5 ಗಂಟೆಯಿಂದಲೆ ಐಫೋನ್ ಸ್ಟೋರ್ ಗಳ ಮುಂದೆ ಜನ ಜಮಾವಣೆ

ಮಹಾರಾಷ್ಟ್ರ: ಐಫೋನ್ 16 ಆವೃತ್ತಿಯ ಮೊಬೈಲ್ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ದೆಹಲಿ ಹಾಗೂ ಮುಂಬೈನ ಐಫೋನ್ ಸ್ಟೋರ್ ಗಳಲ್ಲಿ ಮಾತ್ರ ಲಭ್ಯವಿದ್ದು, ಇದೀಗ ಈ ಫೋನ್ ಖರೀದಿಸಲು ಬೆಳಗ್ಗೆ 5 ಗಂಟೆಯಿಂದಲೆ ಜನ ಜಮಾಯಿಸಿದ್ದಾರೆ.

‘ಮೇಕ್ ಇನ್ ಇಂಡಿಯಾ’ ಐಫೋನ್ 16 ಗಾಗಿ ಮುಂಗಡ ಆರ್ಡರ್ ನಲ್ಲಿ ಏರಿಕೆ ಕಂಡಿದೆ.

ಐಫೋನ್ 16 ಪ್ರೊ ಬೆಲೆ ₹1.19 ಲಕ್ಷ ಹಾಗೂ ಐಫೋನ್ 16 ಪ್ರೊ ಮ್ಯಾಕ್ಸ್ ಬೆಲೆ ₹1.44ಲಕ್ಷದಿಂದ ಲಭ್ಯ’ ಎಂದು ಕಂಪನಿ ಹೇಳಿದೆ.

ಐಫೋನ್ 16 ಮಾದರಿಗೆ ದೇಶ ಸೇರಿದಂತೆ ವಿದೇಶದಲ್ಲೂ ಸಾಕಷ್ಟು ಬೇಡಿಕೆಯಿದ್ದು, ದಾಖಲೆ ಪ್ರಮಾಣದಲ್ಲಿ ಮಾರಾಟವಾಗುವ ಸಾಧ್ಯತೆಯಿದೆ. ಅಲ್ಲದೇ ಹೊಸ 16 ಸರಣಿಯು ಹಿಂದಿನ ದಾಖಲೆಗಳನ್ನು ಮುರಿಯುವುದು ಖಚಿತ ಎಂದು ವರದಿಯಾಗಿದೆ..

ಐಫೋನ್ 16 ಪ್ರೊ ಹಾಗೂ ಐಫೋನ್ 16 ಪ್ರೊ ಮ್ಯಾಕ್ಸ್ ಫೋನ್‌ಗಳು 128ಜಿಬಿ, 256ಜಿಬಿ, 512ಜಿಬಿ ಹಾಗೂ 1 ಟಿಬಿ ಎಕ್ಸ್ಟ್ರನಲ್ ಸಾಮರ್ಥ್ಯದೊಂದಿಗೆ ಲಭ್ಯವಿದೆ. ಈವರೆಗಿನ ಐಫೋನ್‌ಗಳಲ್ಲೇ ಅತಿ ದೊಡ್ಡ ಡಿಸ್‌ಪ್ಲೇ 6.3 ಇಂಚು ಹಾಗೂ 6.9 ಇಂಚಿನ ಪರದೆಯುಳ್ಳ ಫೋನ್‌ಗಳು ಇವಾಗಿವೆ.

ಇದೇ ಮೊದಲ ಬಾರಿಗೆ ಹಿಂದಿನ ಆವೃತ್ತಿಯ ದುಬಾರಿ ಮಾದರಿಯ ಫೋನ್ ಬೆಲೆಗಿದ ಅಗ್ಗದ ಬೆಲೆಗೆ 16 ಸರಣಿಯ ಐಫೋನ್ ಪ್ರೊ ಸರಣಿ ಮಾರಾಟವಾಗುತ್ತಿರುವುದು ವಿಶೇಷವಾಗಿದೆ.

ಭಾರತದಲ್ಲಿ ತಯಾರಾದ ಐಫೋನ್ 16 ಹಾಗೂ ಐಫೋನ್ 16 ಪ್ಲಸ್ ಫೋನ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಐಫೋನ್ 16ರ ಬೆಲೆ ₹79,900ರಿಂದ ಆರಂಭವಾದರೆ, 16 ಪ್ಲಸ್ ಫೋನ್ ಬೆಲೆ ₹89,900ರಿಂದ ಲಭ್ಯ. ಈ ಫೋನ್‌ಗಳು 128ಜಿಬಿ, 256ಜಿಬಿ, 512ಜಿಬಿ ಎಕ್ಸ್ಟ್ರನಲ್ ಸಾಮರ್ಥ್ಯದೊಂದಿಗೆ ಲಭ್ಯ ಎಂದು ಕಂಪನಿ ಹೇಳಿದೆ.

Ramesh Babu

Journalist

Share
Published by
Ramesh Babu

Recent Posts

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

39 minutes ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

43 minutes ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

3 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

6 hours ago

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

8 hours ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…

12 hours ago